ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು ಜಿಲ್ಲೆಯಲ್ಲಿ ಇದುವರೆಗೆ 11,91,548 ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದ್ದು, ಶೇ.96.87 ಸಾಧನೆಯೊಂದಿಗೆ ಫಾರ್ಮ್ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು,ಈಗಾಗಲೇ 11,58,776 ಮಂದಿಯ ಮ್ಯಾಪಿಂಗ್ ಮಾಡಿದ್ದು, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 59,123 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ. ಹಳಿಯಾಳ ಕ್ಷೇತ್ರದಲ್ಲಿ ಒಟ್ಟು 1,87,543 ಮತದಾರರ ಪೈಕಿ 1,73,750 ನಮೂನೆಗಳನ್ನು ವಿತರಿಸಲಾಗಿದ್ದು, 14,375 ನಮೂನೆಗಳು ಗಣಕೀಕೃತಗೊಂಡಿವೆ. ಕಾರವಾರ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರ ಪೈಕಿ 2,22,950 ನಮೂನೆಗಳನ್ನು ವಿತರಿಸಲಾಗಿದ್ದು,9024 ನಮೂನೆಗಳು ಗಣಕೀಕೃತಗೊಂಡಿವೆ. ಕುಮಟಾ ಕ್ಷೇತ್ರದಲ್ಲಿ ಒಟ್ಟು 1,92,055 ಮತದಾರರ ಪೈಕಿ 1,92,054 ನಮೂನೆಗಳನ್ನು ವಿತರಿಸಲಾಗಿದ್ದು, 15,078 ನಮೂನೆಗಳು ಗಣಕೀಕೃತಗೊಂಡಿವೆ. ಭಟ್ಕಳ ಕ್ಷೇತ್ರದಲ್ಲಿ ಒಟ್ಟು 2,31,778 ಮತದಾರರ ಪೈಕಿ 2,23,064 ನಮೂನೆಗಳನ್ನು ವಿತರಿಸಲಾಗಿದ್ದು,8,670 ನಮೂನೆಗಳು ಗಣಕೀಕೃತಗೊಂಡಿವೆ. ಶಿರಸಿ ಕ್ಷೇತ್ರದಲ್ಲಿ ಒಟ್ಟು 2,05,743 ಮತದಾರರ ಪೈಕಿ 1,95,617 ನಮೂನೆಗಳನ್ನು ವಿತರಿಸಲಾಗಿದ್ದು, 5175 ನಮೂನೆಗಳು...
Top Stories
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ
ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!
ಉತ್ತರ ಕನ್ನಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನೆ: ಸಚಿವ ಯು. ಟಿ. ಖಾದರ್ ಅಧ್ಯಕ್ಷತೆಯಲ್ಲಿ ಸಭೆ..! ಏನೇಲ್ಲಾ ಚರ್ಚೆ ಆಯ್ತು ಗೊತ್ತಾ..?
ಕುಮಟಾ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಯು. ಟಿ. ಖಾದರ್ ಭೇಟಿ: ವ್ಯವಸ್ಥೆಗಳ ಸಮಗ್ರ ಪರಿಶೀಲನೆ
ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡದ ಈ ತಾಲೂಕಿನಲ್ಲಿ ಇಂದು, ಶಾಲೆಗಳಿಗೆ ರಜೆ ಘೋಷಣೆ..!
ಹಣ ಕಟ್ಟಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳೇ ಗಮನಿಸಿ..! ಕಟ್ಟಿದ ಹಣ ವಾಪಸ್ ಬೇಕಾ..? ಹೀಗೆ ಮಾಡಿ..!
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಮುಂಡಗೋಡ ಠಾಣೆಗೆ ಪಿಎಸ್ಐ ಬಸವರಾಜ್ ಮಬನೂರು ರೀ ಎಂಟ್ರಿಯಂತೆ..? ಕ್ರೈಂ ಪಿಎಸ್ಐ ಆಗಿ ಮತ್ತೆ ಬರ್ತಿದ್ದಾರಂತೆ ಹೌದಾ..?
ಮುಂಡಗೋಡ, ಕುಸೂರಿನ 29 ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವೀಧರ ಯುವಕ ನಾಪತ್ತೆ, ದೂರು ದಾಖಲು..!
