ರಾಜ್ಯದಲ್ಲಿ ಹೆಚ್ಚಿದ ಸೆಕೆ ಮತ್ತು ಬಿಸಿ ಗಾಳಿ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ..! ಮಳೆಗಾಲದಲ್ಲಿ ಇದೇಂತ ಪರಿಸ್ಥಿತಿ..?

ರಾಜ್ಯದಲ್ಲಿ ಹೆಚ್ಚಿದ ಸೆಕೆ ಮತ್ತು ಬಿಸಿ ಗಾಳಿ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ..! ಮಳೆಗಾಲದಲ್ಲಿ ಇದೇಂತ ಪರಿಸ್ಥಿತಿ..?

ಕಾರವಾರ; ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heat Wave) ಹಾಗೂ ತೇವಾಂಶಯುಕ್ತ (Hot & Humid) ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯು ಜುಲೈ 14ರಂದು ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಇನ್ನೊಂದೆಡೆ, ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಸಾರ್ವಜನಿಕರಿಗೆ ಮಧ್ಯಾಹ್ನದ ವೇಳೆಯಲ್ಲಿ ಅನಗತ್ಯವಾಗಿ ಹೊರಗೆ ಓಡಾಡದಂತೆ, ಸಾಕಷ್ಟು ನೀರು ಸೇವಿಸುವಂತೆ ಹಾಗೂ ಬಿಸಿಗಾಳಿಯಿಂದ ಆರೋಗ್ಯ...

ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!

ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!

ಸಾಲಬಾಧೆ ತಾಳಲಾರದೇ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ರೈತನೋರ್ವ ತನ್ನ ಗದ್ದೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫಕ್ಕೀರಗೌಡ ಬಸನಗೌಡ ಪಾಟೀಲ್ (42) ಎಂಬುವ ರೈತನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದ್ದೆಯಲ್ಲೇ ಆತ್ಮಹತ್ಯೆ..! ಎರಡು ಎಕರೆ ಜಮೀನು ಹೊಂದಿದ್ದ ರೈತ ಸ್ಥಳೀಯ ಸಹಕಾರಿ ಸಂಘ, ಗ್ರಾಮೀಣ ಬ್ಯಾಂಕ್ ಸೇರಿ ಹಲವು ಖಾಸಗಿ ಫೈನಾನ್ಸ್ ಗಳಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಪ್ರಸಕ್ತ ವರ್ಷದಲ್ಲಿ ಮಳೆ ಕೈಕೊಟ್ಟು ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ, ಸಾಲ ತೀರಿಸಲು ಸಾಧ್ಯವಾಗದ ಭಯದಲ್ಲಿ ಮನನೊಂದು ಗದ್ದೆಯಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಿಗ್ಗೆ ಪ್ರಕರಣ ಬೆಳಕಿಗೆ..! ಮನೆಯಿಂದ ನಿನ್ನೆ ಸೋಮವಾರ ಬೆಳಿಗ್ಗೆ ಗದ್ದೆಗೆ ಹೋಗಿದ್ದವ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಇಂದು ಬೆಳಗಿನ ಜಾವ ಕುಟುಂಬಸ್ಥರು ಹುಡುಕಾಡಿದಾಗ, ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವಿಷ ಕುಡಿದು ಸಾವನ್ನಪ್ಪಿದ್ದಾನೆ ಅಂತಾ ತಿಳಿದು ಬಂದಿದೆ. ಎರಡು ಮಕ್ಕಳು..! ಇನ್ನು ಮೃತ ಫಕ್ಕೀರಗೌಡನಿಗೆ ಒಂದು ಹೆಣ್ಣು, ಒಂದು...

ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!

ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!

 ​ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಇದೇ ಗಲಾಟೆ ಇಟ್ಟುಕೊಂಡು, ಪೋಷಕರು ಹಾಗೂ ಕೆಲವರು ಅನುಮತಿ ಇಲ್ಲದೆ ಕಾಲೇಜು ಕೊಠಡಿಗೆ ನುಗ್ಗಿ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ತಕ್ಷಣವೇ ಕ್ರಮ ಕೈಗೊಳ್ಳಿ ಅಂತ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಏನಾಯ್ತು ಘಟನೆ..? ನಿನ್ನೆ ಅಂದ್ರೆ, ​ಜುಲೈ 12ರ ಭಾನುವಾರ ರಾತ್ರಿ ಸುಮಾರು 10:45 ಗಂಟೆಗೆ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ 9ನೇ ತರಗತಿ ವಿದ್ಯಾರ್ಥಿ ಸಂದೀಪ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಈ ಗಲಾಟೆಯ ಕುರಿತು ಜುಲೈ 13ರ ಸೋಮವಾರ ಬೆಳಗ್ಗೆ 10:30 ಗಂಟೆಗೆ ಕಾಲೇಜಿನ ಪ್ರಾಂಶುಪಾಲ ಆನಂದ ಚಿಕ್ಕೋಡಿ ಅವರು ತಮ್ಮ ಸಹೋದ್ಯೋಗಿಗಳ ಸಮ್ಮುಖದಲ್ಲಿ ಕಾಲೇಜಿನ 10ನೇ ತರಗತಿಯ ಕೊಠಡಿಯಲ್ಲಿ ವಿದ್ಯಾರ್ಥಿಗಳನ್ನು ವಿಚಾರಿಸುತ್ತಿದ್ದರು. ​ಅಕ್ರಮ ಪ್ರವೇಶ ಮತ್ತು ಹಲ್ಲೆ ಆರೋಪ..! ಅಸಲು, ​ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ, 9ನೇ ತರಗತಿಯ ವಿದ್ಯಾರ್ಥಿ...

ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!

ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!

 ಮುಂಡಗೋಡ ತಾಲೂಕಿನ ಕಾವಲಕೊಪ್ಪ ತಿರುವಿನಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹಾನಗಲ್ ನಿಂದ ಮುಂಡಗೋಡಿಗೆ ಬರುತ್ತಿದ್ದ ಬಸ್ ಹಾಗೂ ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಭೀಕರ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಗಳು ನಜ್ಜು ಗುಜ್ಜಾಗಿವೆ. ಬಸ್ ಚಾಲಕ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.   ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..

ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ

ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ

ಕಾರವಾರ; ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಎಮ್ಯನರೇಷನ್ ಫಾರಂ ಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕಕರಣೆ (ಎಸ್‌ಆಯ್‌ಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಿಗೆ ಸಮರ್ಪಕ ಮಾಹಿತಿ ತಲುಪಿಸುವ ಜವಾಬ್ದಾರಿ ಕಂದಾಯ ಇಲಾಖೆ, ಆರ್‌ಡಿಪಿಆರ್, ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳ ಮೇಲಿದ್ದು, ಈಗಾಗಲೇ ಜಾಥಾ, ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಪತ್ರ ಬರೆಯಿಸುವ ಕಾರ್ಯಕ್ರಮ ಹಾಗೂ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು...

ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?

ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?

ಮುಂಡಗೋಡ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲೇ, ಅರಣ್ಯದೇವಿಯ ಕಣ್ಣೀರ ರಕ್ತ ಹರಿದಿದೆ. ಸನ್ಮಾನ್ಯ ಅರಣ್ಯ ಅಧಿಕಾರಿಗಳೇ ಕೊಟ್ಟಿರೋ ಲೆಕ್ಕದ ಪ್ರಕಾರ ಬರೋಬ್ಬರಿ 34 ಮರಗಳ ಮಾರಣಹೋಮ ನಡೆದಿದೆ. ಅದೂ ಕೂಡ ರಸ್ತೆಗೆ ಹೊಂದಿಕೊಂಡೇ ಇರೋ ಕಾಡಿನಲ್ಲಿ ಜನರು ತಿರುಗಾಡೋ ಪ್ರದೇಶದಲ್ಲೇ ಇಂತಹದ್ದೊಂದು ಅರಣ್ಯ ನಾಶ ನಡೆದಿದೆ. ಆದ್ರೆ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ, ಅದೇನೋ ಪ್ರತೀ ಸಾರಿಯಂತೆ ಒಂದು ಕೇಸು ಹಾಕಿ ಕೈ ತೊಳೆದುಕೊಳ್ತಿದಾರಾ ಅನ್ನೋ ಪ್ರಶ್ನೆ ಇದೆ.  ಅವೇಲ್ಲ ಜಸ್ಟ್ “ಎಳೆಗಳಂತೆ”..! ಯಾಕಂದ್ರೆ, ಇಲ್ಲಿ ಅಷ್ಟೇಲ್ಲ ಮರಗಳನ್ನು ಯಾರ ಭಯವೂ ಇಲ್ಲದೇ ಕಡಿದು ದಕ್ಕಿಸಿಕೊಳ್ಳುವ ತಾಕತ್ತು ಆ ಬಡಪಾಯಿ ಆರೋಪಿಗೆ ಎಲ್ಲಿಂದ ಬಂತು..? ಒಮ್ಮೆ ನೀವೇ ಯೋಚಿಸಿನೋಡಿ, ಒಬ್ಬನೇ ಒಬ್ಬ ಆರೋಪಿ, ಒಂದೇ ದಿನದಲ್ಲಿ 34 ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಲು ಸಾಧ್ಯವಾ..? ಅಚ್ಚರಿ ಅನಿಸ್ತಿಲ್ವಾ..? ಅಷ್ಟಕ್ಕೂ, ಆ ಹೊತ್ತಲ್ಲಿ ಅರಣ್ಯ ರಕ್ಷಣೆಗೆಂದೇ ಮೀಸಲಿರೋ ಅರಣ್ಯ ರಕ್ಷಕರು ಏನ್ ಮಾಡ್ತಿದ್ರು..? ವಾಚರ್ಸ್ ಗಳು ಇಲ್ಲಿ ಇರಲಿಲ್ಲವಾ..? ಅಥವಾ...

ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!

ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!

