ಕಾರವಾರ: ಜಿಲ್ಲೆಯ ಗುಡ್ಡಗಾಡು ಪ್ರದೇಶಗಳು ಮತ್ತು ಪ.ಜಾತಿ ಮತ್ತು ಪಂಗಡದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಪ್ರದೇಶಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ತಿಂಗಳು ಪಡಿತರ ಪಡೆಯಲು ತಮ್ಮ ವಾಸಸ್ಥಳದಿಂದ ಅತ್ಯಂತ ದೂರ ಕ್ರಮಿಸಬೇಕಾದ ಸಾರ್ವಜನಿಕರಿಗೆ ಅನುಕೂಲವಾಗುವಂತೆ, ನಿಗಧಿತ ಮಾರ್ಗಸೂಚಿಯನ್ವಯ ಸಮೀಪದ ಪ್ರದೇಶಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತರೆಯುವ ಕುರಿತಂತೆ ಪರಿಶೀಲನೆ ನಡೆಸಬೇಕು, ಈಗಾಗಲೇ ಹೊಸ ನ್ಯಾಯಬೆಲೆ ಅಂಗಡಿ ತರೆಯಲು ಮನವಿ ಸಲ್ಲಿಸಿರುವ ಸಾರ್ವಜನಿಕರ ಮನವಿಗಳನ್ನು ಕೂಡಾ ಪರಿಗಣಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಈಗಾಗಲೇ ನಿಗಧಿತ ಸಂಖ್ಯೆಗಿಂತ ಹೆಚ್ಚಿನ ಪಡಿತರ ಚೀಟಿಗಳನ್ನು ಹೊಂದಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಪಡಿತರ ಪಡೆಯಲು ದೂರ ಪ್ರದೇಶದ ಸಮಸ್ಯೆಯಿದ್ದಲ್ಲಿ , ಹೆಚ್ಚುವರಿ ಪಡಿತರ...
Top Stories
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಮುಂಡಗೋಡ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜನ ವೇದಿಕೆ ಕಾರ್ಯಕರ್ತರು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದ್ದಾರೆ. ಅಂದಹಾಗೆ, ಜನ ವೇದಿಕೆ ಕರ್ನಾಟಕ ಜನಾರೋಗ್ಯ ಚಳುವಳಿ ಮೂಲಕ ಕರ್ನಾಟಕ ರಾಜ್ಯದ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧ್ಯಯನವನ್ನು ಮಾಡಿದ್ದು ಅದರಲ್ಲಿ ಮುಖ್ಯವಾಗಿ ಕಂಡುಬಂದದ್ದು ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ನೇಮಕದಲ್ಲಿ ಕೊರತೆ ಇದೆ. ಅತಿ ಮುಖ್ಯವಾದ 104 ತರಹದ ಔಷಧಿ ವಿತರಣೆ, ಅಂಬುಲೆನ್ಸ್ ಸೇವೆ, ಹೆರಿಗೆ ಸೇವೆ ಹೀಗೆ ಮುಖ್ಯವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಆರೋಗ್ಯ ಸೇವೆಯು ಸಮರ್ಪಕವಾಗಿ ದೊರಕಬೇಕೆಂಬ ನಿಟ್ಟಿನಲ್ಲಿ ಹಾಗೂ ಮೈನಳ್ಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಬೇಕು ಎಂದು ಮುಂಡಗೋಡ ತಾಲೂಕ ಆರೋಗ್ಯ ಅಭಿಯಾನ ಸಮಿತಿಯ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಮಾನ್ಯ ಜಿಲ್ಲಾಧಿಕಾರಿಗಳು ಕಾರವಾರ ಹಾಗೂ ಮಾನ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಕಾರವಾರ ಅವರಿಗೆ ಮನವಿಯನ್ನು ಸಲ್ಲಿಸಿ ಪ್ರಮುಖವಾದ ಬೇಡಿಕೆಗಳನ್ನು ಮುಂದಿಟ್ಟು ಆದಷ್ಟು ಬೇಗನೆ ಅವುಗಳನ್ನು ಜಾರಿಗೊಳಿಸಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಕರಿಸಬೇಕೆಂದು ಮನವಿಯನ್ನು...
