ಕಾರವಾರ; ಉತ್ತರ ಕನ್ಮಡ ಜಿಲ್ಲೆಯಲ್ಲಿ ರವಿವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಂಡಿದ್ರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಅವ್ರು, ಜಿಲ್ಲೆಗೆ ಸೂಪರ್ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಬಗ್ಗೆಯೂ ಭರವಸೆ ನೀಡಿದ್ರು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ ಮಾಡುವ ಕುರಿತಂತೆ ಈ ಬಾರಿಯ ಬಜೆಟ್ ನಲ್ಲಿ ಮಂಜೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ರೂ.198.27 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಮತ್ತು ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪಾ ರಾಜ್ಯ ಹೆದ್ದಾರಿ-93 ರಲ್ಲಿ ರೂ. 720.81 ಲಕ್ಷ ರೂ ವೆಚ್ಚದ ಸೇತುವೆ ಕಾಮಗಾರಿ, ಯಲ್ಲಾಪುರ ಪಟ್ಟಣದಲ್ಲಿ ರೂ.202.89 ಲಕ್ಷ ವೆಚ್ಚದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲ್ಲೂಕಿನಲ್ಲಿ ರೂ.248.18 ಲಕ್ಷ ಮೊತ್ತದ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು. ಕಾರವಾರಕ್ಕೆ...
Top Stories
ಜೂನ್ ತಿಂಗಳೊಳಗೇ ಜಿಪಂ, ತಾಪಂ ಚುನಾವಣೆ; ಅಂಕೋಲಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಂಜಗುಣಿಯಲ್ಲಿ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್..!
ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ..!
ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,ಪರೀಕ್ಷೆಗೆ ಪ್ರೇರಣೆ ನೀಡಿದ ಜಿ.ಪಂ. ಸಿ.ಇ.ಓ. ಡಾ.ದಿಲೀಷ್ ಶಶಿ
ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸ, ಅಷ್ಟಕ್ಕೂ,ಏನೇನು ಘೋಷಣೆ ಮಾಡಿದ್ರು..?
ಜೂನ್ ತಿಂಗಳೊಳಗೇ ಜಿಪಂ, ತಾಪಂ ಚುನಾವಣೆ; ಅಂಕೋಲಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಅಂಕೋಲಾ: ಜೂನ್ ತಿಂಗಳೊಳಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಸೇತುವೆ ಲೋಕಾರ್ಪಣೆ ಬಳಿಕ ಮಾತನಾಡಿದ ಅವರು, ಜಿಲ್ಲಾ ಪಂಚಾಯತ ಹಾಗೂ ತಾಲೂಕಾ ಪಂಚಾಯತ ಚುನಾವಣೆ ಕುರಿತು ತಿಳಿಸಿದ್ದಾರೆ. ಇನ್ನೂ ಗೋಕರ್ಣವನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸುವ ಬಗ್ಗೆ ಬೇಡಿಕೆ ಇರುವುದನ್ನು ಒಪ್ಪಿಕೊಂಡ ಅವರು, ಚುನಾವಣೆಗಳು ಹಾಗೂ ಮುಂದಿನ ಜನಗಣತಿ ಪ್ರಕ್ರಿಯೆ ಇರುವುದರಿಂದ ತಾತ್ಕಾಲಿಕವಾಗಿ ಹೊಸ ಪಟ್ಟಣ ಪಂಚಾಯಿತಿ ಘೋಷಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಚುನಾವಣೆ ಮುಗಿದ ನಂತರ ಈ ವಿಷಯವನ್ನು ಪರಿಗಣಿಸಲಾಗುವುದು ಎಂದರು. ಮಂಜಗುಣಿ-ಗಂಗಾವಳಿ ಸೇತುವೆ ನಿರ್ಮಾಣದಿಂದ ಅಂಕೋಲಾ ಹಾಗೂ ಗೋಕರ್ಣ ಭಾಗದ ಜನರಿಗೆ ಸುತ್ತುಮುತ್ತಲಿನ ಸುಮಾರು 18 ಕಿಲೋಮೀಟರ್ ದೂರ ಪ್ರಯಾಣಿಸುವ ಅಗತ್ಯ ಕಡಿಮೆಯಾಗಿದೆ. 2017ರಲ್ಲಿ ತಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದೆ; ನಂತರದ ಸರ್ಕಾರದಿಂದ ಕಾಮಗಾರಿ ಪೂರ್ಣಗೊಳ್ಳದೆ ಉಳಿದಿತ್ತು. ಇದೀಗ ಅದನ್ನು ಪೂರ್ಣಗೊಳಿಸಿ ಉದ್ಘಾಟಿಸುವ ಅವಕಾಶ...
