Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.
Top Stories
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!
ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..!
ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!
ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!
ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?
ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!
ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..!
ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನದ ಬೆಲೆ! ಈಗ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!
5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?
Shiggaon Murder News; ಶಿಗ್ಗಾವಿ: ಪಟ್ಟಣದ ಹೊರವಲಯದ ಖಾಸಗಿ ಶಾಲೆಯ ಹತ್ತಿರ, ಇಟ್ಟಿಗೆಗಳ ಪಕ್ಕ CRPF ಯೋಧನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಗೆ ತಲುಪಿರೋ ಶವದ ಸುತ್ತ ಹಲವು ಅನುಮಾನಗಳು ಸುಳಿದಾಡುತ್ತಿವೆ. ಬಹುತೇಕ, ಮರ್ಡರ್ ಮಾಡಿ, ಇಲ್ಲಿ ತಂದು ಬೀಸಾಕಿದ್ದಾರಾ ದುಷ್ಕರ್ಮಿಗಳು..? ಅನ್ನೊ ಅನುಮಾನ ಪೊಲೀಸರಿಗೆ ಕಾಡುತ್ತಿದೆ. ಅಂದಹಾಗೆ, ಪಟ್ಟಣದ ಹೊರವಲಯದ ಪಿನಿಕ್ಸ್ ಶಾಲೆಯ ಹತ್ತಿರ ಎನ್ ಎಚ್ 48 ರಸ್ತೆಯ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರೊ ಯೋಧ, ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ತಾಳನಕೊಪ್ಪಲು ಗ್ರಾಮದವನು ಅನ್ನೋ ಪ್ರಾಥಮಿಕ ಮಾಹಿತಿ ಲಭಿಸಿದೆ. ತಾರೇಶ್ ಎನ್.ಬಿ. ಎಂಬುವವನೇ ಇಲ್ಲಿ ಹೆಣವಾಗಿ ಬಿದ್ದಿದ್ದಾನೆ. ಅಸಲು, ಶವದ ಪಕ್ಕದಲ್ಲಿ ಬಿದ್ದಿದ್ದ ಐಡಿ ಕಾರ್ಡಿನಿಂದ ಈ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಇಟ್ಟಂಗಿ ಭಟ್ಟಿಯ ಹಿಂಭಾಗದಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಎಫ್.ಎಸ್.ಎಲ್ ಅಧಿಕಾರಿಗಳು, ಶಿಗ್ಗಾವಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!
Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ ಮೀರಿದ ದು:ಖ ಎದುರಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ👉 ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..! Kodi Sri Astrology; ಮನುಷ್ಯ ಓಡಾಡುತ್ತಲೆ ಸಾಯುತ್ತಾನೆ ಎಂದು ಹೇಳಿದ್ದೆ. ಇನ್ನಷ್ಟು ಅಸ್ಥಿರತೆ ಹೆಚ್ಚಾಗಲಿದೆ ಎಂದಿದ್ದಾರೆ. ”ಸೂಳೆಯ ಮಗನುಟ್ಟಿ ಆಳುವನು ಮುನಿಪುರವ ಯುದ್ಧವಿಲ್ಲದ ಮಡಿಯೇ ಪುರವೆಲ್ಲ ಕೂಳಾದೀತು’ ಎಂದು ಮಾರ್ಮಿಕವಾಗಿ ಸ್ವಾಮೀಜಿ ಹೇಳಿದ್ದಾರೆ. ಇದನ್ನು ಬರೆದಿಟ್ಟುಕೊಳ್ಳಿ. ಇದಕ್ಕೆ ಪರಿಹಾರ ಆಮೇಲೆ ಸೂಚಿಸುತ್ತೇನೆ ಎಂದಿದ್ದಾರೆ. ಒಟ್ಟಾರೆ ಕೋಡಿಶ್ರೀ ಭವಿಷ್ಯದ...
ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..!
Education News: ಖಾಸಗಿ ವಿದ್ಯಾ ಸಂಸ್ಥೆಗಳಿಗಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಪೂರ್ವ ಪ್ರಾಥಮಿಕ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ಹುಕ್ಕೇರಿ ತಾಲೂಕಿನ 478 ಅಂಗನವಾಡಿ ಕೇಂದ್ರಗಳ ಪೈಕಿ ಆಯ್ದ 78 ಕೇಂದ್ರಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪಠ್ಯ ಬೋಧಿಸಲು ಸಿದ್ಧತಾ ಕಾರ್ಯಕ್ರಗಳು ಭರದಿಂದ ಸಾಗಿವೆ. ಪೋಷಕರ ಆಂಗ್ಲ ಮಾಧ್ಯಮ ಶಿಕ್ಷಣ ಮತ್ತು ಖಾಸಗಿ ಶಾಲೆಗಳ ವ್ಯಾಮೋಹವನ್ನೇ ಬಂಡವಾಳ ಮಾಡಿಕೊಂಡು ಪ್ರೀಕೆಜಿ ಹೆಸರಿನಲ್ಲಿ ಲಕ್ಷಾಂತರ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸುತ್ತಿದೆ. ಇದರೊಂದಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾಥಮಿಕ ಪೂರ್ವ ಮಕ್ಕಳಿಗೆ ಕಥೆ, ಹಾಡು, ಆಟಗಳೊಂದಿಗೆ ಪಾಠ ಹೇಳಲು ಸಿದ್ಧತೆ ನಡೆಸಲಾಗಿದೆ.ಹುಕ್ಕೇರಿ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ 78 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ...
ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!
Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
Gold Price Today: ಯುರೋಪ್ನಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಟ್ಟದಲ್ಲಿ ಅಶಾಂತಿ ಹೆಚ್ಚಿಸಲು ಎಡೆಮಾಡಿಕೊಟ್ಟಿದ್ದೆ. ಇರಾನ್ ಹಾಗೂ ಇಸ್ರೇಲ್ ನಡುವೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಷೇರುಪೇಟೆ, ಕಮೋಡಿಟಿ ಮಾರುಕಟ್ಟೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದ್ರಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಚಿನ್ನ-ಬೆಳ್ಳಿ, ಬಾಂಡ್ನಂತವುಗಳ ಮೇಲೆ ಮೊರೆ ಹೋಗಿದ್ದಾರೆ. ಭಾರತದ ಷೇರುಪೇಟೆ ಶುಕ್ರವಾರ ಭರ್ಜರಿ ಕಂಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 1000ಕ್ಕೂ ಅಧಿಕ ಪಾಯಿಂಟ್ಸ್, ನಿಫ್ಟಿ 25000 ಗಡಿದಾಟಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದ್ರ ನಡುವೆ ಸತತ ಏರಿಕೆಯಾಗಿದ್ದ ಬಂಗಾರದ ಬೆಲೆಯು ವೀಕೆಂಡ್ನಲ್ಲಿ ಸ್ವಲ್ಪ ತಗ್ಗಿರುವುದು ಆಭರಣ ಪ್ರಿಯರಿಗೆ ಖುಷಿಯನ್ನು ಮೂಡಿಸಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಜೊತೆಗೆ ಇದೀಗ ಇಸ್ರೇಲ್-ಇರಾನ್ ನಡುವೆ ಸಂಘರ್ಷ ಉಂಟಾಗಿರುವುದು ಜಾಗತಿಕ ರಾಜಕೀಯ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಮಧ್ಯಪ್ರಾಚ್ಯದಲ್ಲಿ ಎರಡು ಶಕ್ತಿಶಾಲಿ ಮಿಲಿಟರಿ ಪವರ್ಗಳ ನಡುವಿನ ಈ ಸಂಘರ್ಷವು ಜಗತ್ತಿನಾದ್ಯಂತ ಹೂಡಿಕೆದಾರರಿಗೆ ಸಾಕಷ್ಟು...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್,...
ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!
Sea Bird News; ಕಾರವಾರ; ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ ಹೆಚ್ಚುವರಿ ಪರಿಹಾರದ ಮೊತ್ತ ರೂ.10.47 ಕೋಟಿಗಳನ್ನು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ಥ ಭೂ ಮಾಲೀಕರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡಿದ ಸಚಿವರು, ನೌಕನೆಲೆಗೆ ಅಗತ್ಯವಿರುವ ಜಮೀನು ಮತ್ತು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಾರವಾರ ತಾಲೂಕಿನ ಜನತೆ ಕಲ್ಪಿಸಿ ನೌಕಾನೆಲೆ ನಿರ್ಮಿಸಲು ಸಹಕಾರ ನೀಡಿದ್ದಾರೆ. ಪ್ರಸ್ತುತ ಹೆಚ್ಚುವರಿ ಪರಿಹಾರದ ಮೊತ್ತ 10.47 ಕೋಟಿ ಮಾತ್ರ ಬಂದಿದ್ದು, ಇನ್ನೂ 60 ಕೋಟಿ ರೂ ಗಳ ಪರಿಹಾರದ ಮೊತ್ತ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದು, ಶೀಘ್ರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಸಂಸದರು ಈ ಬಗ್ಗೆ ಪ್ರಯತ್ನ ನಡೆಸುವಂತೆ ಹಾಗೂ ಇದಕ್ಕಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಕಾರ್ಯಕ್ರದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿದ್ದ...
ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ
Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ ಹೋಬಳಿಯ ಕಣಸಗಿರಿ ಗ್ರಾಮದಲ್ಲಿ ನಿರ್ಮಿಸಲಾದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದರು. ಗೋವು ತಾಯಿಗೆ ಸಮಾನ ಅವುಗಳು ಅನಾಥವಾಗಿ ಬಿಡದೇ , ಸೂಕ್ತ ರೀತಿಯಲ್ಲಿ ರಕ್ಷಣೆ ಮಾಡುವ ಉದ್ದೇಶದಿಂದ ಗೋಶಾಲೆಯನ್ನು ರೂ. 50 ಲಕ್ಷ ವೆಚ್ಚದಲ್ಲಿ ತೆರೆಯಲಾಗಿದೆ ಎಂದ ಸಚಿವರು, ರಾಜ್ಯದಲ್ಲಿ ಎಲ್ಲಾ ಕಡೆ ಗೋಶಾಲೆ ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 6 ಕಡೆ ಗೋಶಾಲೆ ತೆರೆಯಲಾಗಿದೆ. ಅನಾಥ ಗೋವುಗಳನ್ನು ರಕ್ಷಿಸಿ, ಗೋಶಾಲೆಗಳಲ್ಲಿ ಸಾಕಲಾಗುತ್ತದೆ. ಪೋಲಿಸ್...