ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಸೇಲ್ಸ್ ಹೆಡ್ ಮತ್ತು ಮ್ಯಾನೇಜರ್ ಗೆ ಸೊಸೈಟಿಯ ವಿರುದ್ದ ಸುಳ್ಳು ಆರೋಪ ಮಾಡಿ ಗದಗಿನ ಮಂಜುನಾಥ ಬೆಟಗೇರಿ ಹಾಗೂ ಮುಂಡಗೋಡಿನ ಮಹದೇಶ್ವರ ಲಿಂಗದಾಳ ಸೇರಿ ಮಾಹಿತಿ ಹಕ್ಕು ನಿಯಮದಡಿ ಮಾಹಿತಿ ನೀಡುವಂತೆ ಅರ್ಜಿ ಹಾಕಿದ್ದರು, ಮಾಹಿತಿ ನೀಡದಿದ್ದರೆ ಬರೋಬ್ಬರಿ 1.5 ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಸೊಸೈಟಿಯವರು ಪೊಲೀಸರಿಗೆ ದೂರು...

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಮುಖ ಸುದ್ದಿ; ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

Sad News; ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ದಾವಣಗೆರೆಯ ಹೈಸ್ಪೀಡ್ ಮಣಿ ನಾಮಾಂಕಿತದ ಟಗರು ಅಕಾಲಿಕವಾಗಿ ಸಾವನ್ನಪ್ಪಿದೆ. ನೆಚ್ಚಿನ ಟಗರಿನ ಸಾವಿನಿಂದ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದಾವಣಗೆರೆಯ ಹೊಸ ಕುಂದುವಾಡ ಗ್ರಾಮದ ಹೈಸ್ಪೀಡ್ ಮಣಿ ಎನ್ನುವ ಟಗರು ರಾಜ್ಯಾದ್ಯಂತ ವಿವಿಧ ಟಗರು ಕಾಳಗದಲ್ಲಿ ಸ್ಪರ್ಧಿಸಿ ಹೆಸರು ಮಾಡಿತ್ತು.‌ ಟ್ರೋಫಿ, ಬೈಕ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಹೊಸ ಕುಂದುವಾಡ ಗ್ರಾಮದ ಹಾಲೇಶ್ ಎಂಬುವರು ಪ್ರೀತಿಯಿಂದ ಈ ಹೈಸ್ಪೀಡ್ ಮಣಿ ಟಗರನ್ನು ಸಾಕಿದ್ದರು.‌ ಭಾನುವಾರ ಟಗರು ಕಾಳಗ ಮುಗಿಸಿ ವಾಪಸಾಗುವಾಗ ಇದ್ದಕ್ಕಿದ್ದಂತೆ ಟಗರು ಕುಸಿದು ಬಿದ್ದು ಸಾವನಪ್ಪಿದೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ. ಪ್ರೀತಿಯಿಂದ ಸಾಕಿದ್ದ ಟಗರನ್ನು ಮಾಲೀಕ ಹಾಲೇಶ್ ಇಡೀ ಕುಂದವಾಡದಲ್ಲಿ ಮೆರವಣಿಗೆ ಮಾಡಿದ್ದು, ಸಾವಿರಾರು ಅಭಿಮಾನಿಗಳು ಹೆಜ್ಜೆ ಹಾಕಿದರು. ಹೊಸ ಕುಂದವಾಡ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಬಳಿಕ ಹೈಸ್ಪೀಡ್ ಮಣಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಟಗರು ಮಾಲೀಕ ಹಾಲೇಶ್ ಮನೆ ಮುಂಭಾಗವೇ ಅಂತ್ಯಸಂಸ್ಕಾರ ಮಾಡಿದ್ದು ವಿಶೇಷವಾಗಿತ್ತು. ಇಡೀ ರಾಜ್ಯದಲ್ಲಿ ನೂರಾರು ಕಡೆ...

ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

Suicide Attempted; ಕಾರವಾರ ನಗರದ ಮಾರುತಿ ಗಲ್ಲಿಯ ನಿವಾಸಿ ಪ್ರಜ್ಞೇಶ್ ಪ್ರಕಾಶ ಶೇಟ (45) ಅವರು ಮದುವೆಯಾಗದಿರುವ ನೋವಿನಿಂದ ಖಿನ್ನಗೊಂಡು ಚಾಕುವಿನಿಂದ ಸ್ವತಃಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮನೆಯಲ್ಲೇ ಚಾಕು ಬಳಸಿ ತಮ್ಮ ದೇಹದ ಭಾಗಕ್ಕೆ ಇರಿತ ಮಾಡಿಕೊಂಡು ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಪ್ರಜ್ಞೇಶ್ ಅವರನ್ನು ತಕ್ಷಣ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಸಮಯೋಚಿತ ಚಿಕಿತ್ಸೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಆಗಿಲ್ಲ ಎಂಬ ವಿಷಯವನ್ನು ಪ್ರಜ್ಞೇಶ್ ಹತ್ತಿರದವರಿಗೆ ಹಲವು ಬಾರಿ ಬೇಸರದಿಂದ ಹೇಳಿಕೊಂಡಿದ್ದರು ಎಂದು ಮಾಹಿತಿ ತಿಳಿದುಬಂದಿದೆ. ಈ ಖಿನ್ನತೆಯ ಹಿನ್ನೆಲೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಮುಖ ಸುದ್ದಿ ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ್ದ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿಯವರು ತಕ್ಷಣಕ್ಕೆ ಜಾರಿಗೆ ಬರುವಂತೆ ಕಿರಣ್ ಸಾಳುಂಕೆಗೆ, ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಇಂದಿರಾನಗರದ ನಿವಾಸಿ ಕಿರಣ ಸಾಳುಂಕೆಯ ಮೇಲೆ ಕೊಲೆ, ಸುಲಿಗೆ, ಸೇರಿದಂತೆ ವಿವಿಧ ಪ್ರಕರಣಗಳು ಇದ್ದು ಸೋಮವಾರ ಶಿರಸಿ ಸಹಾಯಕ ಆಯುಕ್ತರಾದ ಕಾವ್ಯಾರಾಣಿ ಅವರು ಕಿರಣನನ್ನು ಮೂರು ತಿಂಗಳವರೆಗೆ ಕಾರವಾರ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ....

ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ‌. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ ಸಿಲುಕಿಕೊಂಡಿದೆ. ಹೀಗಾಗಿ, ಕೆಲಕ್ಷಣಗಳಲ್ಲೇ ಕಾಲು ನುಜ್ಜುಗುಜ್ಜಾಗಿದ್ದು, ತಕ್ಷಣವೇ ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ SDM ಗೆ ದಾಖಲಿಸಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ ಬಂದು ವಾಕ್ ಥಾನ್ ಸಂಪ್ಪನ್ನವಾಯ್ತು. ಈ ವಾಕ್ ಥಾನ್ ನಲ್ಲಿ ದೇವು ಜೋರೆ ಪ್ರಥಮ‌ ಬಹುಮಾನ ಪಡೆದ್ರು. ಶನ್ಸನ್ ಎಂಬುವರು ದ್ವಿತೀಯ ಹಾಗೂ ಮಾರುತಿ ಎಂಬುವವರು ತೃತೀಯ ಸ್ಥಾನ ಪಡೆದುಕೊಂಡರು.

ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!

ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!

Death News: ಮುಂಡಗೋಡಿನ ಹಿರಿಯ ಕಾಷ್ಟ ಕಲಾವಿದ, ರಥಶಿಲ್ಪಿ ವಿರೂಪಾಕ್ಷಪ್ಪ ಶಿವಪ್ಪ ಬಡಿಗೇರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವ್ರು ಗುರುವಾರ ನಿಧನರಾಗಿದ್ದು, ವಿಶ್ವಕರ್ಮ ಸಮುದಾಯದ ಮುಖಂಡರು ಕಂಬನಿ ಮಿಡಿದಿದ್ದಾರೆ‌. ಮೃತ ವಿರೂಪಾಕ್ಷಪ್ಪ ಬಡಿಗೇರ್ ಪಟ್ಟಣದ ಗ್ರಾಮದೇವಿ ದೇವಸ್ಥಾನದ ರಥವನ್ನು ನಿರ್ಮಿಸಿದ್ದರು. ಅಲ್ಲದೇ ಕಟ್ಟಿಗೆಯಲ್ಲಿ ಸೂಕ್ಷ್ಮ ಕುಸೂರಿ ಕೆತ್ತನೆಯಲ್ಲಿ ಪರಿಣಿತಿ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ನಡೆಯಲಿದೆ ಅಂತಾ ಮೃತರ ಪುತ್ರ ಚಿದಾನಂದ ವಿರೂಪಾಕ್ಷಪ್ಪ ಬಡಿಗೇರ ತಿಳಿಸಿದ್ದಾರೆ.

ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

Death News: ಮುಂಡಗೋಡ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ರಾಮಣ್ಣ ಕುನ್ನೂರ್(69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಕುನ್ನೂರ್ ರನ್ನು ನಿನ್ನೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

error: Content is protected !!