ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರಗೆ ವರ್ಗಾವಣೆಯಾಗಿದೆ. ಮಂಗಳೂರಿನ ಸಿಸಿಆರ್ಬಿಗೆ ವರ್ಗಾವಣೆಗೊಳಿಸಿ ಆದೇಶ ಹೊರಬಿದ್ದಿದೆ. ಇನ್ನು ಮುಂಡಗೋಡಿಗೆ ನೂತನ ಪಿಐ ಆಗಿ, ರಮೇಶ ಹನಾಪುರ ಆಗಮಿಸಲಿದ್ದಾರೆ. ಕಳೆದ ಎರಡು ವರ್ಷದಿಂದ ಮುಂಡಗೋಡಿನಲ್ಲಿ ಪಿಐ ಆಗಿ ರಂಗನಾಥ್ ನೀಲಮ್ಮನವರ್ ಕಾರ್ಯನಿರ್ವಹಿಸಿದ್ದರು.
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಮುಂಡಗೋಡ ತಾಲೂಕಿನ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಗಾಳಿಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನ ಹುನಗುಂದದಲ್ಲಿ ಭಾರೀ ಮಳೆಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿವೆ. ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಮರಗಳು ನೆಲಕ್ಕುರುಳಿವೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹುನಗುಂದ ಗ್ರಾಮದ ದೇಶಪಾಂಡೆನಗರದಲ್ಲಿ ಬಸವ್ವ ಮನಗೂಳಿ ಎಂಬುವವರ ಮನೆಯ ಹಿಂದಿನ ಮೇಲ್ಚಾವಣಿ ಹಾರಿ ಮನೆಯ ಮುಂದಿನ ರಸ್ತೆಗೆ ಬಂದು ಬಿದ್ದಿದೆ. ಮನೆಯಲ್ಲೇ ಪುಟ್ಟ ಪುಟ್ಟ ಮಕ್ಕಳೊಂದಿಗೆ ಇದ್ದ ಸಂದರ್ಭದಲ್ಲೇ ಇಂತಹ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಬದಲಾಗಿ, ಇಡೀ ಕುಟುಂಬ ರಾತ್ರಿಯಿಡಿ ಎಲ್ಲಿ ವಾಸಮಾಡುವುದು ಅನ್ನೋ ಚಿಂತೆಯಲ್ಲಿದೆ. ಮೇಲ್ಚಾವಣಿ ಹಾರಿಹೋದ ಹಿನ್ನೆಲೆಯಲ್ಲಿ, ಮನೆಯ ಒಳಗಡೆ ಮಳೆಯ ನೀರು ತುಂಬಿಕೊಂಡಿದ್ದು, ಕೆಸರುಮಯವಾಗಿದೆ. ಹೀಗಾಗಿ, ಮನೆಯ ಒಳಗಡೆ ವಾಸಮಾಡಲು ಸಾಧ್ಯವಿಲ್ಲದ ಸ್ಥಿತಿ ಇದೆ. ನೆಲಕ್ಕುರುಳಿದ ವಿದ್ಯುತ್ ಕಂಬಗಳು..! ಇನ್ನು ಇದೇ ಗ್ರಾಮದ ವಿರಕ್ತಮಠದ ಹತ್ತಿರ ಮರವೊಂದು ಬುಡಸಮೇತ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ....
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
ಹಾನಗಲ್: ಧರ್ಮಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರ ಬಾಲಕರು ನೀರುಪಾಲಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಸೃಜನ್ ಬ್ಯಾತನಾಳ (10), ಸಚಿನ್ ಬ್ಯಾತನಾಳ (12) ಇಬ್ಬರು ನೀರುಪಾಲಾದ ಬಾಲಕರಾಗಿದ್ದಾರೆ. ಇಬ್ಬರೂ ಸಹೋದರರು ಬೇಸಿಗೆ ರಜೆಗಾಗಿ, ಕಂಚಿನೆಗಳೂರು ಗ್ರಾಮದ ಸಂಬಂಧಿಕರ ಮನೆಗೆ ಇನಾಮ್ ನೀರಲಗಿಯಿಂದ ಬಂದಿದ್ದರು. ಹೀಗಾಗಿ, ಇಂದು ಧರ್ಮ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈಜು ಬಾರದೆ ಧರ್ಮ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಈಜಲು ತೆರಳಿದ್ದ ಯುವಕ ಸಾವು..! ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಮಂತಗಿ ಗ್ರಾಮದ ಬಳಿ ನಡೆದಿದೆ. ಉತ್ತರಪ್ರದೇಶ ಮೂಲದ ಪೈಜಾನ್ (21) ಎಂಬುವವನೇ ಮೃತಪಟ್ಟ ಯುವಕ ಎನ್ನಲಾಗಿದೆ. ಸಮ್ಮಸಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಸಲ್ಯೂನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಈತ,...
