ಮುಂಡಗೋಡಿನ NMD ಜಮೀರ್ ಭೀಕರ ಹತ್ಯೆ ಕೇಸಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.. NMD ಯ ಬರ್ಬರ ಹತ್ಯೆಯಲ್ಲಿ ಬಳಸಲಾಗಿದ್ದ ಎರಡು ಕಂಟ್ರಿ ಮೇಡ್ ಪಿಸ್ತೂಲು ಬಳಕೆಯಾಗಲು ಕಾರಣನಾಗಿದ್ದವ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಆರೋಪಿಯನ್ನು ದೂರದ ದೆಹಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ ಪೊಲೀಸ್ರು. ಅಂದಹಾಗೆ, ಸದ್ಯ NMD ಹತ್ಯೆ ಕೇಸಲ್ಲಿ ಆರೋಪಿ ನಂಬರ್ 6 ಆಗಿ ಅಂದರ್ ಆಗಿದ್ದವನ ಹೆಸರು ದಿಲ್ ರಾಜ್..! ಅದು ಏಪ್ರಿಲ್ 24 ರ ಮಿಡ್ ನೈಟ್..! ಯಸ್, ಅವತ್ತು ಶುಕ್ರವಾರ ಏಪ್ರಿಲ್ 24 ರ ರಾತ್ರಿ ಸರಿ ಸುಮಾರು 11 ಗಂಟೆಯ ಹೊತ್ತು. ಮುಂಡಗೋಡಿನ ಬಸ್ ಸ್ಟ್ಯಾಂಡ್ ಎದುರಿನ ಸಾವಜಿ ಹೊಟೆಲ್ ನಲ್ಲಿ ಮಟನ್ ಕೈಮಾ ಸವಿಯಲು ಹೋಗಿದ್ದ NMD ಜಮೀರ್ ಬರ್ಬರವಾಗಿ ಹತ್ಯೆಯಾಗಿದ್ದ. ಊಟಕ್ಕೆ ಅಂತಾ ಕುಳಿತಿದ್ದವನ ಕಣ್ಣಿಗೆ ಖಾರದ ಪುಡಿ ಎರಚಿ ಕೊಚ್ಚಿ ಹಾಕಲಾಗಿತ್ತು. ಆ ಹೊತ್ತಲ್ಲಿ ಗುಂಡಿನ ಸದ್ದೂ ಕೂಡ ಕೇಳಿತ್ತು. ನಂತ್ರ ಪೊಲೀಸ್ರು ಬಂಧಿಸಿರೋ ಆರೋಪಿಗಳ ಜೊತೆ ಜೊತೆಗೆ...
Top Stories
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
ಆರ್.ಟಿ.ಓ. ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗ ರೆಡ್ಡಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಗಾಂಜಾ ಮಾರುತ್ತಿದ್ದ ಇಂದೂರಿನ ದಂಧೆಕೋರ ಆರೆಸ್ಟ್..!
ಇಂದಿನಿಂದ SSLC ಪರೀಕ್ಷೆ : ಬೆಳಗಾವಿ ವಿಭಾಗದಿಂದ 2,52,262 ವಿದ್ಯಾರ್ಥಿಗಳು, ಶಿರಸಿ-10172, ಕಾರವಾರ 9706 ವಿದ್ಯಾರ್ಥಿಗಳು..!
