ಮುಂಡಗೋಡಿನಲ್ಲಿ ಮತ್ತೊಂದು ಲೋಕಾಯುಕ್ತ ದಾಳಿ ನಡೆದಿದೆ. ಮುಂಡಗೋಡಿನ ಕಂದಾಯ ನಿರೀಕ್ಷಕ ಲೋಕಾ ಬಲೆಗೆ ಬಿದ್ದಿದ್ದಾರೆ. ಬಸವರಾಜ್ ಬಿಸನಾಳ ಎಂಬುವವರೇ ಲೋಕಾ ಬಲೆಗೆ ಬಿದ್ದಿದ್ದು, 15 ಸಾವಿರ ರೂ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಾರಾಯಣ ರಾಮಣ್ಣ ಅರೆಜೋಗಿ ಎಂಬುವ ರೈತ ನೀಡಿದ ದೂರಿನನ್ವಯ ದಾಳಿ ನಡೆದಿದೆ. ಫಾರ್ಮ ಹೌಸ್ ಗೆ ಅನುಮತಿ ನೀಡಲು ಲಂಚ ಕೇಳಿದ್ದರಂತೆ ಕಂದಾಯ ನೀರಿಕ್ಷಕ. ಹೀಗಾಗಿ, ರೈತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪರಿಣಾಮ ಇಂದು ದಾಳಿ ಮಾಡಿರೋ ಲೋಕಾ ಅಧಿಕಾರಿಗಳು ಇಬ್ಬರು ಅಧಿಕಾರಿಗಳ ಹೆಡೆಮುರಿ ಕಟ್ಟಿದ್ದಾರೆ. ಮೂರು ತಂಡಗಳಲ್ಲಿ ದಾಳಿ ಮಾಡಿರೋ ಲೋಕಾ ಅಧಿಕಾರಿಗಳು, ಕಾರವಾರ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಲೋಕಾ ಡಿವೈಎಸ್ಪಿ ಧನ್ಯಾ ನಾಯ್ಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
Top Stories
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ಮುಂಡಗೋಡಿನ ಹೆಸ್ಕಾಂ ನ AEE ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. 65 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಅಧಿಕಾರಿಗಳ ಎರಡು ತಂಡ ಕಾರ್ಯಾಚರಣೆ ನಡೆಸಿದೆ. ಮುಂಡಗೋಡಿನ ಹೆಸ್ಕಾಂ ಉಪವಿಭಾಗದ AEE ಧರ್ಮರಾಜ ಬೆಡಸಗಾಂವ್ ಎಂಬುವವರೇ ಲೋಕಾ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಮುಂಡಗೋಡಿನ ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಮೇರೆಗೆ ದಾಳಿಗೆ ಇಳಿದಿದ್ದ ಲೋಕಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ ಲಕ್ಷ ಲಂಚ ಬೇಕಂತೆ..! ಅಂದಹಾಗೆ, ಮುಂಡಗೋಡಿನ ಬಿಸಿಎಂ ಹಾಸ್ಟೆಲ್ ನ ವಿದ್ಯುತ್ ಕಾಮಗಾರಿಯ ಸಂಬಂಧವಾಗಿ ಹಾಗೂ ಇನ್ನಿತರ ಹಲವು ಕಾಮಗಾರಿಗಳನ್ನು ನೀಡುವ ಸಲುವಾಗಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ AEE ಧರ್ಮರಾಜ್ ಬೆಡಸಗಾಂವ್ ಮುಂಗಡ ಹಣವಾಗಿ 65 ಸಾವಿರ ರೂ. ಪಡೆಯುತ್ತಿದ್ದಾಗ ತಮ್ಮ ಕಚೇರಿಯಲ್ಲೇ ಲೋಕಾ ಖೆಡ್ಡಾಕ್ಕೆ ಬಿದ್ದಿದ್ದಾರೆ. ಕಾರವಾರ ಲೋಕಾಯುಕ್ತ, ಧಾರವಾಡ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ.
