ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು ನಿಗದಿತ 8 ಓವರ್‌ಗಳಲ್ಲಿ ಮೊತ್ತವನ್ನು ಕಲೆಹಾಕಿತ್ತು. ಈ ಗುರಿಯನ್ನು ಬೆನ್ನಟ್ಟಿದ ಶಿವಶಕ್ತಿ ತಂಡವು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ, ಕೇವಲ 7 ಓವರ್‌ಗಳಲ್ಲಿಯೇ ಗೆಲುವಿನ ದಡ ಸೇರುವ ಮೂಲಕ ಜಯಭೇರಿ ಬಾರಿಸಿತು. ಒಟ್ಟೂ 8 ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ವಿಜೇತ ಶಿವಶಕ್ತಿ ತಂಡವು ಆಕರ್ಷಕ ಟ್ರೋಫಿಯೊಂದಿಗೆ 1,55,555 ರೂ. ಗಳ ಬೃಹತ್ ನಗದು ಬಹುಮಾನವನ್ನು ಪಡೆದು ಸಂಭ್ರಮಿಸಿತು. ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟ ಶಿವಂ...

KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!

KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!

KDCC ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾ ಜಿದ್ದಿನ ಹಣಾಹಣಿ ಏರ್ಪಟ್ಟು, ಅಂತಿಮವಾಗಿ ಜೊಯಿಡಾದ ಕೃಷ್ಣ ದೇಸಾಯಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ KDCC ಬ್ಯಾಂಕಿನ ಚುನಾವಣೆ ಎರಡು ಘಟಾನುಘಟಿ ನಾಯಕರ ನಡುವೆ ಜಿದ್ದು ಏರ್ಪಟ್ಟಿತ್ತು. ಮಾಜಿ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ತಂಡದ ನಡುವೆ ನಡೆದ ನೇರ ಹಣಾಹಣಿಯಲ್ಲಿ ಹೆಬ್ಬಾ‌ರ್ ತಂಡ ಜಯಗಳಿಸಿತ್ತು. 16 ನಿರ್ದೇಶಕ ಸ್ಥಾನಕ್ಕಾಗಿ ನಡೆದ ಚುನಾವವಣೆಯಲ್ಲಿ ಹೆಬ್ಬಾರ್ ತಂಡದ 11 ನಿರ್ದೇಶಕರು ಆಯ್ಕೆಯಾದರೆ, ಸಚಿವರ ತಂಡದ ಕೇವಲ 5 ನಿರ್ದೇಶಕರು ಗೆದ್ದು ಈ ಅಂತರ್ಯುದ್ಧದಲ್ಲಿ ವೈದ್ಯರ ಟೀಂ ಸೋತು ಮಕಾಡೆ ಮಲಗಿತ್ತು. ಈ ಚುನಾವಣೆಯಲ್ಲಿ ಹೆಬ್ಬಾರ್ ಮತ್ತೊಮ್ಮೆ ತನ್ನ ಚುನಾವಣಾ ನೈಪುಣ್ಯತೆಯನ್ನು ತೋರಿಸಿದ್ದರು. ಕೆಡಿಸಿಸಿ ಯ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕೆಲ ಕ್ಷೇತ್ರದ ಅಭ್ಯರ್ಥಿಗಳು ನ್ಯಾಯಾಲಯದ ಮೋರೆ ಹೋದ ಪರಿಣಾಮ ಅಂತಿಮ ಫಲಿತಾಂಶ...

ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ

ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ

ಕಾರವಾರ: ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್, ಡ್ರೈನೇಜ್ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ತಿಳಿಸಿದರು. ಅವರು ಭಾನುವಾರ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮುರುಡೇಶ್ವರದಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುರುಡೇಶ್ವರದಲ್ಲಿ ಈ ವರ್ಷ ಭಸ್ಮರ್ಚನೆ, ಗೋಮಾತೆ ಪೂಜೆ, ಸಮುದ್ರ ಆರತಿ, ಲಕ್ಷ ಬಿಲ್ವರ್ಚನೆ ಮತ್ತು ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಕಾರ್ಯಕ್ರಮ ಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಧಿಗಳು ಭಾಗವಹಿಸಿದ್ದಾರೆ, ಜಿಲ್ಲೆಯಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. ಜಿಲ್ಲೆಯ ಮುರುಡೇಶ್ವರ, ಗೋಕರ್ಣ, ಗುಣವಂತೇಶ್ವರ, ಧಾರೇಶ್ವರ ಮತ್ತು ಶೇಜೇಶ್ವರದಲ್ಲಿನ ಶಿವನ ದೇವಾಲಯಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು. ಮುರುಡೇಶ್ವರ ನನ್ನ ಜನ್ಮ ಭೂಮಿ ಹಾಗೂ ಕರ್ಮ ಭೂಮಿ, ಮುರುಡೇಶ್ವರ ದೇವರ ಆಶೀರ್ವಾದದಿಂದ...

ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!

ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!

ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದೆ. ಪ್ರಚಂಡ ಬಹುಮತದೊಂದಿಗೆ..! 2023ರ ಮೇ 20 ರಂದು ಪ್ರಚಂಡ ಬಹುಮತದೊಂದಿಗೆ ಸಿಎಂ ಸಿದ್ದರಾಮಯ್ಯ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವ ಮೂಲಕ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಸಾವಿರ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ, ನಕ್ಸಲ್‌ ಮುಕ್ತ ರಾಜ್ಯ ಘೋಷಣೆ, ಒಳ ಮೀಸಲಾತಿ ಜಾರಿ, ರೈತರ ಪರ ದಿಟ್ಟ ನಿರ್ಧಾರಗಳು, ಕಂದಾಯ ಇಲಾಖೆಯಲ್ಲಿ ಸಾಲು-ಸಾಲು ಸುಧಾರಣೆ, ಹಗರಣ...

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!

ಕಾರವಾರ; ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ನಗರಸ್ಥಳಿಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ಖಾಸಗಿ ಬಾವಿಗಳು, ಬಾಡಿಗೆ ಬೋರ್ ವೆಲ್ ಗಳನ್ನು ಬಳಸಿಕೊಳ್ಳುವುದು, ಟ್ಯಾಂಕರ್ ಮೂಲಕ ನೀರಿ ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು. ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪಶುಪಾಲನಾ...

ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!

ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಬ್ರವರಿ 14 ಮತ್ತು 15 ರಂದು ಶಾಖದ ಅಲೆಯ ವಾತಾವರಣವಿರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಈ ಕೆಳಕಂಡಂತೆ ಎಚ್ಚರವಹಿಸಲು ತಿಳಿಸಿದೆ. ಉಷ್ಣ ಅಲೆ ಸಂದರ್ಭದಲ್ಲಿ ಏನು ಮಾಡಬೇಕು..? ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು, ದಾಹವಾಗದಿದ್ದರೂ ನೀರನ್ನು ಸೇವಿಸಬೇಕು, ಓ.ಆರ್.ಎಸ್, ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು ಮುಂತಾದ ದ್ರವಗಳನ್ನು ಸೇವಿಸಬೇಕು, ಹಗುರವಾದ, ತೆಳುವಾದ ಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು, ತಲೆ ಮತ್ತು ಮುಖವನ್ನು ಟೋಪಿ, ಛತ್ರಿ, ಗಮಚಾ ಅಥವಾ ರುಮಾಲಿನಿಂದ ಮುಚ್ಚಿಕೊಳ್ಳಬೇಕು, ಸಾಧ್ಯವಾದಷ್ಟು ತೀವ್ರ ಬಿಸಿಲಿನ ಸಮಯದಲ್ಲಿ (ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ) ಹೊರಗೆ ಹೋಗುವುದನ್ನು ತಪ್ಪಿಸಬೇಕು, ಹೊರಗೆ ಕೆಲಸ ಮಾಡುವಾಗ ನೆರಳಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಬೇಕು, ಮಕ್ಕಳು, ವೃದ್ಧರು, ಗರ್ಭಿಣಿಯರು ಮತ್ತು ಅಸ್ವಸ್ಥರಿಗೆ ವಿಶೇಷ ಕಾಳಜಿ ವಹಿಸಬೇಕು. ದೇಹದಲ್ಲಿ ತಲೆಸುತ್ತು, ಅತಿಯಾದ ದೌರ್ಬಲ್ಯ, ವಾಂತಿ, ಜ್ವರದ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು, ಮನೆ ಮತ್ತು...

ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ

ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ

ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕೆಂಪುಕೋಟೆ ದಾಳಿ ಮತ್ತು ಜೈಶ್ ನಂಟು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸಲ್ಲಿಸಲಾದ ಇತ್ತೀಚಿನ ವರದಿಯ ಪ್ರಕಾರ, ನವೆಂಬರ್ 9 ರಂದು ನವದೆಹಲಿಯ ಕೆಂಪುಕೋಟೆಯ ಮೇಲೆ ನಡೆದ ದಾಳಿಯ ಹೊಣೆಯನ್ನು ಜೈಶ್-ಎ-ಮೊಹಮ್ಮದ್ ಹೊತ್ತುಕೊಂಡಿದೆ ಎಂದು ಸದಸ್ಯ ರಾಷ್ಟ್ರವೊಂದು ಮಾಹಿತಿ ನೀಡಿದೆ. ಈ ಭೀಕರ ದಾಳಿಯಲ್ಲಿ 15 ಜನರು ಮೃತಪಟ್ಟಿದ್ದರು. ಯುನೆಸ್ಕೋ ಪರಂಪರೆಯ ತಾಣ ಮತ್ತು ಭಾರತದ ಸಾರ್ವಭೌಮತ್ವದ ಸಂಕೇತವಾಗಿರುವ ಕೆಂಪುಕೋಟೆಯ ಮೇಲೆ ಉಗ್ರರು ಕಣ್ಣಿಟ್ಟಿರುವುದು ಪ್ರಾದೇಶಿಕ ಭದ್ರತೆಯ ದೃಷ್ಟಿಯಿಂದ ಗಂಭೀರ ವಿಷಯವಾಗಿದೆ ಎಂದು ಹೇಳಿದೆ. ಜಮಾತ್-ಉಲ್-ಮುಮಿನಾತ್’: ಹೊಸ ಮಹಿಳಾ ಘಟಕ ಜೈಶ್ ಸಂಘಟನೆಯ...

ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!

ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!

ಗ್ರಾಮ ಪಂಚಾಯತ್ ಗಳು ಸ್ಥಳಿಯ ಸಾರ್ವಜನಿಕರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸುವ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ಎಸ್ ವೈದ್ಯ ಹೇಳಿದರು. ಅವರು ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಗ್ರಾಮದ ಜನತೆಯ ಸಮಸ್ಯೆ ಗಳನ್ನು ಗ್ರಾಮಗಳಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಸರ್ಕಾರವು ಹಲವು ಸೇವೆಗಳನ್ನು ಪoಚಾಯತ್ ಮೂಲಕವೇ ನೀಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಪoಚಾಯತ್ ಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ ಅವುಗಳನ್ನು ಬಗೆಹರಿಸಿಕೊಡಬೇಕು ಎಂದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ, ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಜನರ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲಾಗಿದ್ದು ಈ ಭಾಗದ ಕಾಲೇಜಿನ ಕಟ್ಟಡಕ್ಕೂ ಅನುದಾನ ಒದಗಿಸಿದೆ. ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಶಾಂತಾ...

ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!

ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!

  ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್ ಬರಲಿದ್ದಾರೆ‌. ಈ ಹಿಂದೆ ಪಿಎಸ್ ಐ ಆಗಿದ್ದ ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಗೌಡರ್ ನಿಯುಕ್ತಿಗೊಂಡಿದ್ದಾರೆ‌. ಅಸಲು, ಕಳೆದ ಕೆಲವೇ ತಿಂಗಳುಗಳ ಹಿಂದೆ ಮುಂಡಗೋಡ ಠಾಣೆಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ಯಲ್ಲಾಲಿಂಗ್ ಕುನ್ನೂರ್ ವರ್ಗಾವಣೆಯಾಗಿ ಯಲ್ಲಾಪುರದಿಂದ ಬಂದಿದ್ದರು.ಆದ್ರೆ, ತೀವ್ರ ಅನಾರೋಗ್ಯದಿಂದ ಬಳಲಿದ ಅವ್ರು ಕಳೆದ ಮಂಗಳವಾರ ನಿಧನರಾಗಿದ್ದರು. ಹೀಗಾಗಿ, ಖಾಲಿ ಇದ್ದ ಹುದ್ದೆಗೆ ಮಂಜುನಾಥ್ ಗೌಡರ್ ರನ್ನು ನೇಮಕಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ‌.  

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!

ಶ್ರೀ ಕ್ಷೇತ್ರ ಮೈಲಾರ: ಸಂಪಾಯಿತಲೇ ಪರಾಕ್. ಇದು ನಾಡಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಯ 125ನೇ ಕಾರ್ಣಿಕೋತ್ಸವ ನುಡಿ. ಮೈಲಾರಲಿಂಗೇಶ್ವರ ಸ್ವಾಮಿ ಮೈಲಾರ ಪುಣ್ಯ ಭೂಮಿ ಡೆಂಕಣ ಮರಡಿಯಲ್ಲಿ ಲಕ್ಷಾಂತರ ಭಕ್ತರ ಸಮೂಹದ ಮಧ್ಯೆ ತುಪ್ಪ ಸವರಿದ 20 ಅಡಿ ಎತ್ತರದ ಐತಿಹಾಸಿಕ ಬಿಲ್ಲನ್ನೇರಿದ ಗೊರವಯ್ಯ ಕಾರ್ಣಿಕದ ರಾಮಣ್ಣ ದಶ ದಿಕ್ಕುಗಳತ್ತ ನೋಡುತ್ತ ಸದ್ದಲೇ.. ಎಂದು ಕೂಗಿದ ಕೂಡಲೇ ಕಾರ್ಣಿಕದ ಸ್ಥಳದ ಡೆಂಕಣ ಮರಡಿಯಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು, ಸೇರಿದಂತೆ ಪಶು, ಪಕ್ಷಿಗಳೆಲ್ಲ ಕ್ಷಣ ಕಾಲ ಮೌನವಾಗಿದ್ದವು. ಆಗ ಕಾರ್ಣಿಕದ ಗೊರವಯ್ಯ ಸಂಪಾಯಿತಲೇ ಪರಾಕ್‌ ಎಂದು ನಾಡಿನ ಭವಿಷ್ಯ ನುಡಿದ. ನಾಡಿನ ನಾನಾ ಕಡೆಗಳಿಂದ ಆಗಮಿಸಿದ್ದ 10 ಲಕ್ಷಕ್ಕೂ ಹೆಚ್ಚು ಭಕ್ತರು, ಕಾರ್ಣಿಕ ನುಡಿ ಆಲಿಸಿ ಪುನೀತರಾದರು. ಕಾರ್ಣಿಕೋತ್ಸವ ಮುಗಿದ ಕೂಡಲೇ ಕಾರ್ಣಿಕೋತ್ಸವದ ನಾನಾ ಗೂಡಾರ್ಥಗಳನ್ನು ತಮ್ಮೊಳಗೆ ತಾವು ಚರ್ಚಿಸುತ್ತಿರುವುದು ಕಂಡು ಬಂತು. ಈ ಭವಿಷ್ಯ ನುಡಿಯು ಕೃಷಿ, ವಾಣಿಜ್ಯ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಕ್ಕೆ ಹೆಚ್ಚು ಅನ್ವಯವಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ....