ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

 ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ರಾದ್ಧಾಂತಗಳು ಸದ್ಯಕ್ಕೆ ನಿಲ್ಲುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಇನ್ನೇನು ನಾಡಿದ್ದು ಡಿಸೆಂಬರ್ 26 ರಂದು ದಲಿತ ಹಾಗೂ ರೈತ ಮುಖಂಡ ಚಿದಾನಂದ ಹರಿಜನ ಧರಣಿ ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದ್ದಾರೆ. ಇತ್ತಿಚೆಗಷ್ಟೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರೋ ಶಿಕ್ಷಕ ದಾಸಪ್ಪ ಎಂಬುವವರ ಪರವಾಗಿ ಸತ್ಯಾಗ್ರಹ ಮಾಡಲು ಚಿದಾನಂದ ಹರಿಜನ್ ಮುಂದಾಗಿದ್ದು ಚಿಗಳ್ಳಿ ಕೆಲ ಗ್ರಾಮಸ್ಥರು ಹಾಗೂ SDMC ಅಧ್ಯಕ್ಷರು, ಸದಸ್ಯರಿಗೆ ಫೋಷಕರಿಗೆ ಬೇಸರ ತರಿಸಿದೆ. ಹೀಗಾಗಿ, ನಿನ್ನೆ ಅವ್ರೇಲ್ಲ ಸೇರಿಕೊಂಡು ಮುಂಡಗೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಪೊಲೀಸ್ ಇಲಾಖೆಗೆ, ತಹಶೀಲ್ದಾರ ರಿಗೆ ಮನವಿ ಸಲ್ಲಿಸಿದ್ದಾರೆ. ಶಾಲಾ ಆವರಣದಲ್ಲಿ ಧರಣಿ ಸತ್ಯಾಗ್ರಹಗಳನ್ನು ಮಾಡದಂತೆ ಕೇಳಿಕೊಂಡಿದ್ದಾರೆ. ಒಂದು ವೇಳೆ ದಲಿತ ಮುಖಂಡ ಚಿದಾನಂದ ಹರಿಜನ್ ರವರು ಡಿಸೆಂಬರ್ 26 ರಂದು ಧರಣಿ ಸತ್ಯಾಗ್ರಹ ಮಾಡಿದರೆ, ನಾವೂ ಕೂಡ ಅದೇ ಸ್ಥಳದಲ್ಲಿ ಪ್ರತಿಭಟನೆ, ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ. ಮುಂದೇ ಅದೇನೇ ಸಮಸ್ಯೆ ಆದ್ರೂ ಅವ್ರೇ ಜವಾಬ್ದಾರರು ಅಂತಾ ಮನವಿಯಲ್ಲಿ ತಿಳಿಸಿದ್ದಾರೆ....

ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಇಂದೂರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನಡೆಯಿತು. ಶಾಸಕ ಶಿವರಾಮ್ ಹೆಬ್ಬಾರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ರು. ಈ ವೇಳೆ ಈ ಹಿಂದಿನ ಅವಧಿಯಲ್ಲಿ ಸಹಕಾರ ಸಂಘದ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅಲ್ದೆ, ಆಡಳಿತ ಸಮಿತಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ರವರಿಗೆ ಸನ್ಮಾನಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಇಂದೂರ ಸೊಸೈಟಿಯ ಅಧ್ಯಕ್ಷ ಯಮನಪ್ಪ ಮಾರಂಬೀಡ, ಕೆಡಿಸಿಸಿ ನಿರ್ದೇಶಕ ಎಚ್.ಎಂ ನಾಯ್ಕ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡ ಪಾಟೀಲ್, ಇಂದೂರು ಸೊಸೈಟಿ ಉಪಾಧ್ಯಕ್ಷ ಅಲ್ಲಾವುದ್ದೀನ್ ಮುಂಡಗೋಡ, ಸದಸ್ಯರಾದ ಮಹ್ಮದ್ ದೇಸಳ್ಳಿ, ದೇವೇಂದ್ರ ಕೆಂಚಗೊಣ್ಣವರ್, ಉಮೇಶ್ ಹರ್ತಿ, ನಾಗಯ್ಯ ಹಿರೇಮಠ, ಮೋನ್ಸಿ ಥಾಮಸ್, ಶಿವಾನಂದ ಕಣಕಣ್ಣವರ್, ಬಸಣ್ಣ ಗಲಬಿ ಮುಖಂಡರಾದ ನಾಗಭೂಷಣ ಹಾವಣಗಿ, ಎಂ.ಎನ್.ದುಂಢಸಿ, ಸಿದ್ದಪ್ಪ ಹಡಪದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ. ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ. ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ...

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

 Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ‌ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು, ತಾಯವ್ವನ ದೇವಸ್ಥಾನದ ಸಮೀಪದ ಮಿನಿ ಬ್ರಿಡ್ಜ್ ನ ಪ್ರಪಾತಕ್ಕೆ ಕಾರು ಬಿದ್ದಿದೆ. ಕಾರು ಪ್ರಪಾತಕ್ಕೆ ಬಿದ್ದು ಕಾರಿನಲ್ಲಿದ್ದ ಗ್ರಾಮ ಲೆಕ್ಕಾಧಿಕಾರಿ ಗೋಪಾಲ ಎಂ. ಸ್ಥಳದಲ್ಲೇ ದುರಂತ ಸಾವುವಕಂಡಿದ್ದಾರೆ. ಗೋವಿಂದ ರಾಥೋಡ್ ಮತ್ತು ಮಂಜುನಾಥ ಇಬ್ಬರು ಗಂಭೀರ ಗಾಯಗಳಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಮುಂಡಗೋಡ ತಾಲೂಕಿನ ಗಡಿಭಾಗ, ತಡಸ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ರಾಜಾರೋಷವಾಗಿ ರಸ್ತೆಯ ಬದಿಯ ಕಾಡಲ್ಲಿ ಕುಳಿತಿರೋ ಚಿರತೆ ಕಂಡು ಜನ ಅಚ್ಚರಿಗೊಂಡಿದ್ದಾರೆ. ಚಿರತೆ ಕಾಣಿಸುತ್ತಿದ್ದಂತೆ ತಮ್ಮ ಮೊಬೈಲ್ ನಲ್ಲಿ ಚಿರತೆಯ ದೃಷ್ಯ ಸೆರೆಹಿಡಿದಿದ್ದಾರೆ. ಅಂದಹಾಗೆ, ಮುಂಡಗೋಡ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಮುಂಡಗೋಡಿನ ವಿಠ್ಠಲ್ ಬಾಳಂಬೀಡ ಹಾಗೂ ಗುಡ್ಡಪ್ಪ ಕಾತೂರ್ ಚಿರತೆ ಕಣ್ಣಿಗೆ ಬೀಳುತ್ತಿದ್ದಂತೆ, ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ ಅಂತಾ ಎಚ್ಚರಿಸಿದ್ದಾರೆ.

ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

Forest Smugglers; ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಳೆಕೊಪ್ಪ (ಕರ್ಕಲ ಜಡ್ಡಿ) ಹತ್ತಿರ ಎರಡು ಬೈಕ್ ನಲ್ಲಿ ಜಿಂಕೆ ಚರ್ಮ ಹಾಗೂ ಕಾಡು ಹಂದಿಯ ಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಹೆಡೆಮುರಿ‌ಕಟ್ಟಿದ್ದಾರೆ. ಬಾಳೆಕೊಪ್ಪದ ಕನಕಪ್ಪ ದುರ್ಗಪ್ಪ ಮಾದರ್, ಪರಶುರಾಮ್ ಕನಕಪ್ಪ ಮಾದರ್, ಸೊರಬ ತಾಲೂಕು ಕೋಡಿಕೊಪ್ಪದ ಸುರೇಶ ಬಿನ್ ದೇವಪ್ಪ, ಉಮೇಶ್ ಬಿನ್ ಗುಡ್ಡಪ್ಪ, ಶಿವಪುತ್ರಪ್ಪ ಬಿನ್ ಹನುಮಂತಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಎರಡು ಬೈಕ್, ಒಂದು ಜಿಂಕೆ ಚರ್ಮ, 3.9 ಕೆಜಿ ಕಾಡುಹಂದಿಯ ಮಾಂಸ ವಶಪಡಿಸಿಕೊಳ್ಳಲಾಗಿದೆ.