ಮಂಜಗುಣಿಯಲ್ಲಿ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್..!
ಕಾರವಾರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ನೆರವೇರಿಸಿದ್ರು. ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ರೂ. 34.21 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಉದ್ಘಾಟಿಸಿದರು.
ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!
ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಸಮೀಪ, ಶೆಟ್ಟಿಕೇರಿ ಕ್ರಾಸ್ ಬಳಿ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆ ಸಲುವಾಗಿ ಮೃತದೇಹವನ್ನು ಹೊನ್ನಾವರ ತಾಲೂಕಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸದರಿಯವನ ಹೆಸರು ವಿಳಾಸ ಪತ್ತೆಯಾದಲ್ಲಿ ಹೊನ್ನಾವರ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ. ಮೊನಂ.9480805270 9480805270.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ..!
ಕಾರವಾರ; ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಫೆ.22 ಮತ್ತು 23 ರಂದು ಪ್ರವಾಸ ಕೈಗೊಂಡಿದ್ದು, ಫೆ.22 ರಂದು ಸಂಜೆ 6 ಗಂಟೆಗೆ ಹೊನ್ನಾವರದ ಪ್ರಭಾತನಗರ ಸೆಂಟ್ ಅಂತೋನಿ ಮೈದಾನದಲ್ಲಿ ಹೊನ್ನಾವರ ಉತ್ಸವ ಸಮಿತಿಯಿಂದ ಆಯೋಜಿಸಿರುವ ಹೊನ್ನಾವರ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಮಟಾದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.23 ರಂದು ಬೆಳಗ್ಗೆ 11 ಗಂಟೆಗೆ ಕುಮಟಾ ತಾಲೂಕಿನ ಹೆಗ್ಡೆ ಗ್ರಾಮದಲ್ಲಿ ಅಘನಾಶಿನಿ ನದಿಗೆ ನಬಾರ್ಡ್ ವತಿಯಿಂದ ನಿರ್ಮಾಣವಾಗಿರುವ ಸೇತುವೆ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕುಮಟಾ ತಾಲೂಕಿನ ಕಲಭಾಗ್ ಬಗೋಣ- ಉರಕೇರಿ ರಸ್ತೆಯಲ್ಲಿ ಮೂವತ್ತುಗುಂಡಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಪಾವಿನಕುರುವ ಸೇತುವೆ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,ಪರೀಕ್ಷೆಗೆ ಪ್ರೇರಣೆ ನೀಡಿದ ಜಿ.ಪಂ. ಸಿ.ಇ.ಓ. ಡಾ.ದಿಲೀಷ್ ಶಶಿ