ಮುಂಡಗೋಡಿನಲ್ಲಿ ಇಂದು ಶಾಸಕ ಭೀಮಣ್ಣ ನಾಯ್ಕ್ ನೇತೃತ್ವದಲ್ಲಿ, ಕಾಂಗ್ರೆಸ್ನಿಂದ ಎಸ್ಐಆರ್ (SIR) ಕುರಿತು ವಿಶೇಷ ಸಭೆ..!
ಮುಂದಿನ 6 ದಿನಗಳ ಕಾಲ ಉತ್ತರ ಕನ್ನಡ ಸೇರಿ, ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ..!
ಜೋಗೇಶ್ವರಹಳ್ಳ ಶಾಲೆ ಆವರಣದಲ್ಲಿ ಯುವಕನ ಸಾವು ಕೇಸ್; ಸ್ಥಳಕ್ಕೆ BEO ಭೇಟಿ, ಕಟ್ಟು ನಿಟ್ಟಿನ ಕ್ರಮ..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!!
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಮುಂಡಗೋಡ: ತಾಲೂಕಿನಲ್ಲಿ ಇಂದು ಕೂಡ (ಜುಲೈ 7, 2026) ಅತಿ ಹೆಚ್ಚು ಮಳೆ ಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಆಯ್ದ 5 ಗ್ರಾಮಗಳ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಿಸಿ ಮುಂಡಗೋಡ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಆದೇಶ ಹೊರಡಿಸಿದ್ದಾರೆ. ಮುಂಡಗೋಡ ತಹಶೀಲ್ದಾರರ ಗಮನಕ್ಕೆ ತಂದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕೆಳಗಿನ ಶಾಲೆಗಳಿಗೆ ಮಾತ್ರ ಇಂದು ರಜೆ ನೀಡಲಾಗಿದೆ ಅಂತ ಬಿಇಒ ಸುಮಾ ಜಿ. ಪಬ್ಲಿಕ್ ಫಸ್ಟ್ ನ್ಯೂಸ್ ಗೆ ತಿಳಿಸಿದ್ದಾರೆ.. ಇಂದು ರಜೆ ಇರುವ ಶಾಲೆ, ಅಂಗನವಾಡಿ..! ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿಕೊಪ್ಪ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಂಬಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುರ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ (ಮಳಗಿ), ನಿತ್ಯಜ್ಯೋತಿ ಪಬ್ಲಿಕ್ ಶಾಲೆ, ಕಾತೂರ ಹಾಗೂ ಈ ಎಲ್ಲಾ ಗ್ರಾಮಗಳ ಅಂಗನವಾಡಿಗಳಿಗೆ ಇಂದು ರಜೆ ನೀಡಲಾಗಿದೆ. ಇನ್ನು, ತಾಲೂಕಿನ ಉಳಿದ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು...
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 7 ರಿಂದ ಮುಂದಿನ ಎರಡು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ (IMD) ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಐದು ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜುಲೈ 7, 2026ರ ಮಂಗಳವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವ ತಾಲೂಕುಗಳಿಗೆ ರಜೆ..? ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಇರಲಿದೆ. ಮಕ್ಕಳ ಸುರಕ್ಷತೆಗೆ ಆದ್ಯತೆ..! ಧಾರಾಕಾರ ಮಳೆಯಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅಡಚಣೆ ಅಥವಾ ಅನಾಹುತಗಳು ಸಂಭವಿಸಬಾರದು ಎಂಬ ಮುನ್ನೆಚ್ಚರಿಕೆಯಿಂದ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ಆದೇಶ ನೀಡಿದ್ದಾರೆ. ಅಲ್ಲದೆ, ರಜೆ ಘೋಷಿಸಲಾಗಿರುವ ದಿನದ...
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಜುಲೈ 6, 2026 ರಂದು ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದೆ. ಮುಂಬರುವ ಎರಡು ದಿನಗಳವರೆಗೆ ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಎಲ್ಲೇಲ್ಲಿ..? ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಯಾದ ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ 204.5 ಮಿ.ಮೀ ಗಿಂತಲೂ ಹೆಚ್ಚಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಆರೆಂಜ್ ಅಲರ್ಟ್ ಎಲ್ಲೇಲ್ಲಿ..? ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ವಿಜಯಪುರ ಮುಂತಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ (Orange Alert) ಮುನ್ಸೂಚನೆ ನೀಡಲಾಗಿದೆ. ಗುಡುಗು ಸಹಿತ ಗಾಳಿ..! ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ ಗಂಟೆಗೆ...