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಇಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಮ್ಮ ಚೊಚ್ಚಲ ಕ್ಯಾಬಿನೆಟ್ ಮೀಟಿಂಗನಲ್ಲೇ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ್ದು ವಿದ್ಯಾರ್ಥಿ ಸಾರಥಿ ಯೋಜನೆ ಜಾರಿಮಾಡಿದ್ದಾರೆ. ಇದರ ಅನ್ವಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ. ಏನಿದು ಯೋಜನೆ..! ನೂತನ ಸಿಎಂ ಡಿಕೆ ಶಿವಕುಮಾರ್ “ವಿದ್ಯಾರ್ಥಿ ಸಾರಥಿ” ಎಂಬ ನೂತನ ಯೋಜನೆ ಘೋಷಣೆ ಮಾಡಿದ್ದು, ಇನ್ಮುಂದೆ ಕಾಲೇಜು ವಿದ್ಯಾರ್ಥಿಗಳೇಲ್ಲರಿಗೂ ಬಸ್ ಪಾಸ್ ಪ್ರೀ ಆಗಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪ್ರೀ ಬಸ್ ಪಾಸ್ ಗಾಗಿ ಅರ್ಜಿ ಸಲ್ಲಿಸಬೇಕು. ಇಷ್ಟು ದಿನ ಶಕ್ತಿ ಯೋಜನೆಯಡಿ ಕೇವಲ ವಿದ್ಯಾರ್ಥಿನಿಯರಿಗೆ ಅಷ್ಟೇ ಬಸ್ ಪ್ರೀ ಇತ್ತು. ಇನ್ಮೇಲೆ ವಿದ್ಯಾರ್ಥಿ ಸಾರಥಿ ಯೋಜನೆಯಡಿ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ. ಇದ್ರಿಂದ ಇಡೀ ರಾಜ್ಯದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದ್ದು ಯೋಜನೆಗೆ ಭಾರೀ ಸ್ವಾಗತ ವ್ಯಕ್ತವಾಗಿದೆ.
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯ ಬ್ಲೂಹಿಲ್ ಹೋಟೆಲ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಮುಂಡಗೋಡ ಪಟ್ಟಣದ ಹಳೂರು ಓಣಿ ನಿವಾಸಿ ಇಸ್ಮಾಯಿಲ್ ಬಾಬುಸಾಬ್ ಜಮಖಂಡಿ (40) ಎಂದು ಗುರುತಿಸಲಾಗಿದೆ. ಆರೋಪಿಯು ಹಳದಿ ಬಣ್ಣದ ಬ್ಯಾಗ್ನಲ್ಲಿ ಗಾಂಜಾವನ್ನು ಇಟ್ಟುಕೊಂಡು, ಯಲ್ಲಾಪುರ ರಸ್ತೆಯ ಬ್ಲೂಹಿಲ್ ಹೊಟೇಲ್ ಬಳಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಳಿ ಇದ್ದ ಸುಮಾರು 25,000 ರೂ. ಮೌಲ್ಯದ 436 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು 30,000 ರೂ. ಮೌಲ್ಯದ ಬೈಕ್ ಸೇರಿದಂತೆ ಒಟ್ಟು 55,000 ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಎಸ್ಪಿ ದೀಪನ್ ಎಮ್.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ಮಾರ್ಗದರ್ಶನದಲ್ಲಿ...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು. ನನ್ನ ರಾಜೀನಾಮೆಯನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಸದ್ಯ ಇಲ್ಲಿಲ್ಲ, ಅವರು ಇಂದು ರಾತ್ರಿ ಹಿಂತಿರುಗಲಿದ್ದಾರೆ. ಆದ್ದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ನೀಡಲಾಗಿದೆ. ಹೈಕಮಾಂಡ್ ಸೂಚನೆ ನೀಡಿದ ತಕ್ಷಣವೇ ನಾನು ಕೆಳಗಿಳಿಯುವುದಾಗಿ ಮೊದಲೇ ಹೇಳಿದ್ದೆ. ಅದರಂತೆ ಇಂದು ರಾಜೀನಾಮೆ ನೀಡಿದ್ದೇನೆ. ನಮ್ಮ ಪಕ್ಷವು ಪೂರ್ಣ ಬಹುಮತವನ್ನು ಹೊಂದಿರುವುದರಿಂದ, ರಾಜ್ಯಪಾಲರು ಸಂವಿಧಾನಬದ್ಧವಾಗಿ ನನ್ನ...
