ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ.
ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ ಬ್ರೀಫಿಂಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್. ಪ್ರಮೋದ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು.
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ಎರಡೂ ದೇಶಗಳ ನಡುವಿನ ದಿನಗಟ್ಟಲೆ ನಡೆದ ಮಿಲಿಟರಿ ಸಂಘರ್ಷದ ಪ್ರಮುಖ ಅಂಶವೆಂದರೆ ಭಾರತವು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆಕಾಶ ವಾಯು ರಕ್ಷಚಲನಣಾ ವ್ಯವಸ್ಥೆ ಎಂದು ಏರ್ ವೈಸ್ ಮಾರ್ಷಲ್ ಎ.ಕೆ. ಭಾರ್ತಿ ಹೇಳಿದರು.
“ನಮ್ಮ ಯುದ್ಧ-ವ್ಯವಸ್ಥೆಗಳು ಸಂಘರ್ಷ ಕಾಲದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿವೆ. ಮತ್ತೊಂದು ಪ್ರಮುಖ ಅಂಶವೆಂದರೆ ಸ್ಥಳೀಯ ವಾಯು ರಕ್ಷಣಾ ವ್ಯವಸ್ಥೆಯಾದ ಆಕಾಶ ವ್ಯವಸ್ಥೆಯ ಅದ್ಭುತ ಕಾರ್ಯಕ್ಷಮತೆ. ಕಳೆದ ದಶಕದಲ್ಲಿ ಭಾರತ ಸರ್ಕಾರದ ಬಜೆಟ್ ಮತ್ತು ನೀತಿ ಬೆಂಬಲದಿಂದಾಗಿ ಪ್ರಬಲವಾದ ವಾಯು ರಕ್ಷಣಾ ವ್ಯವಸ್ಥೆ (AD)ಯನ್ನು ಕಾರ್ಯಗತಗೊಳಿಸುವುದು ಸಾಧ್ಯವಾಗಿದೆ” ಎಂದು ಅವರು ಹೇಳಿದರು.
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಆಕಾಶ ಹೆಸರಿನ ಸಾಫ್ಟ್ ಮತ್ತು ಹಾರ್ಡ್ ಕಿಲ್ ಕೌಂಟರ್-ಯುಎಎಸ್ ವ್ಯವಸ್ಥೆಗಳು ಮತ್ತು ಸುಶಿಕ್ಷಿತ ಭಾರತೀಯ ವಾಯು ರಕ್ಷಣಾ ಸಿಬ್ಬಂದಿಯಿಂದ ಪಾಕಿಸ್ತಾನ ಬಳಸುತ್ತಿದ್ದ ಹಲವಾರು ಡ್ರೋನ್ಗಳು ಮತ್ತು ಮಾನವರಹಿತ ಯುದ್ಧ ವೈಮಾನಿಕ ವಾಹನಗಳನ್ನು ಸಹ ವಿಫಲಗೊಳಿಸಲಾಯಿತು” ಎಂದು ಏರ್ ಮಾರ್ಷಲ್ ಎಕೆ ಭಾರ್ತಿ ಹೇಳಿದರು.
ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಆಪರೇಷನ್ ಸಿಂಧೂರ ಪ್ರಾರಂಭವಾದ ನಂತರ ಇದು ಅವರ ಮೊದಲ ಭಾಷಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತವು ಮೇ 7 ರ ಬೆಳಗಿನ ಜಾವ ಆಪರೇಷನ್ ಸಿಂಧೂರ ಪ್ರಾರಂಭಿಸಿತು ಮತ್ತು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಮಾಡಿತು. ಇಡೀ ಕಾರ್ಯಾಚರಣೆ ಕೇವಲ 25 ನಿಮಿಷಗಳ ಕಾಲ ನಡೆಯಿತು.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಮತ್ತು ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಹಿಜ್ಬುಲ್-ಮುಜಾಹಿದ್ದೀನ್ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.