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಕಾರನ್ನು ಓವರ್ಟೇಕ್ ಮಾಡಲು ಹೋಗಿ ಸ್ಕೂಟಿಯೊಂದು ಎದುರಿನಿಂದ ಬಂದ ಕೆಎಸ್ಆರ್ಟಿಸಿ (KSRTC) ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ದುರ್ಘಟನೆ ರವಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ-52ರ ಚಿಕ್ಕಮಾವಳ್ಳಿ ಕ್ರಾಸ್ ಬಳಿ ನಡೆದಿದೆ. ಹಳೆ ಹುಬ್ಬಳ್ಳಿ ನಿವಾಸಿಗಳಾದ ಮಂಜುನಾಥ (27) ಹಾಗೂ ಸುಮೀತ್ (18) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಪಘಾತ ನಡೆದಿದ್ದು ಹೇಗೆ? ಕಾರವಾರದಿಂದ ಸಿಂಧನೂರಿಗೆ ತೆರಳಿ ಮರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (ನೊಂದಣಿ ಸಂಖ್ಯೆ: KA-31 F-1664) ಚಿಕ್ಕಮಾವಳ್ಳಿ ಕ್ರಾಸ್ ಬಳಿ ಬರುತ್ತಿದ್ದಾಗ, ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸ್ಕೂಟಿ (ನೊಂದಣಿ ಸಂಖ್ಯೆ: KA-63 EB-8690) ತನ್ನ ಮುಂಭಾಗದಲ್ಲಿ ಸಾಗುತ್ತಿದ್ದ ಕಾರನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಓವರ್ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್ಗೆ ಸ್ಕೂಟಿ ನೇರವಾಗಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಭೀಕರ ಅಪಘಾತ ಸಂಭವಿಸಿ ಇಬ್ಬರೂ ಸವಾರರು ದುರ್ಮರಣ ಹೊಂದಿದ್ದಾರೆ. ಹೆಲ್ಮೆಟ್ ಧರಿಸದ ಸವಾರರು..! ಅಪಘಾತದ ಸಮಯದಲ್ಲಿ...
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಮುಂಡಗೋಡ: ತಾಲೂಕಿನಲ್ಲಿ ಇಂದು (ದಿನಾಂಕ: 06-07-2026) ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಾಲೂಕಿನ ನಿರ್ದಿಷ್ಟ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಮಳೆಯ ಕಾರಣದಿಂದಾಗಿ ತಾಲೂಕಿನ ಈ ಕೆಳಗಿನ ಮೂರು ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಅಂಗನವಾಡಿ ಕೇಂದ್ರ ಉಮ್ಮಚಗಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾಗೂ ಅಂಗನವಾಡಿ ಕೇಂದ್ರ ಶಾನುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಬೆಡಸಗಾಂವ್ ಇಡೀ ತಾಲೂಕಿನ ಶಾಲೆಗಳಿಗೆ ರಜೆ ಇಲ್ಲ..! ಇಡೀ ತಾಲೂಕಿನ ಶಾಲೆಗಳಿಗೆ ರಜೆ ಇರುವುದಿಲ್ಲ, ಕೇವಲ ಈ ಮೂರು ಶಾಲೆಗಳಿಗೆ ಮಾತ್ರ ರಜೆ ಅನ್ವಯಿಸಲಿದೆ ಎಂದು ಬಿಇಒ (BEO) ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 5ರಿಂದ, ಜುಲೈ 9ರ ವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲಾಡಳಿತವು ಈಗಾಗಲೇ ಮುಂಗಾರು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ಕೆಳಗಿನ ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ತುರ್ತು ಕಾರ್ಯಾಚರಣೆ ಕೇಂದ್ರ..! ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಹವಾಮಾನದ ನಿರಂತರ ಮಾಹಿತಿಗಾಗಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸುದ್ದಿ ಮಾಧ್ಯಮಗಳನ್ನು ಗಮನಿಸಬಹುದಾಗಿದೆ. ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ..! ಬಲವಾದ ಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು. ಈಗಾಗಲೇ...