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಎಂಟು ಮಂದಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಶೌಅಗಿದ್ದಾರೆ. ಜೊತೆಗೆ ಮೂವರು ನಾಪತ್ತೆಯಾಗಿದ್ದಾರೆ. ರಜಾದಿನದ ಹಿನ್ನೆಲೆಯಲ್ಲಿ ಒಟ್ಟು 13 ಮಂದಿ ಸೇರಿ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕೆಲವರು ಚಿಪ್ಪು ಸಂಗ್ರಹಿಸಲು ಸಮುದ್ರಕ್ಕೆ ಇಳಿದಾಗ, ಅಕಸ್ಮಾತ್ ಏರಿದ ದೈತ್ಯ ಅಲೆಗಳ ಸೆಳೆತಕ್ಕೆ ಸಿಲುಕಿ ಹಲವರು ನೀರಿನಲ್ಲಿ ಕಾಣೆಯಾಗಿದ್ದಾರೆ. ಈ ಅವಘಡದಲ್ಲಿ ಮೃತಪಟ್ಟ ಎಂಟು ಮಂದಿಯೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ನಾಪತ್ತೆಯಾದ ಮೂವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತಪಟ್ಟವರು..! ಲಕ್ಷ್ಮಿ ಮಹಾದೇವ ನಾಯ್ಕ (42) ಪಡುಶಿರಾಲಿ ಬೆಂಗ್ರೆ, ಉಮೇಶ ನಾಯ್ಕ (30) ಶಾರದಾಹೊಳೆ, ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38) ಮಾಸ್ತಮ್ಮ ನಾಯ್ಕ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಮೃತದೇಹಗಳಲ್ಲಿ ಆರು ಮಂದಿಯ ಶವಗಳನ್ನು ಭಟ್ಕಳ ಸರ್ಕಾರಿ...
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡಗಟ್ಟಾದಲ್ಲಿ ಗಾವಠಾಣ ಜಾಗ ಅನ್ನೋದು ಕಂಡವರ ಪಾಲಾಗಿದೆ. ಇಲ್ಲಿ ಎಕರೇಗಟ್ಟಲೇ ಬೇಕಾಬಿಟ್ಟಿಯಾಗಿ ಜಾಗ ಕಬಳಿಸಿಕೊಂಡು ಕೆಲವ್ರು ಮುಕ್ಕಾಂ ಹೂಡಿದ್ದಾರೆ. ಹೀಗಾಗಿ, ಸಂಬಂಧ ಪಟ್ಟ ಅಧಿಕಾರಿಗಳು ಈಗ ಎಚ್ಚರಗೊಂಡಿದ್ದಾರೆ. ವಡಗಟ್ಟಾದ ಗಾವಠಾಣ ಜಾಗದಲ್ಲಿನ ಒತ್ತುವರಿ ತೆರವು ಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇವತ್ತು..! ಅಂದಹಾಗೆ, ಇವತ್ತು ಮಂಗಳವಾರ ಮುಂಡಗೋಡ ತಾಲೂಕಾ ಪಂಚಾಯತಿ ಇಒ ಟಿ.ವೈ ದಾಸನಕೊಪ್ಪ ನೇತ್ರತ್ವದಲ್ಲಿ ಅಧಿಕಾರಿಗಳು,ಸಿಬ್ಬಂದಿಗಳ ತಂಡ ವಡಗಟ್ಟಾ ಗ್ರಾಮದ ಗಾವಠಾಣ ಜಾಗಕ್ಕೆ ಬಂದಿದ್ದರು. ಇಲ್ಲಿ ಮನಬಂದಂತೆ, ಬೇಕಾಬಿಟ್ಟಿಯಾಗಿ ಗಾವಠಾಣ ಜಾಗವನ್ನು ಒತ್ತುವರಿ ಮಾಡಿಕೊಂಡು ಕುಳಿತಿದ್ದವರಿಗೆ ಶಾಕ್ ನೀಡಿದ್ದಾರೆ. ಎಕೆರೆಗಟ್ಟಲೇ ಜಮೀನನ್ನು ಕಬಳಿಸಿದ್ದ ಜಾಗವನ್ನು ಖುಲ್ಲಾ ಪಡಿಸಲು ನಾಂದಿ ಹಾಡಿದ್ದಾರೆ. ಮನೆಯ ಜಾಗಗಳೋ..? ಅಸಲು, ಈ ವಡಗಟ್ಟಾ ಗ್ರಾಮದಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲದಂತಹ ಸ್ಥಿತಿ ಇತ್ತು, ಬಾಚಣಕಿ ಗ್ರಾಮ ಪಂಚಾಯತಿ ಬಹುಶಃ ಈ ವಡಗಟ್ಟಾ ಅನ್ನೋ ಗ್ರಾಮವೊಂದಿತ್ತು ಅನ್ನೋದನ್ನೆ ಮರೆತಂತಿತ್ತು. ಈ ಕಾರಣಕ್ಕೆ ಇಲ್ಲಿ ಹಲವರು ಬೇಕಾಬಿಟ್ಟಿಯಾಗಿ ಗಾವಠಾಣ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ....
