ಕಾರವಾರ; ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ನಗರಸ್ಥಳಿಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ಖಾಸಗಿ ಬಾವಿಗಳು, ಬಾಡಿಗೆ ಬೋರ್ ವೆಲ್ ಗಳನ್ನು ಬಳಸಿಕೊಳ್ಳುವುದು, ಟ್ಯಾಂಕರ್ ಮೂಲಕ ನೀರಿ ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು. ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪಶುಪಾಲನಾ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಬ್ರವರಿ 14 ಮತ್ತು 15 ರಂದು ಶಾಖದ ಅಲೆಯ ವಾತಾವರಣವಿರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಈ ಕೆಳಕಂಡಂತೆ ಎಚ್ಚರವಹಿಸಲು ತಿಳಿಸಿದೆ. ಉಷ್ಣ ಅಲೆ ಸಂದರ್ಭದಲ್ಲಿ ಏನು ಮಾಡಬೇಕು..? ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು, ದಾಹವಾಗದಿದ್ದರೂ ನೀರನ್ನು ಸೇವಿಸಬೇಕು, ಓ.ಆರ್.ಎಸ್, ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು ಮುಂತಾದ ದ್ರವಗಳನ್ನು ಸೇವಿಸಬೇಕು, ಹಗುರವಾದ, ತೆಳುವಾದ ಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು, ತಲೆ ಮತ್ತು ಮುಖವನ್ನು ಟೋಪಿ, ಛತ್ರಿ, ಗಮಚಾ ಅಥವಾ ರುಮಾಲಿನಿಂದ ಮುಚ್ಚಿಕೊಳ್ಳಬೇಕು, ಸಾಧ್ಯವಾದಷ್ಟು ತೀವ್ರ ಬಿಸಿಲಿನ ಸಮಯದಲ್ಲಿ (ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ) ಹೊರಗೆ ಹೋಗುವುದನ್ನು ತಪ್ಪಿಸಬೇಕು, ಹೊರಗೆ ಕೆಲಸ ಮಾಡುವಾಗ ನೆರಳಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಬೇಕು, ಮಕ್ಕಳು, ವೃದ್ಧರು, ಗರ್ಭಿಣಿಯರು ಮತ್ತು ಅಸ್ವಸ್ಥರಿಗೆ ವಿಶೇಷ ಕಾಳಜಿ ವಹಿಸಬೇಕು. ದೇಹದಲ್ಲಿ ತಲೆಸುತ್ತು, ಅತಿಯಾದ ದೌರ್ಬಲ್ಯ, ವಾಂತಿ, ಜ್ವರದ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು, ಮನೆ ಮತ್ತು...
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕೆಂಪುಕೋಟೆ ದಾಳಿ ಮತ್ತು ಜೈಶ್ ನಂಟು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸಲ್ಲಿಸಲಾದ ಇತ್ತೀಚಿನ ವರದಿಯ ಪ್ರಕಾರ, ನವೆಂಬರ್ 9 ರಂದು ನವದೆಹಲಿಯ ಕೆಂಪುಕೋಟೆಯ ಮೇಲೆ ನಡೆದ ದಾಳಿಯ ಹೊಣೆಯನ್ನು ಜೈಶ್-ಎ-ಮೊಹಮ್ಮದ್ ಹೊತ್ತುಕೊಂಡಿದೆ ಎಂದು ಸದಸ್ಯ ರಾಷ್ಟ್ರವೊಂದು ಮಾಹಿತಿ ನೀಡಿದೆ. ಈ ಭೀಕರ ದಾಳಿಯಲ್ಲಿ 15 ಜನರು ಮೃತಪಟ್ಟಿದ್ದರು. ಯುನೆಸ್ಕೋ ಪರಂಪರೆಯ ತಾಣ ಮತ್ತು ಭಾರತದ ಸಾರ್ವಭೌಮತ್ವದ ಸಂಕೇತವಾಗಿರುವ ಕೆಂಪುಕೋಟೆಯ ಮೇಲೆ ಉಗ್ರರು ಕಣ್ಣಿಟ್ಟಿರುವುದು ಪ್ರಾದೇಶಿಕ ಭದ್ರತೆಯ ದೃಷ್ಟಿಯಿಂದ ಗಂಭೀರ ವಿಷಯವಾಗಿದೆ ಎಂದು ಹೇಳಿದೆ. ಜಮಾತ್-ಉಲ್-ಮುಮಿನಾತ್’: ಹೊಸ ಮಹಿಳಾ ಘಟಕ ಜೈಶ್ ಸಂಘಟನೆಯ...