 ಯಲ್ಲಾಪುರ: ತಾಲೂಕಿನ ಅರತಿಬೈಲ್ ಘಾಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ​ಜಿಲ್ಲಾಧಿಕಾರಿ (ಡಿಸಿ) ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ದೀಪನ್ ಎಂ.ಎನ್., ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಸೇರಿದಂತೆ ಪ್ರಮುಖ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತ್ತಿರದಿಂದ ಅವಲೋಕಿಸಿದೆ. ​ಪ್ರವಾಸಕ್ಕೆ ಹೊರಟಿದ್ದವರು ಮಸಣಕ್ಕೆ.! ​ಧಾರವಾಡ ಮೂಲದ 9 ಜನರ ತಂಡವೊಂದು ಕ್ರೂಸರ್ ವಾಹನದಲ್ಲಿ ಪ್ರವಾಸಕ್ಕೆಂದು ಹೊರಟಿತ್ತು. ಆದರೆ, ಯಲ್ಲಾಪುರದ ಅರತಿ ಘಾಟ್ ಬಳಿ ಬರುತ್ತಿದ್ದಂತೆಯೇ ಎದುರಿನಿಂದ ಬಂದ ಲಾರಿಯೊಂದಿಗೆ ಇವರ ವಾಹನವು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿದೆ. ​ಸ್ಥಳದಲ್ಲೇ ಆರು ಮಂದಿ ದುರ್ಮರಣ..! ​ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕ್ರೂಸರ್ ವಾಹನದಲ್ಲಿದ್ದ 9 ಜನರ ಪೈಕಿ 6 ಜನ ಸ್ಥಳದಲ್ಲೇ ಅತ್ಯಂತ ದುರಂತವಾಗಿ ಕೊನೆಯುಸಿರೆಳೆದಿದ್ದಾರೆ. ಉಳಿದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ​ಅಪಘಾತ...

ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!

ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!

 ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್..! ​ಧಾರವಾಡ ಮೂಲದ ಒಂಬತ್ತು ಮಂದಿ ಕ್ರೂಸರ್ ವಾಹನದಲ್ಲಿ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಿ ಎದುರಿನಿಂದ ಬಂದ ಲಾರಿಯೊಂದಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಜನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ​ಆಸ್ಪತ್ರೆಗೆ ದಾಖಲು..! ​ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ​ಸ್ಥಳಕ್ಕೆ ಪೊಲೀಸರ ಭೇಟಿ..! ​ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು...

ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!

ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!

ಶಿರಸಿ ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ​ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರು ನಿವಾಸಿ, ಸದ್ಯ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಸೈಯದ್ ಸಾದಿಕ್ ತಂದೆ ಮುಜೀಬು (27) ಬಂಧಿತ ಆರೋಪಿಯಾಗಿದ್ದಾನೆ. ​ದಿನಾಂಕ ಜುಲೈ 08 ರಂದು ರಾತ್ರಿ ಸುಮಾರು ಶಿರಸಿ ನಗರದ ಶಿರಸಿ-ಯಲ್ಲಾಪುರ ರಸ್ತೆಯ ಅರಣ್ಯ ನೌಕರರ ಸಮುದಾಯ ಭವನದ ಹತ್ತಿರ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಸುಮಾರು 15 ಸಾವಿರ ರೂ. ಮೌಲ್ಯದ 272 ಗ್ರಾಂ ಗಾಂಜಾ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ​ಕಾರ್ಯಾಚರಣೆ ತಂಡ..! ​ಉತ್ತರ ಕನ್ನಡ ಎಸ್ಪಿ ದೀಪನ್...

ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ

ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ

ಮುಂಡಗೋಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (S.I.R.) ಕಾರ್ಯವು ಪ್ರಗತಿಯಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಂಡಗೋಡ ತಹಶೀಲ್ದಾರರು ಹಾಗೂ ಸಹಾಯಕ ಮತದಾರ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಚುನಾವಣಾ ಆಯೋಗದ ವೇಳಾಪಟ್ಟಿಯ ಪ್ರಕಾರ, ಕಳೆದ ಜೂನ್ 30ರಿಂದಲೇ ಮುಂಡಗೋಡ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ‘Enumeration Form’ಗಳನ್ನು ತಲುಪಿಸಿದ್ದಾರೆ. ​ಪ್ರಸ್ತುತ ಈ ನಮೂನೆಯನ್ನು ತುಂಬುವಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲಗಳಿದ್ದಲ್ಲಿ ಅಥವಾ ಅಪೂರ್ಣ ಮಾಹಿತಿ ಇದ್ದಲ್ಲಿ, ಆಯೋಗದ ಮಾರ್ಗಸೂಚಿಗಳನ್ವಯ ಮಾಹಿತಿ ಪಡೆಯಲು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಕೆಳಗಿನಂತೆ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.. ​ನಗರ ವ್ಯಾಪ್ತಿ: ಮುಂಡಗೋಡದ ಪಟ್ಟಣ ಪಂಚಾಯತ ಕಾರ್ಯಾಲಯ ಹಾಗೂ ತಹಶೀಲ್ದಾರ ಕಾರ್ಯಾಲಯ. ​ಗ್ರಾಮೀಣ ವ್ಯಾಪ್ತಿ: ಆಯಾ ವ್ಯಾಪ್ತಿಯ ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯಗಳು. ​ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು (BLO)...