ಕಾರವಾರ; ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಜಿಲ್ಲೆಯ 199 ಪ್ರೌಡಶಾಲೆಗಳ ವಿದ್ಯಾರ್ಥಿಗಳೊಂದಿಗೆ ಹಾಗೂ ಶಿಕ್ಷಕರೊಂದಿಗೆ ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುವ ಕುರಿತು ಶನಿವಾರ ಸಂವಾದ ನಡೆಸಿದರು. ನಾನು ಕೇರಳದ ಒಂದು ಹಳ್ಳಿಯಿಂದ ಬಂದಿದ್ದು, ನಾನು ಕೂಡ ಸರ್ಕಾರಿ ಶಾಲೆಯಲ್ಲಿ ಕಲಿತಿದ್ದೇನೆ ಎಂದ ಅವರು, ತಮ್ಮ ಶಾಲಾ ಜೀವನದ ಅನುಭವಗಳು, ವೈದ್ಯಕೀಯ ಶಿಕ್ಷಣವನ್ನು ಪಡೆದ ಬಗ್ಗೆ, ನಂತರದಲ್ಲಿ ಅದೇ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಪ್ರೊಫೆಸರ್ ಆಗಿ ವೃತ್ತಿಯನ್ನು ಪ್ರಾರಂಭಿಸಿದ್ದು, 2017ರ ಬ್ಯಾಚ್ನಲ್ಲಿ ಭಾರತೀಯ ಆಡಳಿತ ಸೇವೆಗೆ (ಐ.ಎ.ಎಸ್) ಕರ್ನಾಟಕ ಕೆಡರ್ನಲ್ಲಿ ಆಯ್ಕೆ ಆಗಿದ್ದು, ಕಾರವಾರ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಜಿಲ್ಲಾ ಪಂಚಾಯತ ಕಾರವಾರದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಮಕ್ಕಳಿಗೆ ತಮ್ಮನ್ನು ತಾವು ಪರಿಚಯಿಸಿಕೊಂಡರು. ವಿದ್ಯಾರ್ಥಿ ಜೀವನ ಅತ್ಯಂತ ಅತ್ಯಮೂಲ್ಯವಾದುದು, ಎಸ್.ಎಸ್.ಎಲ್.ಸಿ ಶಿಕ್ಷಣವು ಮುಂದಿನ ಜೀವನದ ಹಾಗೂ ಬೌದ್ಧಿಕ ಬೆಳವಣಿಗೆಯ ಪ್ರಾರಂಭದ ಹಂತ, ಪ್ರೌಢಶಾಲೆಯ ಅನುಭವಗಳು...
ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!
ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ...
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!
ಗುತ್ತಿಗೆದಾರನಿಂದ ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ನಾ ಕಾವೂಂಗಾ, ನಾ ಕಾನೇ ದೂಂಗಾ ಅಂತ ಜಪ ಮಾಡುವ ಬಿಜೆಪಿಗೆ ಭಾರೀ ಮುಜುಗರ ತಂದಿಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎ ಗಳಾದ ಮಂಜುನಾಥ್ ಹಾಗೂ ಗುರು ಎಂಬುವ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಖಾಸಗಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನದ ಆಸ್ಪತ್ರೆಯಾಗಿದೆ. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡಾ ಆಗಿದ್ದಾರೆ. ಈಗ ಕಮಿಷನ್ ಹಣಕ್ಕೆ ಕೈಯೊಡ್ಡಿದಾಗಲೇ...
