ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!

ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!

ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ...

ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!

ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!

ಗುತ್ತಿಗೆದಾರನಿಂದ ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ನಾ ಕಾವೂಂಗಾ, ನಾ ಕಾನೇ ದೂಂಗಾ ಅಂತ ಜಪ ಮಾಡುವ ಬಿಜೆಪಿಗೆ ಭಾರೀ ಮುಜುಗರ ತಂದಿಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎ ಗಳಾದ ಮಂಜುನಾಥ್ ಹಾಗೂ ಗುರು ಎಂಬುವ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಖಾಸಗಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನದ ಆಸ್ಪತ್ರೆಯಾಗಿದೆ. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡಾ ಆಗಿದ್ದಾರೆ. ಈಗ ಕಮಿಷನ್ ಹಣಕ್ಕೆ ಕೈಯೊಡ್ಡಿದಾಗಲೇ...

ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?

ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?

ಅದು ಅಕ್ಷರಶಃ ಇಡೀ ಮುಂಡಗೋಡ ತಾಲೂಕನ್ನೇ ಬೆಚ್ಚಿ ಬೀಳಿಸಿರೋ ಮಹಿಳೆಯ ಮರ್ಡರ್ ಕೇಸ್, ಮುಂಡಗೋಡ ಪೊಲೀಸರಿಗೆ ಅಕ್ಷರಶಃ ಸವಾಲಾಗಿದೆ. ಕೊಳಗಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರೋ ರುಂಡವಿಲ್ಲದ ಮಹಿಳೆಯ ಶವ ಭೀಕರ ಹತ್ಯೆಯ ಕರಾಳತೆಗೆ ಸಾಕ್ಷಿಯಾಗಿದೆ. ಅದೇಲ್ಲಿಯೋ‌ ಭಯಾನಕವಾಗಿ ಮರ್ಡರ್ ಮಾಡಿ, ರುಂಡ ಚಂಡಾಡಿ ಜಸ್ಟ್ ದೇಹವನ್ನು ಮಾತ್ರ ಕೊಳಗಿಯ ಅರಣ್ಯಕ್ಕೆ ತಂದು ಎಸೆದು ಹೋದ್ರಾ ಹಂತಕರು..? ಅಥವಾ ಮತ್ತೇನಾದ್ರೂ ಬೇರೆಯದ್ದೇ ಕಾರಣಕ್ಕೆ ಇಂತಹದ್ದೊಂದು ಭೀಕರ ಹತ್ಯೆ ನಡೆದು ಹೋಯ್ತಾ..? ಗೊತ್ತಿಲ್ಲ. ಎರಡು ದಿನಗಳಾಯ್ತಾ..? ಅಸಲು, ಫೆ‌.20 ರ, ಶುಕ್ರವಾರ ಸಂಜೆ ಸಿಕ್ಕಿರೋ ಭಯಾನಕ ಶವ, ಬಹುಶಃ ಎರಡು ದಿನಗಳ ಹಿಂದೆ ಅದೇಲ್ಲಿಯೊ ಹತ್ಯೆ ಮಾಡಿ ಇಲ್ಲಿ ತಂದು ಬೀಸಾಕಿರೋ ಅನುಮಾನವಿದೆ. ಹಾಗೆ ನೋಡಿದ್ರೆ, ಶವದ ಹತ್ತಿರ ಕೊರಳಲ್ಲಿ ಧರಿಸುವ ಲಿಂಗ ಸಿಕ್ಕಿದೆ. ಬಿಟ್ಟರೆ ಪೊಲೀಸರಿಗೆ ಸಹಕಾರಿಯಾಗಬಲ್ಲ ಯಾವೊಂದೂ ಕುರುಹುಗಳೂ ಸಿಕ್ಕಿರೋ ಮಾಹಿತಿ ಇಲ್ಲ. ಇನ್ನು, ಯಾರಿಗೂ ಪರಿಚಯ ಆಗದೇ ಇರಲಿ ಅಂತಾ ಮಹಿಳೆಯ ರುಂಡವನ್ನೇ ಬೇರ್ಪಡಿಸಿ ಮುಂಡವನ್ನಷ್ಟೇ ಎಸೆದಿದ್ದಾರೆ ಹಂತಕರು. ಹೀಗಾಗಿ,...

ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?

ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?

ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಸಿಕ್ಕಿದೆ. ಅದ್ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ಇಲ್ಲಿ ಬೀಸಾಡಿ ಹೋಗಿರೋ ಸಂಶಯ ವ್ಯಕ್ತವಾಗಿದೆ‌. ಅಸಲು, ಮಹಿಳೆಯ ಶವ ಅಕ್ಷರಶಃ ಬೆತ್ತಲೆಯಾಗಿದೆ. ಈ ಶವದ ಹಿಂದೆ ಹಲವು ಭೀಕರತೆಯ ಅನುಮಾನಗಳು ಗರಿಗೆದರಿಕೊಂಡಿವೆ. ಏನಿಲ್ಲವೆಂದರೂ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಅದೆಲ್ಲೊ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರೋ ಅನುಮಾನ ಇದೆ. ಅಥವಾ ಅದೆ ಸ್ಥಳದಲ್ಲೇ ಮಹಿಳೆಯ ಜೀವ ತೆಗದಿರಬಹುದಾದ ಅನುಮಾನವೂ ಇದೆ. ಸದ್ಯ ಮುಂಡಗೋಡ ಪೊಲೀಸರು ಸದ್ಯ ಸ್ಥಳಕ್ಕೆ ಭೇಟಿ‌ಜನನ ನೀಡಿ ಪರೀಶೀಲನೆ ನಡೆಸಿದ್ದಾರೆ‌. ಶವ ಯಾರದ್ದು..? ಇಲ್ಲಿಗೆ ಹೇಗೆ ಬಂತು..? ಈ ಸಾವಿನ ಅಸಲೀ ಕಾರಣ ಏನು..? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ತನಿಖೆಗೆ ಇಳಿದಿದ್ದಾರೆ. ಸ್ಥಳದಲ್ಲಿ ಕತ್ತಲೆ ಆವರಿಸಿದ್ದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳುತ್ತಿರೊ ಪೊಲೀಸ್ರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!

ಕಾರವಾರ: ಜಿಲ್ಲೆಯ ಗುಡ್ಡಗಾಡು ಪ್ರದೇಶಗಳು ಮತ್ತು ಪ.ಜಾತಿ ಮತ್ತು ಪಂಗಡದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಪ್ರದೇಶಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ತಿಂಗಳು ಪಡಿತರ ಪಡೆಯಲು ತಮ್ಮ ವಾಸಸ್ಥಳದಿಂದ ಅತ್ಯಂತ ದೂರ ಕ್ರಮಿಸಬೇಕಾದ ಸಾರ್ವಜನಿಕರಿಗೆ ಅನುಕೂಲವಾಗುವಂತೆ, ನಿಗಧಿತ ಮಾರ್ಗಸೂಚಿಯನ್ವಯ ಸಮೀಪದ ಪ್ರದೇಶಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತರೆಯುವ ಕುರಿತಂತೆ ಪರಿಶೀಲನೆ ನಡೆಸಬೇಕು, ಈಗಾಗಲೇ ಹೊಸ ನ್ಯಾಯಬೆಲೆ ಅಂಗಡಿ ತರೆಯಲು ಮನವಿ ಸಲ್ಲಿಸಿರುವ ಸಾರ್ವಜನಿಕರ ಮನವಿಗಳನ್ನು ಕೂಡಾ ಪರಿಗಣಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಈಗಾಗಲೇ ನಿಗಧಿತ ಸಂಖ್ಯೆಗಿಂತ ಹೆಚ್ಚಿನ ಪಡಿತರ ಚೀಟಿಗಳನ್ನು ಹೊಂದಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಪಡಿತರ ಪಡೆಯಲು ದೂರ ಪ್ರದೇಶದ ಸಮಸ್ಯೆಯಿದ್ದಲ್ಲಿ , ಹೆಚ್ಚುವರಿ ಪಡಿತರ...

ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!

ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!

ಮುಂಡಗೋಡ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜನ ವೇದಿಕೆ ಕಾರ್ಯಕರ್ತರು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದ್ದಾರೆ. ಅಂದಹಾಗೆ, ಜನ ವೇದಿಕೆ ಕರ್ನಾಟಕ ಜನಾರೋಗ್ಯ ಚಳುವಳಿ ಮೂಲಕ ಕರ್ನಾಟಕ ರಾಜ್ಯದ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧ್ಯಯನವನ್ನು ಮಾಡಿದ್ದು ಅದರಲ್ಲಿ ಮುಖ್ಯವಾಗಿ ಕಂಡುಬಂದದ್ದು ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ನೇಮಕದಲ್ಲಿ ಕೊರತೆ ಇದೆ. ಅತಿ ಮುಖ್ಯವಾದ 104 ತರಹದ ಔಷಧಿ ವಿತರಣೆ, ಅಂಬುಲೆನ್ಸ್ ಸೇವೆ, ಹೆರಿಗೆ ಸೇವೆ ಹೀಗೆ ಮುಖ್ಯವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಆರೋಗ್ಯ ಸೇವೆಯು ಸಮರ್ಪಕವಾಗಿ ದೊರಕಬೇಕೆಂಬ ನಿಟ್ಟಿನಲ್ಲಿ ಹಾಗೂ ಮೈನಳ್ಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಬೇಕು ಎಂದು ಮುಂಡಗೋಡ ತಾಲೂಕ ಆರೋಗ್ಯ ಅಭಿಯಾನ ಸಮಿತಿಯ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಮಾನ್ಯ ಜಿಲ್ಲಾಧಿಕಾರಿಗಳು ಕಾರವಾರ ಹಾಗೂ ಮಾನ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಕಾರವಾರ ಅವರಿಗೆ ಮನವಿಯನ್ನು ಸಲ್ಲಿಸಿ ಪ್ರಮುಖವಾದ ಬೇಡಿಕೆಗಳನ್ನು ಮುಂದಿಟ್ಟು ಆದಷ್ಟು ಬೇಗನೆ ಅವುಗಳನ್ನು ಜಾರಿಗೊಳಿಸಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಕರಿಸಬೇಕೆಂದು ಮನವಿಯನ್ನು...

ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ  ಪ್ರಕಟ..!

ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!

ಸಿದ್ಧಾಪುರದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಗೀತಾ ಪ್ರಭಾಕರ ಹುಂಡೇಕರ ಕೊಲೆ ಆರೋಪಿತನಾದ ಅಭಿಜಿತ ಗಣಪತಿ ಮಡಿವಾಳ ಇವರ ಮೇಲಿನ ಆಪಾದನೆಯು ರುಜುವಾತಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ರೂ.32,000 ದಂಡ, ಮೃತಳ ಅವಲಂಬಿತರಾದ ಮಕ್ಕಳಿಗೆ ರೂ.50,000 ಪರಿಹಾರ ನೀಡುವಂತೆ ಮತ್ತು ಮೃತಳ ಅವಲಂಬಿತರಾದ ಮಕ್ಕಳು ಜಿಲ್ಲಾ ಉಚಿತ ಕಾನೂನು ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದೆಂದು ಶಿರಸಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ, ಪೀಠಾಸೀನ ನ್ಯಾಯಾಧೀಶರಾದ ಕಿರಣ ಕಿಣಿ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನಲೆ:- ಗೀತಾ ಪ್ರಭಾಕರ ಹುಂಡೇಕರ ಇವರು ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಸೊರಬ ರಸ್ತೆಯಲ್ಲಿರುವ ಬಸವನಗಲ್ಲಿ ವಾರ್ಡ ನಂ.9 ರಲ್ಲಿ ಬರುವ ಮನೆ ನಂ.56 ರಲ್ಲಿ ಒಬ್ಬರೇ ವಾಸವಾಗಿದ್ದು, ಸದ್ರಿಯವರು ಸಿದ್ದಾಪುರದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ ಸೊಸೈಟಿಯಲ್ಲಿ ಪಿಗ್ನಿ ಕಲೆಕ್ಟರ ಆಗಿ ಕೆಲಸ ಮಾಡಿಕೊಂಡಿದ್ದು, ಪ್ರತಿ ದಿನ ಸಿದ್ದಾಪುರ ಶಹರದಲ್ಲಿ ಕಾಲ್ನಡಿಗೆಯಿಂದ ಪಿಗ್ಮಿ ಹಣವನ್ನು ಸಂಗ್ರಹ...

ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ

ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ

ಕಾರವಾರ; ಅಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು, ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ಈ ಯೋಜನೆಗೆ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕಾರವಾರ, ಯಲ್ಲಾಪೂರ, ಕ್ಷೇತ್ರದ ಮರಾಠ ಜನಾಂಗದ ಹಿಂದುಳಿದ ವರ್ಗಗಳ ಪ್ರವರ್ಗ-3 ಬಿ ಅಡಿಯಲ್ಲಿ 2(ಎ) ರುಣದ 2 (ಎಫ್) ವರೆಗೆ ಸೇರಿದವರಾಗಿರಬೇಕು ಕುಟುಂಬದ ವಾರ್ಷಿಕ 30,000 ದ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಆಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯನ್ನು ಪಡೆಯಲು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2(ಎಫ್) ವರೆಗೆ ಬರುವ , ಮರಾಠ, ಮರಾಠ, ಅರೆಕ್ಷತ್ರಿ,...

ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ

ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ

ಕಾರವಾರ; ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ..100 ರಷ್ಟು ನೋಂದಣಿ ಮಾಡಲು ಕ್ರಮವಹಿಸುವಂತೆ ಜಿಲ್ಲೆಯ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮ ಪಂಚಾಯತ್ ಗಳು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಭವಿವಿಸುವ ಪ್ರತಿಯಿಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಪ್ರತೀ ತಿಂಗಳು ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ, ಪರಿಶೀಲನೆ ನಡೆಸುವಂತೆ ತಿಳಿಸಿದ ಅವರು, ಜನನ ಮರಣ ನೋಂದಣಿ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಹಾಗೂ ಸ್ವಚ್ಛ ವಾಹಿನಿ ವಾಹನಗಳ ಮೂಲಕ ಪ್ರತಿದಿನ ಈ ಬಗ್ಗೆ ಪ್ರಚಾರ ಮಾಡುವಂತೆ ಮತ್ತು...

ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!

ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!

ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 450 ಹಾಸಿಗೆಗಳ ಮಲ್ಪಿ ಸ್ಪೆಶಾಲಿಟಿ...