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರಗೆ ವರ್ಗಾವಣೆಯಾಗಿದೆ. ಮಂಗಳೂರಿನ ಸಿಸಿಆರ್ಬಿಗೆ ವರ್ಗಾವಣೆಗೊಳಿಸಿ ಆದೇಶ ಹೊರಬಿದ್ದಿದೆ. ಇನ್ನು ಮುಂಡಗೋಡಿಗೆ ನೂತನ ಪಿಐ ಆಗಿ, ರಮೇಶ ಹನಾಪುರ ಆಗಮಿಸಲಿದ್ದಾರೆ. ಕಳೆದ ಎರಡು ವರ್ಷದಿಂದ ಮುಂಡಗೋಡಿನಲ್ಲಿ ಪಿಐ ಆಗಿ ರಂಗನಾಥ್ ನೀಲಮ್ಮನವರ್ ಕಾರ್ಯನಿರ್ವಹಿಸಿದ್ದರು.
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಮುಂಡಗೋಡ ತಾಲೂಕಿನ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಗಾಳಿಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನ ಹುನಗುಂದದಲ್ಲಿ ಭಾರೀ ಮಳೆಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿವೆ. ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಮರಗಳು ನೆಲಕ್ಕುರುಳಿವೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹುನಗುಂದ ಗ್ರಾಮದ ದೇಶಪಾಂಡೆನಗರದಲ್ಲಿ ಬಸವ್ವ ಮನಗೂಳಿ ಎಂಬುವವರ ಮನೆಯ ಹಿಂದಿನ ಮೇಲ್ಚಾವಣಿ ಹಾರಿ ಮನೆಯ ಮುಂದಿನ ರಸ್ತೆಗೆ ಬಂದು ಬಿದ್ದಿದೆ. ಮನೆಯಲ್ಲೇ ಪುಟ್ಟ ಪುಟ್ಟ ಮಕ್ಕಳೊಂದಿಗೆ ಇದ್ದ ಸಂದರ್ಭದಲ್ಲೇ ಇಂತಹ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಬದಲಾಗಿ, ಇಡೀ ಕುಟುಂಬ ರಾತ್ರಿಯಿಡಿ ಎಲ್ಲಿ ವಾಸಮಾಡುವುದು ಅನ್ನೋ ಚಿಂತೆಯಲ್ಲಿದೆ. ಮೇಲ್ಚಾವಣಿ ಹಾರಿಹೋದ ಹಿನ್ನೆಲೆಯಲ್ಲಿ, ಮನೆಯ ಒಳಗಡೆ ಮಳೆಯ ನೀರು ತುಂಬಿಕೊಂಡಿದ್ದು, ಕೆಸರುಮಯವಾಗಿದೆ. ಹೀಗಾಗಿ, ಮನೆಯ ಒಳಗಡೆ ವಾಸಮಾಡಲು ಸಾಧ್ಯವಿಲ್ಲದ ಸ್ಥಿತಿ ಇದೆ. ನೆಲಕ್ಕುರುಳಿದ ವಿದ್ಯುತ್ ಕಂಬಗಳು..! ಇನ್ನು ಇದೇ ಗ್ರಾಮದ ವಿರಕ್ತಮಠದ ಹತ್ತಿರ ಮರವೊಂದು ಬುಡಸಮೇತ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ....
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
ಹಾನಗಲ್: ಧರ್ಮಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರ ಬಾಲಕರು ನೀರುಪಾಲಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಸೃಜನ್ ಬ್ಯಾತನಾಳ (10), ಸಚಿನ್ ಬ್ಯಾತನಾಳ (12) ಇಬ್ಬರು ನೀರುಪಾಲಾದ ಬಾಲಕರಾಗಿದ್ದಾರೆ. ಇಬ್ಬರೂ ಸಹೋದರರು ಬೇಸಿಗೆ ರಜೆಗಾಗಿ, ಕಂಚಿನೆಗಳೂರು ಗ್ರಾಮದ ಸಂಬಂಧಿಕರ ಮನೆಗೆ ಇನಾಮ್ ನೀರಲಗಿಯಿಂದ ಬಂದಿದ್ದರು. ಹೀಗಾಗಿ, ಇಂದು ಧರ್ಮ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈಜು ಬಾರದೆ ಧರ್ಮ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಈಜಲು ತೆರಳಿದ್ದ ಯುವಕ ಸಾವು..! ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಮಂತಗಿ ಗ್ರಾಮದ ಬಳಿ ನಡೆದಿದೆ. ಉತ್ತರಪ್ರದೇಶ ಮೂಲದ ಪೈಜಾನ್ (21) ಎಂಬುವವನೇ ಮೃತಪಟ್ಟ ಯುವಕ ಎನ್ನಲಾಗಿದೆ. ಸಮ್ಮಸಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಸಲ್ಯೂನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಈತ,...