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

GOA FIRE ACCIDENT; ಪಣಜಿ (ಗೋವಾ): ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಪ್ರವಾಸಿಗರು ಸೇರಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್​ ಬೈ ರೋಮಿಯೋ ಲೇನ್ ಕ್ಲಬ್​ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್‌ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಗೋವಾ ಪೊಲೀಸರ ಹೇಳಿಕೆ ಪ್ರಕಾರ, ಉತ್ತರ ಗೋವಾದ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 25 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಸಿಬ್ಬಂದಿ ಸೇರಿದ್ದು, ಏಳು ಜನರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೆ, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯಿಂದ ತನಿಖೆ ಪ್ರಗತಿಯಲ್ಲಿದೆ. ಕಾನೂನು...

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಆದ್ರೆ ಅಷ್ಟೊತ್ತಿಗಾಗಲೇ ಬೆಂಕಿಯ ರೌದ್ರವಾತಾರ ಇಡೀ ಅಡ್ಡೆಯನ್ನೇ ಸುಟ್ಟು ಭಸ್ಮ ಮಾಡಿತ್ತು ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

Transfer of Sirsi AC; ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿಯವರನ್ಜು ಸರ್ಕಾರ ವಾರ್ಗಾವಣೆ ಮಾಡಿದೆ. ಅಸಲು, ಕಾವ್ಯಾರಾಣಿಯವರು ಬಂದು ಇನ್ನೂ ಎರಡು ವರ್ಷವಾಗಿಲ್ಲ, ಅವಧಿಗೂ ಮುಂಚೆಯ ಏಕಾಏಕಿ ವರ್ಗಾವಣೆ ಮಾಡಿರೋದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ‌. ಮುಂಡಗೋಡಿನ ಬಂಜಾರಾ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಎಸಿಯವರ ವರ್ಗಾವಣೆಯನ್ನು ಖಂಡಿಸಿದ್ದಾರೆ. ಶಿರಸಿ ವಿಭಾಗದಲ್ಲಿ ಎಸಿ ಕಾವ್ಯಾರಾಣಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದರು. ಹಿಂದುಳಿದವರ, ಬಡವರ ಪರವಾಗಿ ಸಾಲಷ್ಟು ಕೆಲಸ ಮಾಡುತ್ತಿದ್ದರು. ಅದೇಷ್ಟೇ ಹೊತ್ತಿನಲ್ಲಿ ಸಮಸ್ಯೆ ಹೊತ್ತು ಹೋದ್ರೂ ತಕ್ಷಣವೇ ಸೂಕ್ತವಾಗಿ ಸ್ಪಂಧಿಸುತ್ತಿದ್ದರು. ಆದ್ರೆ ಇಂತಹ ಅಧಿಕಾರಿಯನ್ನು ಏಕಾಏಕಿ ವರ್ಗಾವಣೆ ಮಾಡಿದ್ದು ನಮಗೆ ನೋವಾಗಿದೆ. ಇದು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳೊಗೆ ಬೆಲೆಯೇ ಇಲ್ಲದಂತಹ ಪರಿಸ್ಥಿತಿಯಾಗಿದ್ದು, ತಕ್ಷಣವೇ ಎಸಿ ಕಾವ್ಯಾರಾಣಿಯವರ ವರ್ಗಾವಣೆ ಆದೇಶ ರದ್ದು ಮಾಡಬೇಕು ಅಂತಾ ಶೇಖರ್‌ ಲಮಾಣಿ ಆಗ್ರಹಿಸಿದ್ದಾರೆ.