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಅದು ಅಕ್ಷರಶಃ ಇಡೀ ಮುಂಡಗೋಡ ತಾಲೂಕನ್ನೇ ಬೆಚ್ಚಿ ಬೀಳಿಸಿರೋ ಮಹಿಳೆಯ ಮರ್ಡರ್ ಕೇಸ್, ಮುಂಡಗೋಡ ಪೊಲೀಸರಿಗೆ ಅಕ್ಷರಶಃ ಸವಾಲಾಗಿದೆ. ಕೊಳಗಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರೋ ರುಂಡವಿಲ್ಲದ ಮಹಿಳೆಯ ಶವ ಭೀಕರ ಹತ್ಯೆಯ ಕರಾಳತೆಗೆ ಸಾಕ್ಷಿಯಾಗಿದೆ. ಅದೇಲ್ಲಿಯೋ ಭಯಾನಕವಾಗಿ ಮರ್ಡರ್ ಮಾಡಿ, ರುಂಡ ಚಂಡಾಡಿ ಜಸ್ಟ್ ದೇಹವನ್ನು ಮಾತ್ರ ಕೊಳಗಿಯ ಅರಣ್ಯಕ್ಕೆ ತಂದು ಎಸೆದು ಹೋದ್ರಾ ಹಂತಕರು..? ಅಥವಾ ಮತ್ತೇನಾದ್ರೂ ಬೇರೆಯದ್ದೇ ಕಾರಣಕ್ಕೆ ಇಂತಹದ್ದೊಂದು ಭೀಕರ ಹತ್ಯೆ ನಡೆದು ಹೋಯ್ತಾ..? ಗೊತ್ತಿಲ್ಲ. ಎರಡು ದಿನಗಳಾಯ್ತಾ..? ಅಸಲು, ಫೆ.20 ರ, ಶುಕ್ರವಾರ ಸಂಜೆ ಸಿಕ್ಕಿರೋ ಭಯಾನಕ ಶವ, ಬಹುಶಃ ಎರಡು ದಿನಗಳ ಹಿಂದೆ ಅದೇಲ್ಲಿಯೊ ಹತ್ಯೆ ಮಾಡಿ ಇಲ್ಲಿ ತಂದು ಬೀಸಾಕಿರೋ ಅನುಮಾನವಿದೆ. ಹಾಗೆ ನೋಡಿದ್ರೆ, ಶವದ ಹತ್ತಿರ ಕೊರಳಲ್ಲಿ ಧರಿಸುವ ಲಿಂಗ ಸಿಕ್ಕಿದೆ. ಬಿಟ್ಟರೆ ಪೊಲೀಸರಿಗೆ ಸಹಕಾರಿಯಾಗಬಲ್ಲ ಯಾವೊಂದೂ ಕುರುಹುಗಳೂ ಸಿಕ್ಕಿರೋ ಮಾಹಿತಿ ಇಲ್ಲ. ಇನ್ನು, ಯಾರಿಗೂ ಪರಿಚಯ ಆಗದೇ ಇರಲಿ ಅಂತಾ ಮಹಿಳೆಯ ರುಂಡವನ್ನೇ ಬೇರ್ಪಡಿಸಿ ಮುಂಡವನ್ನಷ್ಟೇ ಎಸೆದಿದ್ದಾರೆ ಹಂತಕರು. ಹೀಗಾಗಿ,...
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಸಿಕ್ಕಿದೆ. ಅದ್ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ಇಲ್ಲಿ ಬೀಸಾಡಿ ಹೋಗಿರೋ ಸಂಶಯ ವ್ಯಕ್ತವಾಗಿದೆ. ಅಸಲು, ಮಹಿಳೆಯ ಶವ ಅಕ್ಷರಶಃ ಬೆತ್ತಲೆಯಾಗಿದೆ. ಈ ಶವದ ಹಿಂದೆ ಹಲವು ಭೀಕರತೆಯ ಅನುಮಾನಗಳು ಗರಿಗೆದರಿಕೊಂಡಿವೆ. ಏನಿಲ್ಲವೆಂದರೂ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಅದೆಲ್ಲೊ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರೋ ಅನುಮಾನ ಇದೆ. ಅಥವಾ ಅದೆ ಸ್ಥಳದಲ್ಲೇ ಮಹಿಳೆಯ ಜೀವ ತೆಗದಿರಬಹುದಾದ ಅನುಮಾನವೂ ಇದೆ. ಸದ್ಯ ಮುಂಡಗೋಡ ಪೊಲೀಸರು ಸದ್ಯ ಸ್ಥಳಕ್ಕೆ ಭೇಟಿಜನನ ನೀಡಿ ಪರೀಶೀಲನೆ ನಡೆಸಿದ್ದಾರೆ. ಶವ ಯಾರದ್ದು..? ಇಲ್ಲಿಗೆ ಹೇಗೆ ಬಂತು..? ಈ ಸಾವಿನ ಅಸಲೀ ಕಾರಣ ಏನು..? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ತನಿಖೆಗೆ ಇಳಿದಿದ್ದಾರೆ. ಸ್ಥಳದಲ್ಲಿ ಕತ್ತಲೆ ಆವರಿಸಿದ್ದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳುತ್ತಿರೊ ಪೊಲೀಸ್ರು ಮುಂದಿನ ಕ್ರಮ ಕೈಗೊಂಡಿದ್ದಾರೆ.