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆ ಭೀಕರ ಹತ್ಯೆ ಪ್ರಕರಣದಲ್ಲಿ ಸದ್ಯ 11 ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಅದ್ರಂತೆ, ಈ ಹತ್ಯೆ ಕೇಸನ್ನು ಗಂಭೀರವಾಗಿ ಪರಿಗಣಿಸಿರೋ ಪೊಲೀಸ್ರು, ಬಹುತೇಕ ಮುಂಡಗೋಡಿನಲ್ಲಿ ಇನ್ಮುಂದೆ ಕ್ರಿಮಿನಲ್ ಗಳಿಗೆ ಜಾಗವಿಲ್ಲ ಅಂತಾ ಖಡಕ್ ಎಚ್ಚರಿಕೆ ಕೊಡಲು ತಯಾರಾದ್ರಾ ಅಂತಾ ಅನಿಸ್ತಿದೆ. ಯಾಕಂದ್ರೆ, ಸದ್ಯ ಅರೆಸ್ಟ್ ಆಗಿರೋ ಆರೋಪಿಗಳ ಮನೆಗಳಮೇಲೆ ಇಂದು 7 ತಂಡಗಳಾಗಿ ಪೊಲೀಸ್ರು ದಾಳಿ ಮಾಡಿ ಮನೆ ಸರ್ಚ್ ಮಾಡಿದ್ದಾರೆ. ಬಂಧಿತರ ಮನೆ ಮೇಲೆ ದಾಳಿ..! ಅಂದಹಾಗೆ, ಮುಂಡಗೋಡ ಬಡ್ಡಿ ಮಾಫಿಯಾದ ಕಿಂಗ್ ಪಿನ್ NMD ಜಮೀರನ ಹತ್ಯೆ ಕೇಸಲ್ಲಿ, ನಿನ್ನೆಯಷ್ಟೇ ಪೊಲೀಸರು ದಾಳಿ ನಡೆಸಿ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಹತ್ಯೆಯಲ್ಲಿ ಕಂಟ್ರಿಮೇಡ್ ಪಿಸ್ತೂಲ್ ಬಳಸಲಾಗಿತ್ತು. ಅಲ್ದೆ ಈಗಾಗಲೇ 3 ಪಿಸ್ತೂಲ್ ಗಳನ್ನು, 6 ಸಜೀವ ಗುಂಡುಗಳನ್ನು ಪೊಲೀಸ್ರು ಆರೋಪಿಗಳಿಂದ ಜಪ್ತಿ ಮಾಡಿದ್ದರು. ಅಸಲು, ಎರಡು ವರ್ಷದ ಹಿಂದೆಯೇ ಹತ್ಯೆಗೆ ಪ್ಲ್ಯಾನ್ ರಚಿಸಿದ್ದ ಹಂತಕರು, ಅದಕ್ಕಾಗೇ ಅವತ್ತೇ ಕಂಟ್ರಿಮೇಡ್ ಪಿಸ್ತೂಲ್...