ಪಾಳಾ ಬಳಿ ಬೈಕ್ ಹಾಗೂ ಭಾರತ್ ಬೇಂಜ್ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಧಾರವಾಡ ರೂರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂಡಗೋಡಿನ ಟಿಬೇಟಿಯನ್ ಲಾಮಾ ಕ್ಯಾಂಪ್ ನಂಬರ್ 1ರ ಲಾಮಾನ(ಬೌದ್ದ ಸನ್ಯಾಸಿ) ಶವ ಪತ್ತೆಯಾಗಿದೆ. ಧಾರವಾಡದ ಹೊರವಲಯದ ಹೈವೇ ಪಕ್ಕದಲ್ಲಿ ಮೃತದೇಹ ರಕ್ತ ಸಿಕ್ತವಾಗಿ ದೊರೆತಿದ್ದು, ಲಾಮಾನ ಕಾಲಿಗೆ ಹಗ್ಗದಿಂದ ಕಟ್ಟಿದ್ದು, ಮುಖಕ್ಕೆ ಚಚ್ಚಿ ಭೀಕರವಾಗಿ ಕೊಲೆ ಮಾಡಿ ಬೀಸಾಕಿರೋ ಅನುಮಾನ ವ್ಯಕ್ತವಾಗಿದೆ. ಅಂದಹಾಗೆ, ಲಾಮಾ ಕ್ಯಾಂಪ್ ನಂಬರ್ 1 ರ ತಶಿ ದುಂಡುಪ್ (38) ಎಂಬುವನದ್ದೇ ಶವ ಅಂತಾ ಗುರುತಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣೆಯ ಕ್ರೈಂ ಟೀಂನ ಪೊಲೀಸರು ಮುಂಡಗೋಡಿಗೆ ಬಂದು ಮಾಹಿತಿ ಕಲೆ ಹಾಕಿದ್ದಾರೆ. ಅದ್ರಂತೆ ಮುಂಡಗೋಡ ಪೊಲೀಸರೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ಯಾಸಿನಾ ಕೊಲ್ಲುವಷ್ಟು ದುಷ್ಮನಿ ಏನಿತ್ತು..? ಅಷ್ಟಕ್ಕೂ, ಅಕ್ಷರಶಃ ಅಹಿಂಸಾ ಬೋಧನೆ ಮಾಡುವ ಬೌದ್ದ ಸನ್ಯಾಸಿಯನ್ನ ಇಷ್ಟೊಂದು ಭೀಕರವಾಗಿ ಹತ್ಯೆ ಮಾಡಿದ್ದು ಯಾಕೆ ಅನ್ನೋ ಅನುಮಾನ ಮೂಡಿದೆ. ಹಣಕ್ಕಾಗಿ ಲಾಮಾ ಹತ್ಯೆಯಾದ್ನಾ..? ಅಥವಾ ಇನ್ಯಾವುದೋ ಬೇರೆ ಕಾರಣವಿದೆಯಾ..? ಪೊಲೀಸರ ತನಿಖೆಯ ನಂತರವಷ್ಟೇ ಸತ್ಯಾಸತ್ಯತೆ ಹೊರಬರಬೇಕಿದೆ.
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಮುಂಡಗೋಡಿನಲ್ಲಿ ಗೃಹಬಳಕೆ ಸಿಲಿಂಡರಿಗಾಗಿ ಇಡೀ ತಾಲೂಕಿನ ಜನ ಹೈರಾಣಾಗಿದ್ದಾರೆ. ಬೆಳಿಗ್ಗೆ ಎದ್ದಕೂಡಲೇ ಮುಂಡಗೋಡಿನ HP ಗ್ಯಾಸ್ ಗೋಡೌನ ಎದುರು ಸಾಲುಗಟ್ಟಿ ನಿಲ್ಲುವ ಜನ ರೋಸಿಹೋಗಿದ್ದಾರೆ. ಹೀಗಾಗಿ, ಇವತ್ತು ಬುಧವಾರ ಬೆಳ್ಳಂಬೆಳಿಗ್ಗೆ ಮುಂಡಗೋಡಿನ HP GAS ಗೋಡೌನ್ ಎದುರು ಖಾಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಿದ್ರು. ಅಂದಹಾಗೆ, ಇಡೀ ಮುಂಡಗೋಡ ತಾಲೂಕಿನಾಧ್ಯಂತ ಸಿಲಿಂಡರ್ ಸಮಸ್ಯೆ ಎದುರಾಗಿದೆ. ಗ್ಯಾಸ್ ಸಿಲಿಂಡರ್ ಬುಕ್ ಮಾಡಿದಾಗಲೂ ಕಾಯ್ದು ಕಾಯ್ದು ಕುಳಿತು ಸಿಲಿಂಡರ್ ಪಡೆಯಲು ಮಹಿಳೆಯರೂ ಸೇರಿದಂತೆ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಬುಕ್ಮಾಡಿದಾಗಲೂ ನಮಗೆ ಸಿಲಿಂಡರ್ ಸಿಗುತ್ತಿಲ್ಲ ಅಂತಾ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಬಂದ HP GAS ನ ಬಸವರಾಜ್ ಓಸಿಮಠ ಸಾರ್ವಜನಿಕರಿಗೆ ಸಮಾಧಾನ ಪಡಿಸಲು ಯತ್ನಿಸಿದ್ರು. ಆದ್ರೆ ನಮಗೆ ತಕ್ಷಣವೇ ಸಿಲಿಂಡರ್ ಬೇಕು ಅಂತಾ ಸಾರ್ವಜನಿಕರು ಹಠ ಹಿಡಿದು ಪ್ರತಿಭಟನೆ ನಡೆಸಿದ್ರು.
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಕಾರವಾರ; ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ, ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ 41 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 17 ಗ್ರಾಮಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಸರಬರಾಜು ಮಾಡಲು 98 ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದ್ದು, ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬಂದಲ್ಲಿ ತ್ವರಿತವಾಗಿ ಸ್ಪಂದಿಸಿ, ನೀರು ಒದಗಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಪೈಪ್ ಲೈನ್ ಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗಂಟೆಯೊಳಗಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವತ್ತು “ಕತ್ತಲ ರಾತ್ರಿ” ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್ನಲ್ಲಿ, ಎಪ್ರಿಲ್ 24 ರ “ಕತ್ತಲ ರಾತ್ರಿ” ಯಲ್ಲಿ, ಊಟಕ್ಕೆ ಕುಳಿತಿದ್ದ NMD ಜಮೀರ್ ದರ್ಗಾವಾಲೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಭಯಾನಕವಾಗಿ ಹತ್ಯೆ ಮಾಡಿದ್ದರು. ಹೀಗಾಗಿ, ತಕ್ಷಣವೇ ಅಲರ್ಟ್ ಆಗಿದ್ದ ಮುಂಡಗೋಡ ಪೊಲೀಸರು ಮೂರು ತಂಡಗಳನ್ನು ರಚಿಸಿ, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪರಿಣಾಮ ಬೆಂಗಳೂರಿನ ನೆಲಮಂಗಲದ ಬಳಿ ಐವರು ಆರೋಪಿಗಳನ್ನು ಬಂಧಿಸಿ ತಂದಿದ್ದಾರೆ ಪೊಲೀಸ್ರು. ಇವ್ರೇ ಆರೋಪಿಗಳು..! ಮುಂಡಗೋಡ ತಾಲೂಕು ಸಾಲಗಾಂವಿಯ ಮಂಜುನಾಥ ನಾಗೇಂದ್ರ ಕಾಜಗಾರ(38) , ಇಂದಿರಾನಗರದ ಶ್ರೀಕಾಂತ ರಾಜಶೇಖರ ಕಿರಣ್ಣನವರ(22), ಧಾರವಾಡದ ಮಂಜುನಾಥ ವಿಷ್ಣು ಬೆಳಗಾಂವ್(20) ಅಭಿಷೇಕ ತಂದೆ ಮಲ್ಲಕಾರ್ಜುನ ಬಡಶೆಟ್ಟಿ(22), ದೀಪಕ ನಾಗರಾಜ ನವಲೆ, ಎಂಬುವ ಐವರು...
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ NMD ಜಮೀರ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯಾಗಿದೆ. ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೊಟೆಲ್ಲಿನಲ್ಲಿ ರಣಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊದಲಿಗೆ ಗುಂಡು ಹಾರಿಸಿ ನಂತರ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಇನ್ನು ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್ಐ ಮಂಜುನಾಥ ಗೌಡರ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಿರಸಿ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಇನ್ನು ಹತ್ಯೆಯಾದ NMD ಜಮೀರನ ಶವವನ್ನು ಅಂಬುಲೆನ್ಸ್ ಮೂಲಕ ತಾಲೂಕಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಮುಖ ಸುದ್ದಿ; ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
ಮುಂಡಗೋಡ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಇಲ್ಲಿನ NMD ಜಮೀರ್ ಅಹ್ಮದ್ ದರ್ಗಾವಾಲೆಯನ್ನ ದುಷ್ಕರ್ಮಿಗಳು ಕೊಚ್ಚಿ ಭೀಕರ ಹತ್ಯೆ ಮಾಡಿದ್ದಾರೆ. ಮುಂಡಗೋಡ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೊಟೆಲ್ ನಲ್ಲಿ ಘಟನೆ ನಡೆದಿದೆ. ಹಲವು ದುಷ್ಕರ್ಮಿಗಳ ತಂಡ ಹೊಟೇಲ್ ನಲ್ಲಿ ಕುಳಿತಿದ್ದ ಜಮೀರ್ ಗೆ ಮೊದಲು ಗುಂಡು ಹಾರಿಸಿದೆ. ನಂತರ ಕುತ್ತಿಗೆ ಸೀಳಿ ಭೀಕರವಾಗಿ ಹತ್ಯೆ ಮಾಡಿ ಹೋಗಿದ ಅನ್ನೋ ಅನುಮಾನ ವ್ಯಕ್ತವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
SSLC ಫಲಿತಾಂಶ ಪ್ರಕಟವಾಗಿದೆ. ಹುನಗುಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿ ಬಸವರಾಜ್ ಬಿಸನಳ್ಳಿ 616 ಅಂಕ ಪಡೆಯುವ ಮೂಲಕ ಮುಂಡಗೋಡ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಅದ್ರಂತೆ ಮುಂಡಗೋಡಿನ ಬ್ಲೂಮಿಂಗ್ ಬಡ್ಸ್ ಶಾಲೆತ ವಿದ್ಯಾರ್ಥಿ ರಿಷಿಕ್ ರಮೇಶ್ ಭೋವಿ 607 ಅಂಕ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಇನ್ನು ಕರಗಿನಕೊಪ್ಪ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಸಿಂಚನಾ ನಿಂಗಪ್ಪ ಬಾರ್ಕರ 606 ಅಂಕ ಪಡೆದು ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಕಾರವಾರ; ಭಾರತೀಯ ಜನಗಣತಿ ಪ್ರಯುಕ್ತ ಮನೆಗಳ ಪಟ್ಟಿ ಮತ್ತು ಮನೆಗಳ ಗಣತಿ ಕಾರ್ಯವು ಏ.16 ರಿಂದ ಮೇ.15 ರವರೆಗೆ ನಡೆಯಲಿದ್ದು, ಸದ್ರಿ ಕಾರ್ಯಕ್ಕೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 3216 ಮನೆಯ ಪಟ್ಟಿಯ ಬ್ಲಾಕ್ಗಳಿದ್ದು, ಈ ಬ್ಲಾಕ್ಗಳಿಗೆ 3255 ಗಣತಿದಾರರು ಹಾಗೂ 586 ಮೇಲ್ವಿಚಾರಕರಿಗೆ ಗಣತಿ ಕಾರ್ಯವನ್ನು ನಿರ್ವಹಿಸಿಲು ನೇಮಕ ಮಾಡಲಾಗಿದೆ. ಸದ್ರಿಯವರು ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಮಾಹಿತಿಯನ್ನುಯ ಒದಗಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಿಳಿಸಿದೆ. ಸಾರ್ವಜನಿಕರು ನೀಡಿದ ಮಾಹಿತಿಯು ಸುರಕ್ಷಿತ ಹಾಗೂ ಗೌಪ್ಯವಾಗಿ ಉಳಿಯುತ್ತದೆ. ಈ ಗಣತಿಯ ಮಾಹಿತಿಯನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಪ್ರಧಾನ ಗಣತಿ ಅಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಪುಟ್ಟ ಆಕಳ ಕರುವೊಂದನ್ನು ದುಷ್ಕರ್ಮಿಗಳು ಭಯಾನಕವಾಗಿ ಕೊಚ್ಚಿ ಹಾಕಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಅಥವಾ ಕಾಡುಪ್ರಾಣಿಗಳ ದಾಳಿ ಮಾಡಿದ್ವಾ..? ಒಟ್ನಲ್ಲಿ ಪುಟ್ಟ ಆಕಳ ಕರುವಿನ ಹೊಟ್ಟೆಯ ಕರುಳುಗಳು ಹೊರ ಬಂದಿವೆ. ಕರು ಜೀವನ್ಮರಣದ ನಡುವೆ ಒದ್ದಾಡುತ್ತಿದೆ. ಅಂದಹಾಗೆ, ಇಂದೂರು ಗ್ರಾಮದ ದೇವಮ್ಮ ಯಲ್ಲಪ್ಪ ಬೂಚಳ್ಳಿ ಎಂಬುವವರ ಗದ್ದೆಯ ಮನೆಯಲ್ಲಿ ಕೃತ್ಯ ನಡೆದಿದೆ. ಎಂದಿನಂತೆ, ಇಂದು ಮುಂಜಾನೆ ಮನೆಯಲ್ಲಿ ಆಕಳು ಮತ್ತು ಕರುವನ್ನು ಕಟ್ಟಿ ಕೆಲಸಕ್ಕೆ ಹೋದಾಗ ಕೃತ್ಯ ನಡೆದಿದೆ. ಹಾಗಂತ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದು ಮೊದಲಲ್ಲ..! ಅಸಲು, ಈ ಕುಟುಂಬದ ಮೇಲೆ, ಈ ಕುಟುಂಬದ ಮೂಕ ಪ್ರಾಣಿಗಳ ಮೇಲೆ ಅದ್ಯಾವ ಕ್ರೂರ ಮನುಷ್ಯರ ದೃಷ್ಟಿ ಬಿದ್ದಿದೆಯೋ ಗೊತ್ತಿಲ್ಲ. ಹೀಗೆ ಆಕಳ ಕರುವನ್ನು ಕೊಂದು ಹಾಕಿದ್ದು ಇದು ಮೂರನೇ ಬಾರಿಯಂತೆ. ಎರಡು ತಿಂಗಳ ಹಿಂದೆ ಇದೇ ರೀತಿ ಒಂದು ಆಕಳ ಕರು ಸತ್ತಿದೆ. ಮತ್ತೆ 4 ತಿಂಗಳ ಹಿಂದೆ...