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಗ್ರಾಮ ಪಂಚಾಯತ್ ಗಳು ಸ್ಥಳಿಯ ಸಾರ್ವಜನಿಕರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸುವ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ಎಸ್ ವೈದ್ಯ ಹೇಳಿದರು. ಅವರು ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಗ್ರಾಮದ ಜನತೆಯ ಸಮಸ್ಯೆ ಗಳನ್ನು ಗ್ರಾಮಗಳಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಸರ್ಕಾರವು ಹಲವು ಸೇವೆಗಳನ್ನು ಪoಚಾಯತ್ ಮೂಲಕವೇ ನೀಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಪoಚಾಯತ್ ಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ ಅವುಗಳನ್ನು ಬಗೆಹರಿಸಿಕೊಡಬೇಕು ಎಂದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ, ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಜನರ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲಾಗಿದ್ದು ಈ ಭಾಗದ ಕಾಲೇಜಿನ ಕಟ್ಟಡಕ್ಕೂ ಅನುದಾನ ಒದಗಿಸಿದೆ. ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಶಾಂತಾ...
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್ ಬರಲಿದ್ದಾರೆ. ಈ ಹಿಂದೆ ಪಿಎಸ್ ಐ ಆಗಿದ್ದ ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಗೌಡರ್ ನಿಯುಕ್ತಿಗೊಂಡಿದ್ದಾರೆ. ಅಸಲು, ಕಳೆದ ಕೆಲವೇ ತಿಂಗಳುಗಳ ಹಿಂದೆ ಮುಂಡಗೋಡ ಠಾಣೆಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ಯಲ್ಲಾಲಿಂಗ್ ಕುನ್ನೂರ್ ವರ್ಗಾವಣೆಯಾಗಿ ಯಲ್ಲಾಪುರದಿಂದ ಬಂದಿದ್ದರು.ಆದ್ರೆ, ತೀವ್ರ ಅನಾರೋಗ್ಯದಿಂದ ಬಳಲಿದ ಅವ್ರು ಕಳೆದ ಮಂಗಳವಾರ ನಿಧನರಾಗಿದ್ದರು. ಹೀಗಾಗಿ, ಖಾಲಿ ಇದ್ದ ಹುದ್ದೆಗೆ ಮಂಜುನಾಥ್ ಗೌಡರ್ ರನ್ನು ನೇಮಕಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ.
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಶ್ರೀ ಕ್ಷೇತ್ರ ಮೈಲಾರ: ಸಂಪಾಯಿತಲೇ ಪರಾಕ್. ಇದು ನಾಡಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಯ 125ನೇ ಕಾರ್ಣಿಕೋತ್ಸವ ನುಡಿ. ಮೈಲಾರಲಿಂಗೇಶ್ವರ ಸ್ವಾಮಿ ಮೈಲಾರ ಪುಣ್ಯ ಭೂಮಿ ಡೆಂಕಣ ಮರಡಿಯಲ್ಲಿ ಲಕ್ಷಾಂತರ ಭಕ್ತರ ಸಮೂಹದ ಮಧ್ಯೆ ತುಪ್ಪ ಸವರಿದ 20 ಅಡಿ ಎತ್ತರದ ಐತಿಹಾಸಿಕ ಬಿಲ್ಲನ್ನೇರಿದ ಗೊರವಯ್ಯ ಕಾರ್ಣಿಕದ ರಾಮಣ್ಣ ದಶ ದಿಕ್ಕುಗಳತ್ತ ನೋಡುತ್ತ ಸದ್ದಲೇ.. ಎಂದು ಕೂಗಿದ ಕೂಡಲೇ ಕಾರ್ಣಿಕದ ಸ್ಥಳದ ಡೆಂಕಣ ಮರಡಿಯಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು, ಸೇರಿದಂತೆ ಪಶು, ಪಕ್ಷಿಗಳೆಲ್ಲ ಕ್ಷಣ ಕಾಲ ಮೌನವಾಗಿದ್ದವು. ಆಗ ಕಾರ್ಣಿಕದ ಗೊರವಯ್ಯ ಸಂಪಾಯಿತಲೇ ಪರಾಕ್ ಎಂದು ನಾಡಿನ ಭವಿಷ್ಯ ನುಡಿದ. ನಾಡಿನ ನಾನಾ ಕಡೆಗಳಿಂದ ಆಗಮಿಸಿದ್ದ 10 ಲಕ್ಷಕ್ಕೂ ಹೆಚ್ಚು ಭಕ್ತರು, ಕಾರ್ಣಿಕ ನುಡಿ ಆಲಿಸಿ ಪುನೀತರಾದರು. ಕಾರ್ಣಿಕೋತ್ಸವ ಮುಗಿದ ಕೂಡಲೇ ಕಾರ್ಣಿಕೋತ್ಸವದ ನಾನಾ ಗೂಡಾರ್ಥಗಳನ್ನು ತಮ್ಮೊಳಗೆ ತಾವು ಚರ್ಚಿಸುತ್ತಿರುವುದು ಕಂಡು ಬಂತು. ಈ ಭವಿಷ್ಯ ನುಡಿಯು ಕೃಷಿ, ವಾಣಿಜ್ಯ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಕ್ಕೆ ಹೆಚ್ಚು ಅನ್ವಯವಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ....
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ವಿಧಿವಶರಾಗಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿ ಸಿಕ್ಕಿದೆ. 33 ವರ್ಷ ವಯಸ್ಸಿನ ಅವ್ರು ಈಗ್ಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ರು. ಹೀಗಾಗಿ, ಅವ್ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮುಂಡಗೋಡಿಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಬಂದಿದ್ದ, ಯಲ್ಲಾಲಿಂಗ್ ಕುನ್ನೂರ್ ಜನಾನುರಾಗಿಯಾಗಿದ್ದರು. ಅದಕ್ಕೂ ಮೊದಲು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಓರ್ವ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಂತಾಪ..! ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಹೊರಬೀಡು ದಿನದಂದು ಪಟ್ಟಣದ ಅಂಬೇಡ್ಕರ್ ಓಣಿಯ ಬಸವರಾಜ ಮಲ್ಲಪ್ಪ ಚಲವಾದಿ ಎಂಬುವವರ ಮನೆ ಕಳ್ಳತನ ಮಾಡಿದ್ದ, ಅಂತರ ಜಿಲ್ಲಾ ಕಳ್ಳನನ್ನು ಹೆಡೆ ಮುರಿಕಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಹಳ್ಳಿಯ, ಮಂಜುನಾಥ ಬಸವಂತಪ್ಪ ನಾಯಕ (34) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಜನೆವರಿ 27 ರಂದು ಮಂಗಳವಾರ ಹೋರಬೀಡುವಿನ ದಿನ, ಮುಂಡಗೋಡ ಪಟ್ಟಣದ ಅಂಬೇಡ್ಕರ ಓಣಿಯಲ್ಲಿರುವ ಮನೆಯ ಮುಂದಿನ ಬಾಗಿಲನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಒಡೆದು ತೆಗೆದು ಒಳಗಡೆ ಹೋಗಿ ರೂಮನಲ್ಲಿದ್ದ ಟ್ರಜರಿಯ ಬಾಗಿಲುನ್ನು ಮುರಿದು ಟ್ರಜರಿಯಲ್ಲಿಟ್ಟಿದ್ದ 96 ಸಾವಿರ ಮೌಲ್ಯದ 6 ಗ್ರಾಂ ಬಂಗಾರದ ಗುಂಡಿನ ಸರ, 64 ಸಾವಿರ ಮೌಲ್ಯದ 4 ಗ್ರಾಂ ಬಂಗಾರದ ಎರ್ ರಿಂಗ್, 16 ಸಾವಿರ ಮೌಲ್ಯದ 1 ಗ್ರಾಂ ಬಂಗಾರದ 03 ಗುಂಡುಗಳ ಇರುವ ಲಕ್ಷ್ಮೀ ಲಾಕೆಟ್, 48 ಸಾವಿರ 03 ಗ್ರಾಂ ಬಂಗಾರದ ಉಂಗುರ, 16ಸಾವಿರ ಮೌಲ್ಯದ 01 ಗ್ರಾಂ ಬಂಗಾರದ ಸೈಡ್...
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಶಿವಾನಂದನ ಕೊಲೆಯತ್ನ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕೆಲವು ಘಂಟೆಗಳಲ್ಲಿ ಆರೋಪಿಯನ್ನ ಹೆಡೆಮುರಿ ಕಟ್ಟಿದ್ದಾರೆ. ಕೃತ್ಯ ನಡೆಸಿ ಪರಾರಿಯಾಗಿದ್ದ ಶಿವರಾಜನನ್ನ ಎಳೆದು ತಂದಿದ್ದಾರೆ. ಹೀಗಾಗಿ, ಬೆಂಗಳೂರಿಗೆ ಪರಾರಿಯಾಗಲು ಹೊಂಚು ಹಾಕಿದ್ದವ, ಮುಂಡಗೋಡ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ಸಾರಥ್ಯದ ಕ್ರೈಂ ಟೀಮಿನ ಚಾಣಾಕ್ಷತನದ ಬಲೆಗೆ ರೋಚಕವಾಗಿ ಬಿದ್ದು ಬಿಟ್ಟಿದ್ದಾನೆ. ಅದು ಗುರುವಾರ ಸಂಜೆ..! ಯಸ್, ತಟ್ಟಿಹಳ್ಳಿಯಲ್ಲಿ ತನ್ನ ತಾಯಿಗೆ ಕಿರುಕುಳ ನೀಡುತ್ತಿದ್ದ ಶಿವಾನಂದನಿಗೆ ಒಂದು ಗತಿ ಕಾಣಿಸಲು ರೆಡಿಯಾಗಿದ್ದ ಶಿವರಾಜ, ಅವತ್ತು ತನ್ನ ತಾಯಿ ಫೋನ್ ಕಾಲ್ ಮಾಡಿ ಬಂದುಬಿಡು ಅಂತಾ ಕರೆದಿದ್ದಾಗಲೇ ನೇರವಾಗಿ ತಟ್ಟಿಹಳ್ಳಿಗೆ ಬಂದಿದ್ದ, ನನ್ನ ತಾಯಿಗೆ ಹಂಗ್ಯಾಕೆ ಕಿರುಕುಳ ಕೊಡ್ತಿದಿಯ..? ಅಂತಾ ತನ್ನ ಎರಡನೇ ತಂದೆ ಶಿವಾನಂದನಿಗೆ ಏರುದನಿಯಲ್ಲಿ ಪ್ರಶ್ನಿಸಿದ್ದ. ಅಷ್ಟೆ, ಮಾತಿಗೆ ಮಾತು ಬೆಳೆದು ಮಚ್ಚಿನಿಂದ ಶಿವಾನಂದನಿಗೆ ಮನಸೋ ಇಚ್ಚೆ ಚಚ್ಚಿ ಬಿಟ್ಟಿದ್ದ. ಪರಿಣಾಮ ಶಿವಾನಂದ ರಕ್ತದ ಮಡುವಿನಲ್ಲಿ ಬಿದ್ದು ಇನ್ನೇನು ಸತ್ತೇ ಹೋಗ್ತಾನೆ...
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ ಸಂಜೆ ನಡೆದ ಭೀಕರ ಹತ್ಯೆ ಯತ್ನ ಕೇಸಿನ ಅಸಲೀಯತ್ತು ಬಟಾಬಯಲಾಗಿದೆ. ಅಂದಹಾಗೆ, ಅಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದವನ ಹೆಸರು ಶಿವಾನಂದ ರಾಮಣ್ಣ ಗುಡಿಯಾಳ, ವಯಸ್ಸು 48 ವರ್ಷ. ಅಷ್ಟಕ್ಕೂ, ಹಾಗೆ ರಕ್ತದ ಮಡುವಿನಲ್ಲಿ ಬೀಳುವಂತೆ ಕತ್ತಿಗೆ ಬಲವಾಗಿ ಮಚ್ಚಿನಿಂದ ಕತ್ತರಿಸಿದ್ದವನ ಹೆಸರು ಶಿವರಾಜ್ ಕಲಕಟ್ಟಿ..! ಅನುಮಾನದ ಪಿಶಾಚಿ..! ಅಸಲು, ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಗ್ರಾಮದ ಲಾರಿಚಾಲಕ ಶಿವಾನಂದ ರಾಮಣ್ಣ ಗುಡಿಯಾಳ(48) ಈ ಹಿಂದೆ ಎರಡೆರಡು ಮದುವೆಯಾಗಿದ್ದ. ಆದ್ರೆ, ಇಬ್ಬರು ಪತ್ನಿಯರು ಸಾವನ್ನಪ್ಪಿದ ನಂತರ ಕಳೆದ ಒಂದೂವರೆ ವರ್ಷದ ಹಿಂದೆ ಹಾನಗಲ್ ತಾಲೂಕು ಮಹರಾಜಪೇಟೆ ಎಂಬ ಗ್ರಾಮದ ಗಂಡ ಸತ್ತಿದ್ದ ಮಹಿಳೆ ನಾಗಮ್ಮ ಪರಸಪ್ಪ ಕಲಕಟ್ಟಿ ಎಂಬವಳನ್ನು ಮೂರನೇ ಮದುವೆಯಾಗಿದ್ದ. ಅಸಲು, ಈ ಮಹಿಳೆಗೆ ಶಿವರಾಜ ಪರಸಪ್ಪ ಕಲಕಟ್ಟಿ ಎಂಬುವ 27 ವರ್ಷದ ಮಗನಿದ್ದು ಈ ಮಗನು ಹಾನಗಲ್ ತಾಲೂಕಿನಲ್ಲಿಯೆ ವಾಸವಾಗಿದ್ದ. ನಾಗಮ್ಮ ಮಾತ್ರ ಶಿವಾನಂದನ ಜೊತೆಗೆ ತಟ್ಟಿಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದಳು. ನಾಲ್ಕನೇ ಮದುವೆ...