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಸಿದ್ಧಾಪುರದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಗೀತಾ ಪ್ರಭಾಕರ ಹುಂಡೇಕರ ಕೊಲೆ ಆರೋಪಿತನಾದ ಅಭಿಜಿತ ಗಣಪತಿ ಮಡಿವಾಳ ಇವರ ಮೇಲಿನ ಆಪಾದನೆಯು ರುಜುವಾತಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ರೂ.32,000 ದಂಡ, ಮೃತಳ ಅವಲಂಬಿತರಾದ ಮಕ್ಕಳಿಗೆ ರೂ.50,000 ಪರಿಹಾರ ನೀಡುವಂತೆ ಮತ್ತು ಮೃತಳ ಅವಲಂಬಿತರಾದ ಮಕ್ಕಳು ಜಿಲ್ಲಾ ಉಚಿತ ಕಾನೂನು ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದೆಂದು ಶಿರಸಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ, ಪೀಠಾಸೀನ ನ್ಯಾಯಾಧೀಶರಾದ ಕಿರಣ ಕಿಣಿ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನಲೆ:- ಗೀತಾ ಪ್ರಭಾಕರ ಹುಂಡೇಕರ ಇವರು ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಸೊರಬ ರಸ್ತೆಯಲ್ಲಿರುವ ಬಸವನಗಲ್ಲಿ ವಾರ್ಡ ನಂ.9 ರಲ್ಲಿ ಬರುವ ಮನೆ ನಂ.56 ರಲ್ಲಿ ಒಬ್ಬರೇ ವಾಸವಾಗಿದ್ದು, ಸದ್ರಿಯವರು ಸಿದ್ದಾಪುರದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ ಸೊಸೈಟಿಯಲ್ಲಿ ಪಿಗ್ನಿ ಕಲೆಕ್ಟರ ಆಗಿ ಕೆಲಸ ಮಾಡಿಕೊಂಡಿದ್ದು, ಪ್ರತಿ ದಿನ ಸಿದ್ದಾಪುರ ಶಹರದಲ್ಲಿ ಕಾಲ್ನಡಿಗೆಯಿಂದ ಪಿಗ್ಮಿ ಹಣವನ್ನು ಸಂಗ್ರಹ...
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಕಾರವಾರ; ಅಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು, ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ಈ ಯೋಜನೆಗೆ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕಾರವಾರ, ಯಲ್ಲಾಪೂರ, ಕ್ಷೇತ್ರದ ಮರಾಠ ಜನಾಂಗದ ಹಿಂದುಳಿದ ವರ್ಗಗಳ ಪ್ರವರ್ಗ-3 ಬಿ ಅಡಿಯಲ್ಲಿ 2(ಎ) ರುಣದ 2 (ಎಫ್) ವರೆಗೆ ಸೇರಿದವರಾಗಿರಬೇಕು ಕುಟುಂಬದ ವಾರ್ಷಿಕ 30,000 ದ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಆಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯನ್ನು ಪಡೆಯಲು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2(ಎಫ್) ವರೆಗೆ ಬರುವ , ಮರಾಠ, ಮರಾಠ, ಅರೆಕ್ಷತ್ರಿ,...
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಕಾರವಾರ; ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ..100 ರಷ್ಟು ನೋಂದಣಿ ಮಾಡಲು ಕ್ರಮವಹಿಸುವಂತೆ ಜಿಲ್ಲೆಯ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮ ಪಂಚಾಯತ್ ಗಳು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಭವಿವಿಸುವ ಪ್ರತಿಯಿಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಪ್ರತೀ ತಿಂಗಳು ತಹಶೀಲ್ದಾರ್ಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ, ಪರಿಶೀಲನೆ ನಡೆಸುವಂತೆ ತಿಳಿಸಿದ ಅವರು, ಜನನ ಮರಣ ನೋಂದಣಿ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಹಾಗೂ ಸ್ವಚ್ಛ ವಾಹಿನಿ ವಾಹನಗಳ ಮೂಲಕ ಪ್ರತಿದಿನ ಈ ಬಗ್ಗೆ ಪ್ರಚಾರ ಮಾಡುವಂತೆ ಮತ್ತು...
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 450 ಹಾಸಿಗೆಗಳ ಮಲ್ಪಿ ಸ್ಪೆಶಾಲಿಟಿ...
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ನವದೆಹಲಿ: 10ನೇ ತರಗತಿಯ ಬೋರ್ಡ್ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂದು ಮಹತ್ವದ ಘೋಷಣೆ ಮಾಡಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ತಿಳಿಸಿದೆ. ಸಿಬಿಎಸ್ಸಿಯ ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸುವುದು ಅವಶ್ಯಕ. ಮೂರು ಪತ್ರಿಕೆಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಎರಡನೇ ಆವೃತ್ತಿ ಪರೀಕ್ಷೆ ಎದುರಿಸಲು ಸಾಧ್ಯವಿಲ್ಲ. ಅಂತಹ ವಿದ್ಯಾರ್ಥಿಗಳನ್ನು “ಅಗತ್ಯ ಪುನರಾವರ್ತನೆ” ವಿಭಾಗದಲ್ಲಿ ಸೇರಿಸಲಾಗುವುದು. ಅವರು ಮುಂದಿನ ವರ್ಷ ಎದುರಾಗಲಿರುವ ಮೊದಲ ಪರೀಕ್ಷೆಯಲ್ಲಿ ಮತ್ತೆ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದೆ. 2026ರ ಬೋರ್ಡ್ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದು, ಅದಕ್ಕೆ ಮೊದಲು ಈ ಮಾಹಿತಿ ಹೊರಬಿದ್ದಿದೆ. ಸಿಬಿಎಸ್ಸಿಯ 10ನೇ ತರಗತಿ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿದೆ. ಮೊದಲ ಪರೀಕ್ಷೆ ಬರೆದು ಪಾಸ್ ಆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ಉತ್ತಮಗೊಳಿಸಬೇಕು ಎಂಬ ಇಚ್ಚೆ ಹೊಂದಿದ್ದಲ್ಲಿ ಮತ್ತೆ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಭಾಷೆಗಳ ವಿಷಯಗಳ...
