ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

 ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು ಕಾಣೆಯಾಗಿರೋ ಬಗ್ಗೆ ದೂರು ನೀಡಿದ್ದರು ಹೀಗಾಗಿ, ಬೆಳ್ಳಂ ಬೆಳಿಗ್ಗೆಯೇ ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ಕಾಣೆಯಾಗಿದ್ದ ಬಾಲಕನ ಪತ್ತೆಗೆ ಮುಂದಾಗಿ, ತುಂಬರ್ಗಿ ರಸ್ತೆಯಲ್ಲಿರೊ ಗೌಡನಕಟ್ಟಿ ಕೆರೆಯ ದಂಡೆಯ ಮೇಲೆ ಬಾಲಕನ ಬಟ್ಟೆ ಬರೆಗಳು ಪತ್ತೆಯಾಗಿದ್ದವು. ಹೀಗಾಗಿ, ಅಗ್ನಿಶಾಮಕ ಸಿಬ್ಬಂದಿ ಬಾಲಕನ ಶೋಧ ಕಾರ್ಯ ನಡೆಸಿ ಶವ ಪತ್ತೆ ಹಚ್ಚಿದ್ದಾರೆ. ಪೋಷಕರ ಆಕ್ರಂಧನ ಮುಗಿಲು...

ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು ಕಾಣೆಯಾಗಿರೋ ಬಗ್ಗೆ ದೂರು ನೀಡಿದ್ದಾರೆ. ಹೀಗಾಗಿ, ಬೆಳ್ಳಂ ಬೆಳಿಗ್ಗೆಯೇ ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾಣೆಯಾಗಿದ್ದ ಬಾಲಕನ ಪತ್ತೆಗೆ ಮುಂದಾಗಿದ್ದಾಗ, ತುಂಬರ್ಗಿ ರಸ್ತೆಯಲ್ಲಿರೊ ಗೌಡನಕಟ್ಟಿ ಕೆರೆಯ ದಂಡೆಯ ಮೇಲೆ ಬಾಲಕನ ಬಟ್ಟೆ ಬರೆಗಳು ಪತ್ತೆಯಾಗಿವೆ. ಹೀಗಾಗಿ, ಕೆರೆಯಲ್ಲಿ ಬಾಲಕ ನೀರುಪಾಲಾಗಿರೋ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನಿಗಾಗಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!

ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಂದ ಇರಿದ ಸಮೀರ್ ನನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಪೊಲೀಸರು ಬಲೆ ಬೀಸಿದ್ದಾರೆ.

ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

 ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮೂರು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಮೋದಿಯವರ ಕಾರ್ಯಕ್ರಮ ಮೆಚ್ಚಿ ಅವರ ನಾಯಕತ್ವದಲ್ಲಿ ಹೆಜ್ಹೆ ಹಾಕಲು ದೇವೆಗೌಡರು ತೀರ್ಮಾನ ಮಾಡಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯವರು ಚನ್ನಪಟ್ಟಣದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ಇವತ್ತು ಕೇಂದ್ರ ಸಚಿವರಾಗಿ ಕೆಲಸ ಮಾಡ್ತಿದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳಿವೆ. ಅಲ್ಲಿ, JDS ಯಾವುದೇ...

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್‌ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್‌ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್‌. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್‌ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್ ಆಕಾಂಕ್ಷಿಗಳು. * ಟಿಕೆಟ್ ಬೇಕೆಂದು ದೆಹಲಿಯಲ್ಲಿ ಬೀಡು ಬಿಟ್ಟ ಟಿಕೆಟ್‌ ಆಕಾಂಕ್ಷಿಗಳು. * ಜಾತಿ ಲೆಕ್ಕಾಚಾರ ಹಾಕಿಕೊಂಡು ಟಿಕೆಟ್ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ. * ಒಂದು ವೇಳೆ ಟಿಕೆಟ್ ಕೈತಪ್ಪಿದ್ದೆ ಆದಲ್ಲಿ ಬಂಡಾಯದ ಬಿಸಿ ತಟ್ಟಿಸಲು ಚಿಂತನೆ. * ಟಿಕೆಟ್ ಆಕಾಂಕ್ಷಿಗಳು ಬಂಡಾಯ ಏಳದಂತೆ ದೆಹಲಿಯಲ್ಲಿ ಚರ್ಚೆ ನಡೆಸಿದ ನಾಯಕರು. * ಎರಡೂ ರಾಷ್ಟ್ರೀಯ ಪಕ್ಷಗಳಿಗೂ ತಟ್ಟಲಿದೆ ಬಂಡಾಯದ ಬಿಸಿ. ಇದು...

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ ಅವರು ಉಪಸ್ಥಿತರಿದ್ದರು. ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ.28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ.‌ ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ‌ ಘೋಷಣೆಯಾಗಿದೆ‌. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ. 12-11-2024 (ಮಂಗಳವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 13-11-2024 (ಬುಧವಾರ) ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದೆ. 15-11-2024 (ಶುಕ್ರವಾರ) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. 23-11-2024 ಶನಿವಾರ, ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನವಾಗಿದೆ. ಅವತ್ತು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ‌ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ 25-11-2024 (ಸೋಮವಾರ) ರಂದು ಮತದಾನವನ್ನು ನಡೆಸಬಹುದಾಗಿದೆ. ಆ ದಿನ ಬೆಳಿಗ್ಗೆ 7-00...

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಬಾಲಕನ ತಾಯಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಹೀಗಾಗಿ ಅಂಬ್ಯುಲೆನ್ಸ್ ಮೂಲಕ ಅವ್ರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಕುಟುಂಬಸ್ಥರ ಆಕ್ರಂಧನ ಮುಗಿಲಿ ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದಗ ಮೂಲದ ಜಕ್ಕಣ್ಣಗೌಡ‌ರ್(56) ಮೃತ ತಹಶೀಲ್ದಾರರಾಗಿದ್ದಾರೆ. ಜಕ್ಕಣ್ಣಗೌಡರ್‌ ಅವರು ಬೆಂಗಳೂರಿಗೆ ಅ.14ರಂದು ಹೋಗೊದ್ದರು. ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ನಿನ್ನೆ ರಾತ್ರಿ 9ರ ಸುಮಾರಿಗೆ ಅವರು ಲಾಡ್ಜ್ ರೂಮ್‌ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗದಗ ಮೂಲದ 56 ವರ್ಷದ ಜಕ್ಕಣ್ಣ ಗೌಡರ್, ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಅ.14ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದರು. ಆದ್ರೆ, ನಿನ್ನೆ ಬೆಳಗ್ಗೆಯಿಂದ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ತೀರ್ಥಹಳ್ಳಿ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ಸಂಪರ್ಕ ಮಾಡಿದ್ದಾರೆ. ನಂತರ ರಾತ್ರಿ 8ರ ಸುಮಾರಿಗೆ ಲಾಡ್ಜ್‌ಗೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ, ರೂಮ್ ಬಾಗಿಲು ಓಪನ್ ಮಾಡಿದ್ದಾರೆ. ಆಗ ಜಕ್ಕಣ್ಣ ಗೌಡರ್‌ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಆದ್ರೆ ಇದುವರೆಗೆ ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಉಪ್ಪಾರಪೇಟೆ...

error: Content is protected !!