ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!

ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ರೈತ ಗಂಭೀರ ಗಾಯಗೊಂಡಿದ್ದು ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದಾನೆ. ರಹೀಮಖಾನ್ ಮುನ್ವರ್ಖಾನ್ ಪಾಳಾ(60) ಎಂಬುವವನೇ ಕರಡಿ ದಾಳಿಗೆ ತುತ್ತಾಗಿದ್ದ ರೈತನಾಗಿದ್ದಾನೆ. ಅಂದಹಾಗೆ, ಮುಂಡಗೋಡ ತಾಲೂಕಿನ ಗಣೇಶಪುರದ ವ್ಯಕ್ತಿ ಪಾಳಾ ಸಮೀಪದ ತನ್ನ ಗದ್ದೆಗೆ ಮಂಗನ ಕಾಯಲು ಹೋಗಿದ್ದಾಗ ಕರಡಿ ದಾಳಿ ಮಾಡಿದೆ‌. ಪರಿಣಾಮ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಚಿಕಿತ್ಸೆ ಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!

ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ ಹೂಗಾರ (30) ಮೃತ ದಂಪತಿ. 15 ದಿನಗಳ ಹಿಂದೆಯಷ್ಟೇ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದೇವರ ದರ್ಶನ ಪಡೆದು ಬರುವಾಗ ದುರಂತ ಸಂಭವಿಸಿದೆ, ಕಾರ್ತಿಕ್ ಅವರು ಪತ್ನಿ ಮತ್ತು ಸಂಬಂಧಿಕರ ಜೊತೆ ಗದಗ ಜಿಲ್ಲೆಯ ನವಲಗುಂದ ಕಾಮಣ್ಣನ ದರ್ಶನಕ್ಕೆ ಹೋಗಿದ್ದರು. ಕಾಮಣ್ಣನ ದರ್ಶನ ಪಡೆದು ಹಾವೇರಿಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ವಿಚಿತ್ರ ಅಂದರೆ ಐಶ್ವರ್ಯ ಅವರ ಗ್ರಾಮ ನೀರಲಗಿ ಕ್ರಾಸ್ ಬಳಿಯೇ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಿಗ್ಗಾವಿ ತಾಲೂಕಾಸ್ಪತ್ರೆಗೆ ತರಲಾಗಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿತ್ತು. ಹಾವೇರಿಯಲ್ಲಿ ಸಂಜೆ‌ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರಿನಿಂದ ಮೃತದೇಹಗಳನ್ನು ಹೊರತೆಗೆದರು....

ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್

ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು. ಅವರು ಶನಿವಾರ ಕ್ಯಾದಗಿಯಲ್ಲಿ ರೂ.9 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯ. ಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣವಾಗಿದ್ದು, ಹೆಚ್ಚಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ಶಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ನೀಡಿದರು. ರೋಗ ಉಲ್ಭಣಗೊಂಡ ನಂತರ ಚಿಕಿತ್ಸೆ ಪಡೆಯುವ ಬದಲು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕಾರವಾರ; ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗಾಗಿ ಸ್ವೀಕೃತಗೊಂಡ ಅರ್ಜಿಗಳನ್ನು , ಸರ್ಕಾರದ ಮಾರ್ಗಸೂಚಿಯಂತೆ ತಾಲೂಕ ಮಟ್ಟದ ಅರ್ಜಿ ಪರಿಶೀಲನಾ ಸಮಿತಿಯಲ್ಲಿ ಪರಿಶೀಲಿಸಿ , ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯನ್ನು ಫೆ.25 ರಂದು ನಡೆಸಿದ್ದು ನಿಯಮಾನುಸಾರ ಆಯ್ಕೆ ಮಾಡಿದ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ಅಂಕೋಲಾ ಅಂಗನವಾಡಿ ಕಾರ್ಯಕರ್ತೆರು 2, ಸಹಾಯಕಿ 22, ಭಟ್ಕಳ ಕಾರ್ಯಕರ್ತೆ 1, ಸಹಾಯಕಿ 16, ದಾಂಡೇಲಿ ಸಹಾಯಕಿ 9, ಹೊನ್ನಾವರ ಕಾರ್ಯಕರ್ತೆ 1, ಸಹಾಯಕಿ 11, ಕಾರವಾರ ಸಹಾಯಕಿ 8, ಕುಮಟಾ ಸಹಾಯಕಿ 8, ಮುಂಡಗೋಡ ಕಾರ್ಯಕರ್ತೆ 2, ಸಹಾಯಕಿ 12, ಸಿದ್ದಾಪುರ ಕಾರ್ಯಕರ್ತೆ 2, ಸಹಾಯಕಿ 15, ಶಿರಸಿ ಕಾರ್ಯಕರ್ತೆ 2 , ಸಹಾಯಕಿ 34, ಜೋಯಿಡಾ ಕಾರ್ಯಕರ್ತೆ 5, ಸಹಾಯಕಿ 14, ಯಲ್ಲಾಪುರ ಕಾರ್ಯಕರ್ತೆ...

ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!

ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ಟಿಬೇಟಿಯನ್ ಕಾಲೋನಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರ್, ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಅನಿಲ್ ವಡ್ಡರ್ ಎಂಬುವವನೇ ಗಾಯಗೊಂಡಿರೋ ಚಾಲಕ ಅಂತಾ ತಿಳಿದು ಬಂದಿದೆ. ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಗೊಂಡ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿಲಾಗಿದೆ.

ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!

ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!

ಕಾರವಾರ: ಶಿರಸಿ ನಗರದಲ್ಲಿ ಫೆಬ್ರವರಿ 24 ರಿಂದ ಮಾರ್ಚ್ 4 ರ ವರೆಗೆ ಶ್ರೀ ಮಾರಿಕಾಂಬಾ ಜಾತ್ರೆ ಜರುಗಲಿರುವುದರಿಂದ ಜನರ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ/ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಶಿರಸಿ ಶಹರದ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿ 77 ಮತ್ತು ರಾಷ್ಟ್ರೀಯ ಹೆದ್ದಾರಿ 766(ಇ) ಯಲ್ಲಿ ಈ ಕೆಳಗಿನಂತೆ ವಾಹನಗಳ ಸಂಚಾರ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಆದೇಶಿದ್ದಾರೆ. ಮಾರ್ಚ್ 4 ರ ಮಧ್ಯ ರಾತ್ರಿ 12 ಗಂಟೆ ರವರೆಗೆ ಶಿರಸಿ ಶಹರದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 766(ಇ) ರಲ್ಲಿ ಐದು ರಸ್ತೆ ವೃತ್ತದಿಂದ- ವಾಜಿ ಚೌಕ್, ಬಿಡ್ಡಿ ವೃತ್ತ, ಕಾಮತ ಹೋಟೆಲ್ ಕ್ರಾಸ್, ಮಂಗಳೂರ ಹೊಟೆಲ್ ಕ್ರಾಸ್‌ದಿಂದ ಕೋಟೆಕೇರೆ ವೃತ್ತದ ವರೆಗೆ ಎಲ್ಲ ತರಹದ ವಾಹನಗಳ ಸಂಚಾರನ್ನು ನಿಷೇಧಿಸಿದೆ. ಕುಮಟಾ ಸಿದ್ದಾಪುರ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ, ಶಿರಸಿ ಶಹರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766(ಇ) ರಲ್ಲಿ ಸಂಚರಿಸುವ ವಾಹನಗಳನ್ನು ಪರ್ಯಾಯ ಮಾರ್ಗವಾಗಿ...

ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!

ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!

ಕಾರವಾರ; ಜೊಯಿಡಾ ತಾಲೂಕಿನ ರಾಮನಗರದಲ್ಲಿರುವ ಧಾರವಾಡ-ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಒಂದು ಟಾಟಾ ಕಂಪನಿಯ ಟ್ಯಾಂಕರ್ ನೋಂದಣಿ ಸಂಖ್ಯೆ. . MP-09 HH-1908 ರಲ್ಲಿ 30,000 ಲೀಟರ್ Denatured rectified spirit (non potable) ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ದಾವಣೆಗೆರೆ ಶುಗರ್ ಕಂಪನಿ ಲಿಮಿಟೆಡ್ ಇಲ್ಲಿಂದ ಗೋವಾ ರಾಜ್ಯದ ಗ್ಲೋಬಲ್ ಕಮ್ ಕಾರ್ಪ್ ಕುಂಡೇಮ್, ಗೋವಾ ರಾಜ್ಯ ಇಲ್ಲಿಗೆ ಸಾಗಿಸುತ್ತಿರುವುದನ್ನು ಹಾಗೂ ಅದೇ ರೀತಿ ಇನ್ನೊಂದು ಟ್ಯಾಂಕರ್ ಲಾರಿ ನೋಂದಣಿ ಸಂಖ್ಯೆ KA-48 A-2218 ರಲ್ಲಿ ಶ್ರೀ ಸಾಯಿ ಟ್ರೇಡರ್ಸ್ & ಕಂಪನಿ, ಕೊಲೆಹಳ್ಳಿ ಹಡದಿ ರೋಡ್, ದಾವಣಗೆರೆ ತಾಲೂಕು, ದಾವಣಗೆರೆ ಜಿಲ್ಲೆ ಇಲ್ಲಿಂದ ವರ್ಧನ್ ಸಷ್ಟಿಮೆಂಟ್ಸ್ ಇಂಡಿಯಾ ಪ್ರೈ.ಲಿ. ಪಿಲರ್ನ ಇಂಡಸ್ಟ್ರೀಯಲ್ ಎಸ್ಟೇಟ್ ರಿಯಾ, ಗೋವಾ ರಾಜ್ಯ ಇಲ್ಲಿಗೆ 20,000 ಲೀಟರ್ಸ್ Ethanol (Non Potable Purpose) ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಗಿಸಲಾಗುತ್ತಿದ್ದ ವಾಹನಗಳನ್ನು ಅಬಕಾರಿ ಇಲಾಖೆಯಿಂದ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಮಂಗಳೂರು ವಿಭಾಗ,...

ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಕಾರವಾರ: ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ ಫೆ.28 ರಿಂದ ಮಾ.17 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ

ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ

ಕಾರವಾರ: ರಾಜ್ಯದಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ಸೋಮವಾರ ಕುಮಟಾ ತಾಲ್ಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗದ ಸಂಪರ್ಕ ಕಡಿತವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಒದಗಿಸಲು ಈಗಾಗಲೇ 12 ಜಿಲ್ಲೆಗಳಲ್ಲಿ 400 ಕಾಲು ಸಂಕ ನಿರ್ಮಾಣ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಹೆಚ್ಚಿನ ಸಂಖ್ಯೆಯ ಕಾಲ ಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ, ಕುಮಟಾ ಹೊನ್ನಾವರ ಭಾಗದಲ್ಲಿ ಹೆಚ್ಚಿನ ಕಾಲು ಸಂಕಗಳನ್ನು ನಿರ್ಮಾಣ ಮಾಡಲಾಗಿದ್ದು, ಅವಶ್ಯವಿರುವ ಕಡೆ ಕಾಲು ಸಂಕ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಗಳಿಗೆ ತಕ್ಷಣವೇ ಸೇತುವೆ ಮರು ನಿರ್ಮಾಣ ಮಾಡಲು ಮಂಜೂರಾತಿ ನೀಡುತ್ತಿದ್ದು,...

ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!

ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರು ಪಾಲಾಗಿರೋ ಘಟನೆ ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಜಯ್ ರಮೇಶ ಕೆರಿಹೊಂಡದವರ್ (17) ಅಂತ ಗುರುತಿಸಲಾಗಿದೆ. ಈಜಲು ತೆರಳಿದ್ದವರು..! ಅಸಲು, ನಿನ್ನೆ ರವಿವಾರ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ, ಸನವಳ್ಳಿ ಗ್ರಾಮದ ಆರು ಜನ ಸ್ನೇಹಿತರು ಸನವಳ್ಳಿ ಜಲಾಶಯಕ್ಕೆ ಈಜಲು ತೆರಳಿದ್ದರು. ಬಾಲಕರಾದ ನಾಗರಾಜ ಯಲ್ಲಪ್ಪ ಕೆರೆಹೊಲದವರ, ಚೇತನ ರವಿ ಆದಿಕರ್ನಾಟಕ, ತರುಣ ದೇವೆಂದ್ರ ನಾಗೋಜಿ, ನೀತಿನ ಲಾಲಬಹೂದ್ದೂರ ಶಾಸ್ತ್ರಿ ಕಳಸಗೇರಿ, ಪುನೀತ ಜಗದೀಶ್ ಕ್ಯಾಮನಕೇರಿ ಹಾಗೂ ಮೃತ ಬಾಲಕ ಅಜಯ್ ರಮೇಶ್ ಕೆರಿಹೊಲದವರ್ ಸನವಳ್ಳಿ ಜಲಾಶಯಕ್ಕೆ ಈಜಲು ತೆರಳಿದ್ದಾರೆ. ಈ ವೇಳೆ ಈಜಾಡುತ್ತಿದ್ದಾಗ ಆಕಸ್ಮಿಕವಾಗಿ ಮೃತ ಬಾಲಕ ಅಜಯ್ ನೀರಲ್ಲಿ ಕಾಣೆಯಾಗಿದ್ದಾನೆ. ರಾತ್ರಿಯಾದರೂ ಹೇಳಿರಲಿಲ್ಲ‌..! ಇನ್ನು, ತಮ್ಮೊಂದಿಗೆ ಈಜಲು ತೆರಳಿದ್ದ ಸ್ನೇಹಿತ ನೀರುಪಾಲಾಗಿದ್ದ ಕಾರಣಕ್ಕೆ ಅಕ್ಷರಶಃ ಗಾಬರಿಗೊಂಡಿದ್ದ ಉಳಿದ ಬಾಲಕರು, ಆ ವಿಷಯವನ್ನು ಗ್ರಾಮದಲ್ಲಿ ಯಾರಿಗೂ ಹೇಳಿರಲಿಲ್ಲ. ಆ ಓರ್ವ ಬಾಲಕ ಮಾತ್ರ ವಾಪಸ್ ಬರದೇ ಇದ್ದಾಗ, ಕುಟುಂಬಸ್ಥರು...