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
ಇನ್ಸ್ಟಾಗ್ರಾಂ (Instagram) ಮೂಲಕ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು, ಆಕೆಯನ್ನು ಪುಸಲಾಯಿಸಿ, ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಮುಂಡಗೋಡಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪೋಕ್ಸೋ (POCSO) ಹಾಗೂ ಬಿ.ಎನ್.ಎಸ್ ಕಾಯ್ದೆಯಡಿ ಕೇಸು ದಾಖಲಾಗಿದೆ. ದೂರಿನಲ್ಲಿ ಏನಿದೆ..? ಅಸಲು, ಮುಂಡಗೋಡ ತಾಲೂಕಿನ ಇಂದೂರು ನಿವಾಸಿಯಾದ ಮಂಜುನಾಥ ಯಲ್ಲಪ್ಪ ವಾಲಿಕಾರ (25) ಎಂಬಾತನೇ ಅತ್ಯಾಚಾರದ ಆರೋಪಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ, 17 ವರ್ಷ 1 ತಿಂಗಳ ಪ್ರಾಯದ ಅಪ್ರಾಪ್ತ ಬಾಲಕಿಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿತ್ತು. ಈ ಪರಿಚಯದ ಲಾಭ ಪಡೆದು ಆರೋಪಿಯು ಬಾಲಕಿಯೊಂದಿಗೆ ಸಲುಗೆಯಿಂದ ಇದ್ದ ಎನ್ನಲಾಗಿದೆ. ಮೊದಲ ಘಟನೆ..! ಕಳೆದ ಜೂನ್ 14, 2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಮುಂಡಗೋಡ ಪಟ್ಟಣದ ಫಾರೆಸ್ಟ್ ಇಲಾಖೆಯ ಗಾರ್ಡನ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತಾ ಬಾಲಕಿಯ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಮಾಹಿತಿ...
ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ
ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮದ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ಜೋಗೇಶ್ವರ ಹಳ್ಳದ ವೃದ್ಧನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಜೋಗೇಶ್ವರಹಳ್ಳದ ನಿವಾಸಿ ಮುರುಗಯ್ಯ ಚನ್ನವೀರಯ್ಯ ಹಿರೇಮಠ (63) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮಗ ಹೇಳೋ ಪ್ರಕಾರ ಏನಾಯ್ತು..? ಮೃತರ ಮಗನಾದ ನಾಗರಾಜ ಮುರುಗಯ್ಯ ಹಿರೇಮಠ (30) ಅವರು ಮುಂಡಗೋಡ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ಅವರ ತಂದೆ ಮುರುಗಯ್ಯನವರು ದಿನಾಂಕ 04/07/2026 ರಂದು ರಾತ್ರಿ 09:00 ಗಂಟೆಗೆ ಮನೆಯ ಹಿತ್ತಲಿನಲ್ಲಿ ಮಲಗಿಕೊಂಡಿದ್ದರು. ಆದರೆ, ದಿನಾಂಕ 05/07/2026 ರ ಸಾಯಂಕಾಲ 06:00 ಗಂಟೆಯ ನಡುವಿನ ಸಮಯದಲ್ಲಿ ಅವರು ಸಾಲಗಾಂವ ಗ್ರಾಮದ ಸಾಲಗಾಂವ ಕೆರೆಯ ದಂಡೆಯ ನೀರಿನಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರಂತೆ. ಯಾವುದೇ ಸಂಶಯವಿಲ್ಲ ಎಂದ ಮಗ..! ತಮ್ಮ ತಂದೆಯ ಮರಣದಲ್ಲಿ ಯಾವುದೇ ರೀತಿಯ ಸಂಶಯವಿರುವುದಿಲ್ಲ ಎಂದು ಮಗ ನಾಗರಾಜ ಅವರು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಮೃತರ ದೇಹವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮುಂದಿನ ತನಿಖೆಗಾಗಿ ಪೊಲೀಸರಿಗೆ ವಿನಂತಿ...
ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!
ಅಂಕೋಲಾ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಾಲೂಕಿನ ವರದರಾಜ್ ಹೋಟೆಲ್ ಸಮೀಪ ನಡೆದಿದೆ. ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವರನ್ನು ಎಸ್ಕಾರ್ಟ್ ಮಾಡಿಕೊಂಡು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿ ಸವಾರ, ಅಲಗೇರಿ ಮೂಲದ ಸಂದೀಪ್ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸಚಿವ ಯು.ಟಿ. ಖಾದರ್ ಅವರು ವಾಹನ ನಿಲ್ಲಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿ, ಅವರನ್ನು ತಕ್ಷಣ ಅಂಕೋಲ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದೊರಕುವಂತೆ ವ್ಯವಸ್ಥೆ ಮಾಡಿದರು. ಗಾಯಾಳುಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.