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ NMD ಜಮೀರ್ ಹತ್ಯೆ ಕೇಸಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನವಾಗಿದೆ. ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ಖಡಕ್ ತನಿಖೆಗೆ ಇಳಿದಿರೋ ತಂಡ, ಮತ್ತೆ ನಾಲ್ವರನ್ನು ಬಂಧಿಸಿದೆ. ಈ ಮೂಲಕ NMD ಹತ್ಯೆ ಕೇಸಲ್ಲಿ ಇದುವರೆಗೂ ಒಟ್ಟೂ 11ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ. ಇವರೇ ಆರೋಪಿಗಳು..! ಮುಂಡಗೋಡ ಕಿಲ್ಲೆ ಓಣಿಯ ಮಲ್ಲಿಕಜಹಾನ @ ಜಹೀರ ತಂದೆ ಶಬ್ಬೀರ ಶೇಖ್, ಮಹಮ್ಮದ ಸಾಧೀಕ ತಂದೆ ಅಬ್ದುಲ್ ರಜಾಕ ದರ್ಗಾವಾಲೆ ಮುಂಡಗೋಡ ಮಾರಿಕಾಂಬಾ ನಗರದ ಅಸಗರ ಅಲಿ ತಂದೆ ಮಕ್ತುಮ ಅಲಿ ದೊಡ್ಮನಿ , ಹಾಗೂ ಸಾಹೀಲ್ ತಂದೆ ಬಾಬಾಬುಡನ್ ಶೇಖ @ ನಂದಿಕಟ್ಟಿ ಎಂಬುವವರನ್ನು ಪೊಲೀಸ್ರು ಬಂಧಿಸಿದ್ದಾರೆ. ಪಿಸ್ತೂಲ್ ತರೋಕೆ ಹೋದವರಿವರು..! ಅಂದಹಾಗೆ, ಜಮೀರ್ ಹತ್ಯೆ ಕೇಸಲ್ಲಿ ಸದ್ಯ ಏ1 ಆರೋಪಿ ಮಂಜುನಾಥ್ ಕಾಜಗಾರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಇವ್ರು, NMD ಜಮೀರ್ ಹತ್ಯೆ ಕೇಸಲ್ಲಿ ಫಿಟ್ ಆಗಿದ್ದಾರೆ. ಅಲ್ದೆ, ಹತ್ಯೆ ಕೇಸಲ್ಲಿ ಬಳಸಲಾಗಿದ್ದ ಎರಡು ಪಿಸ್ತೂಲ್ ಗಳನ್ನು ಇವ್ರೇ ತರೋಕೆ...
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಮುಂಡಗೋಡ ಅರಣ್ಯ ಇಲಾಖೆಯಲ್ಲಿರೋ ಕೆಲ ತಿಮಿಂಗಿಲುಗಳಿಗೆ ಓರ್ವ ರೈತ ಸರಿಯಾದ ಶಾಸ್ತಿ ಮಾಡಿಸ್ತಿದಾನೆ. ತಾಲೂಕಿನ ಉಗ್ನಿಕೇರಿಯ ರೈತನೋರ್ವನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ DyRFO ಹಾಗೂ ಬೀಟ್ ಫಾರೆಸ್ಟ್ ಗಾರ್ಡ್ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಪರಿಣಾಮ ಹಳೆಯ ಮನೆಯಲ್ಲಿದ್ದ ಕಟ್ಟಿಗೆಗಳಿಗೆ ಪಾಸ್ ನೀಡಲು 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ಮೇಲೆ FIR ದಾಖಲಾಗಿದೆ. DyRFO ಬಸವರಾಜ್ ಮೊದಲನೇ ಆರೋಪಿ..! ಅಂದಹಾಗೆ, ಮುಂಡಗೋಡ ತಾಲೂಕಿನ ಯರೇಬೈಲ್ ಉಪವಲಯ ಅರಣ್ಯಾಧಿಕಾರಿ ಬಸವರಾಜ್ ಯಾದವಾಡ ಹಾಗೂ ಉಗ್ನಿಕೇರಿ ಬೀಟ್ ಫಾರೆಸ್ಟ್ ಗಾರ್ಡ್ ನಿಸಾರ್ ಪಾಶಾ ಇಬ್ಬರೂ ಸೇರಿ, ರೈತನಿಂದ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಹೊತ್ತಿದ್ದಾರೆ. ಹೀಗಾಗಿ ಇವರೀರ್ವರ ಮೇಲೆ ಈಗ ಲೋಕಾಯುಕ್ತ ಕಚೇರಿಯಲ್ಲಿ FIR ದಾಖಲಾಗಿದೆ. ಅಷ್ಟಕ್ಕೂ ದೂರಿನಲ್ಲಿ ಏನಿದೆ..? ಮುಂಡಗೋಡ ತಾಲೂಕಿನ ಉಗ್ನಿಕೇರಿ ಗ್ರಾಮದ ನಿವಾಸಿ ರಮೇಶ್ ವಾಲ್ಮೀಕಿ ಲೋಕಾಯುಕ್ತರಿಗೆ ನೀಡಿದ ದೂರಿನಲ್ಲಿ ಹೀಗೇ ಆರೋಪಿಸಿದ್ದಾರೆ. ಮುಂಡಗೋಡ...
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಲಾಮಾನ ಹತ್ಯೆ ಮಾಡಿದ ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಮೊನ್ನೆ ಎಪ್ರೀಲ್ 29 ರಂದು ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ ತಾಶಿ ದೊಂಡುಪ ಎಂಬಾತನನ್ನು ಹತ್ಯೆ ಮಾಡಿ, ಕೈಕಾಲು ಕಟ್ಟಿ ಧಾರವಾಡ ಹೊರವಲಯದಲ್ಲಿ ಶವ ಎಸೆದು ಹೋಗಿದ್ದ ಹಂತಕರನ್ನು ಧಾರವಾಡ ಪೋಲೀಸರು ಕೊನೆಗೂ ಬಂಧಿಸಿದ್ದಾರೆ. ಹಣಕ್ಕಾಗಿ ನಡೀತು ಕೊಲೆ..! ಅಂದಹಾಗೆ, ಸಾದಾ ಸಂಪನ್ನನಾಗಿದ್ದ ತಾಸಿ ದೊಂಡುಪ್ ಸದ್ಯ ಹೆಣವಾಗಿರೋದರ ಹಿಂದೆ ಝಣ ಝಣ ಕಾಂಚಾಣದ ಕಾರಣವಿದೆ. ಲಾಮಾನ ಬಳಿ ಹಣ ಇದೆ ಅಂತಾ ಆತನನ್ನ ಕಿಡ್ನ್ಯಾಪ್ ಮಾಡಿ, ಆತನ ಬಳಿ ನಯಾಪೈಸೆಯೂ ಸಿಗಲಿಲ್ಲ ಅಂದಾಗ, ಕೊಲೆ ಮಾಡಿ ಬಿಸಾಕಿ ಹೋಗಿದ್ದಾರೆ ಹಂತಕರು. ಅವ್ರು ಕಬ್ಬು ಕಟಾವ್ ಗ್ಯಾಂಗನವ್ರು..! ಅಸಲು, ಮುಂಡಗೋಡ ತಾಲೂಕಿಗೆ ಪ್ರತೀವರ್ಷವೂ ಕಬ್ಬು ಕಟಾವ್ ಮಾಡಲು ಮಹಾರಾಷ್ಟ್ರದಿಂದ ಗ್ಯಾಂಗ್ ಗಳು ಬರತ್ತೆ ಅಲ್ವಾ..? ಅಂತದ್ದೇ ಕಬ್ಬು ಕಟಾವ್ ಮಾಡುವ ಗ್ಯಾಂಗ್ ನವರೇ ಈ ಲಾಮಾನ ಹತ್ಯೆ ಮಾಡಿದ್ದಾರೆ. ಅಲ್ದೆ ಹತ್ಯೆ ಮಾಡಿ ಮಹಾರಾಷ್ಟ್ರ ಕಡೆ...
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅದರ ಜೊತೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. ಕೇರಳಂ ರಾಜ್ಯದಲ್ಲಿ ಹಾಗೂ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಹಿನ್ನೆಲೆಯಲ್ಲಿ ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷಗಳನ್ನು ಕೂಗಿ ಸಂಭ್ರಮಿಸಿದ್ರು.
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಪಶ್ಚಿಮ ಬಂಗಾಲ, ಅಸ್ಸಾಂ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹಿನ್ನೆಲೆಯಲ್ಲಿ ಮುಂಡಗೋಡಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಬಿಜೆಪಿಗರು ಚುನಾವಣಾ ಗೆಲುವಿಗೆ ಸಂಭ್ರಮಿಸಿದರು. ಜಯಘೋಷಗಳನ್ನು ಕೂಗಿ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ರಾಜ್ಯ ಮಾಧ್ಯಮ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಎಲ್ ಟಿ ಪಾಟೀಲ್ ಮತ್ತು ಅಶೋಕ್ ಚಲುವಾದಿ ಅನೇಕ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳು ಎರಡು ದಿನಗಳಿಂದ ಕಾಣೆಯಾಗಿದ್ದಾಳೆ. ದಾವಣಗೇರೆಯಿಂದ KSRTC ಬಸ್ ನಲ್ಲಿ ಮುಂಡಗೋಡಿಗೆ ಬರುತ್ತಿದ್ದ ಮಹಿಳೆ ಹರಿಹರದಿಂದ ನಾಪತ್ತೆಯಾಗಿದ್ದಾಳೆ. ಗಾಯತ್ರಿ ಸದಾನಂದ ರಾಯ್ಕರ್ ಎಂಬುವ ಮಹಿಳೆಯೇ ನಾಪತ್ತೆಯಾಗಿದ್ದು, ಯಾರಿಗಾದ್ರೂ ಇವರು ಕಂಡುಬಂದಲ್ಲಿ ತಕ್ಷಣವೇ ಈ ಕೆಳಗಿನ ನಂಬರಿಗೆ ಕರೆ ಮಾಡಲು ವಿನಂತಿಸಲಾಗಿದೆ. Mob No:7022471180 7204299031