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಸ್ವಿಪ್ಟ್ ಕಾರ್ ಹಾಗೂ ಬೊಲೆರೋ ಪಿಕ್ ಅಪ್ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮುಂಡಗೋಡ ತಾಲೂಕಿನ ಗಡಿಭಾಗದ ತಡಸದ ತಾಯವ್ವನ ದೇವಸ್ಥಾನದ ಸಮೀಪ ಸಂಭವಿಸಿದೆ. ತಾಯವ್ವನ ದೇವಸ್ಥಾನದ ಸಮೀಪ ಘಟನೆ ನಡೆದಿದ್ದು, ಬೊಲೆರೋ ಪಿಕ್ ಅಪ್ ವಾಹನ ಮಾರುತಿ ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕಾರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ, ಇನ್ನು ಡಿಕ್ಕಿಯ ರಭಸಕ್ಕೆ ಬೊಲೆರೋ ಪಿಕ್ ಅಪ್ ವಾಹನ ಪಲ್ಟಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ. ಗಾಯಗೊಂಡವರು ಎಷ್ಟು ಜನ, ಎಲ್ಲಿಯ ವಾಹನಗಳು ಅನ್ನೋ ಮಾಹಿತಿ ತಿಳಿದುಬರಬೇಕಿದೆ.
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು ನಿಗದಿತ 8 ಓವರ್ಗಳಲ್ಲಿ ಮೊತ್ತವನ್ನು ಕಲೆಹಾಕಿತ್ತು. ಈ ಗುರಿಯನ್ನು ಬೆನ್ನಟ್ಟಿದ ಶಿವಶಕ್ತಿ ತಂಡವು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ, ಕೇವಲ 7 ಓವರ್ಗಳಲ್ಲಿಯೇ ಗೆಲುವಿನ ದಡ ಸೇರುವ ಮೂಲಕ ಜಯಭೇರಿ ಬಾರಿಸಿತು. ಒಟ್ಟೂ 8 ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ವಿಜೇತ ಶಿವಶಕ್ತಿ ತಂಡವು ಆಕರ್ಷಕ ಟ್ರೋಫಿಯೊಂದಿಗೆ 1,55,555 ರೂ. ಗಳ ಬೃಹತ್ ನಗದು ಬಹುಮಾನವನ್ನು ಪಡೆದು ಸಂಭ್ರಮಿಸಿತು. ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟ ಶಿವಂ...
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
KDCC ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾ ಜಿದ್ದಿನ ಹಣಾಹಣಿ ಏರ್ಪಟ್ಟು, ಅಂತಿಮವಾಗಿ ಜೊಯಿಡಾದ ಕೃಷ್ಣ ದೇಸಾಯಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ KDCC ಬ್ಯಾಂಕಿನ ಚುನಾವಣೆ ಎರಡು ಘಟಾನುಘಟಿ ನಾಯಕರ ನಡುವೆ ಜಿದ್ದು ಏರ್ಪಟ್ಟಿತ್ತು. ಮಾಜಿ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ತಂಡದ ನಡುವೆ ನಡೆದ ನೇರ ಹಣಾಹಣಿಯಲ್ಲಿ ಹೆಬ್ಬಾರ್ ತಂಡ ಜಯಗಳಿಸಿತ್ತು. 16 ನಿರ್ದೇಶಕ ಸ್ಥಾನಕ್ಕಾಗಿ ನಡೆದ ಚುನಾವವಣೆಯಲ್ಲಿ ಹೆಬ್ಬಾರ್ ತಂಡದ 11 ನಿರ್ದೇಶಕರು ಆಯ್ಕೆಯಾದರೆ, ಸಚಿವರ ತಂಡದ ಕೇವಲ 5 ನಿರ್ದೇಶಕರು ಗೆದ್ದು ಈ ಅಂತರ್ಯುದ್ಧದಲ್ಲಿ ವೈದ್ಯರ ಟೀಂ ಸೋತು ಮಕಾಡೆ ಮಲಗಿತ್ತು. ಈ ಚುನಾವಣೆಯಲ್ಲಿ ಹೆಬ್ಬಾರ್ ಮತ್ತೊಮ್ಮೆ ತನ್ನ ಚುನಾವಣಾ ನೈಪುಣ್ಯತೆಯನ್ನು ತೋರಿಸಿದ್ದರು. ಕೆಡಿಸಿಸಿ ಯ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕೆಲ ಕ್ಷೇತ್ರದ ಅಭ್ಯರ್ಥಿಗಳು ನ್ಯಾಯಾಲಯದ ಮೋರೆ ಹೋದ ಪರಿಣಾಮ ಅಂತಿಮ ಫಲಿತಾಂಶ...









