Home Public First Newz

Author: Public First Newz (Public First Newz)

Post
ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!

ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!

ಮುಂಡಗೋಡ: ತಾಲೂಕಿನಲ್ಲಿ ಸೋಮವಾರದಿಂದ ಅಂಗನವಾಡಿ ಕೇಂದ್ರಗಳು ಮತ್ತೆ ಚಾಲನೆ ಪಡೆದುಕೊಂಡಿವೆ. ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಅಂಗಮವಾಡಿ ಕೇಂದ್ರಗಳನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಿ, ಪೂಜೆ ಮಾಡಿ ಪುನರಾರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟದ ನಡುವೆ ಬಂದ್ ಆಗಿದ್ದ ಅಂಗನವಾಡಿಗಳು ಇಂದಿನಿಂದ ಪುಟ್ಟ ಪುಟ್ಟ ಮಕ್ಕಳ ಕಲರವದೊಂದಿಗೆ ಶುರುವಾದವು. ತಾಲೂಕಿನ ಅಗಡಿಯಲ್ಲಿ ಅಂಗನವಾಡಿಯ ಪುನರಾರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತರು ಮಕ್ಕಳನ್ನು ಬರಮಾಡಿಕೊಂಡರು..

Post
ಮುಂಡಗೋಡಿನಲ್ಲಿ ಹಾಡಹಗಲೇ ಕಳ್ಳನ ಕರಾಮತ್ತು, ಹಣದ ಬ್ಯಾಗ್ ಕಿತ್ತು ಪರಾರಿ ಯತ್ನ, ಬೆನ್ನತ್ತಿ ಹಿಡಿದ ಸಾರ್ವಜನಿಕರು..!

ಮುಂಡಗೋಡಿನಲ್ಲಿ ಹಾಡಹಗಲೇ ಕಳ್ಳನ ಕರಾಮತ್ತು, ಹಣದ ಬ್ಯಾಗ್ ಕಿತ್ತು ಪರಾರಿ ಯತ್ನ, ಬೆನ್ನತ್ತಿ ಹಿಡಿದ ಸಾರ್ವಜನಿಕರು..!

ಮುಂಡಗೋಡ: ಪಟ್ಟಣದಲ್ಲಿ ಚಾಲಾಕಿ ಕಳ್ಳನೊಬ್ಬ ಹಾಡಹಗಲೇ ಹಣದ ಬ್ಯಾಗ್ ಕಿತ್ತುಕೊಂಡು ಓಡಿ ಹೋದ ಘಟನೆ ನಡೆದಿದೆ.. ಪಟ್ಟಣದ ಅಂಚೆ ಕಚೇರಿಯ ಸಿಬ್ಬಂದಿಯೊಬ್ಬರು ಇಂದು ಒಂದು ಲಕ್ಷ ರೂ. ಹಣವನ್ನು ತಮ್ಮ ಬ್ಯಾಗ್ ನಲ್ಲಿಟ್ಟುಕೊಂಡು ಬ್ಯಾಂಕ್ ಗೆ ಜಮಾ ಮಾಡಲು ಹೊರಟಿದ್ದಾರೆ. ಈ ವೇಳೆ ಯಲ್ಲಾಪುರ ರಸ್ತೆಯ ತಂಗಮ್ ಮೆಡಿಕಲ್ಸ್ ನಲ್ಲಿ ಮಾತ್ರೆ ಖರೀಧಿಸಲು ಹೋಗಿದ್ದಾರೆ‌. ಈ ವೇಳೆ ಇದನ್ನೇಲ್ಲ ಗಮಿಸುತ್ತಲೇ ಇದ್ದ ವ್ಯಕ್ತಿ ಏಕಾಏಕಿ ಬ್ಯಾಗ್ ಕಿತ್ತುಕೊಂಡು ಓಡಿ ಹೋಗಿದ್ದಾನೆ. ನಂತರ ಬ್ಯಾಗ್ ಕಳೆದುಕೊಂಡ ಅಂಚೆಕಚೇರಿ ಸಿಬ್ಬಂದಿ...

Post
ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ..!

ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ..!

ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಚಾಲನೆ ಪಡೆದಿದೆ‌. ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಇಲ್ಲಿನ ಗ್ರಾಮ ಪಂಚಾಯತಿ ಅದ್ಯಕ್ಷೆ ರೇಣುಕಾ ಮಾಯಣ್ಣವರ್ ಉದ್ಘಾಟಿಸಿದ್ರು. ಈ ವೇಳೆ ಸಂತೋಷ ಶೇಟ್ ರಾಯ್ಕರ್, ಆಶಾ ರಾಯ್ಕರ್, ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..

Post
ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!

ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!

ಮುಂಡಗೋಡ; ತಾಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತ ಮುತ್ತಲ ತಾಲೂಕು ಜಿಲ್ಲೆಗಳಿಂದ ಬಂದಿದ್ದ ಸ್ಪರ್ಧಾ ಹೋರಿಗಳು ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾದವು. ಜಿಲ್ಲೆ ಹೊರಜಿಲ್ಲೆಗಳಿಂದ ಬಂದಿದ್ದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಗಳ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ತಮ್ಮ ನೆಚ್ಚಿನ ಹೋರಿಗಳು ಕಣದಲ್ಲಿ ಇಳಿಯುತ್ತಲೇ ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಹಾಗೆ ಕಣದಲ್ಲಿ ಬಿಟ್ಟ ಹೋರಿಗಳನ್ನು ಹಿಡಿಯಲು ಯುವಕರ ದಂಡೇ ಅಲ್ಲಿ ನೆರೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳಿಗೆ ಬಹುಮಾನ ನೀಡಲಾಯಿತು.

Post
42 ಲಕ್ಷ ರೂ. ಲಪಟಾಯಿಸಿದ್ದ ಶಿರಸಿಯ ವ್ಯಕ್ತಿ ಅಂದರ್..!

42 ಲಕ್ಷ ರೂ. ಲಪಟಾಯಿಸಿದ್ದ ಶಿರಸಿಯ ವ್ಯಕ್ತಿ ಅಂದರ್..!

ಶಿರಸಿ: ವ್ಯಕ್ತಿಯ ಗಮನ ಬೇರೆಡೆ ಸೆಳೆದು ಬರೋಬ್ಬರಿ 42 ಲಕ್ಷ ರೂ. ವಂಚಿಸಿದ್ದ ಪ್ರಕರಣವನ್ನು ಶಿರಸಿ ಪೊಲೀಸರು ಬೇಧಿಸಿದ್ದಾರೆ. 42 ಲಕ್ಷ ರೂ. ವಂಚಿಸಿದ್ದ ಶಿರಸಿಯ ಮೊಹಮದ್ ಇಬ್ರಾಹಿಂ ಕಲಬುರ್ಗಿ @ರೆಡ್ಡಿ (45) ಎಂಬುವ ಆರೋಪಿಯನ್ನು ಬಂಧಿಸಿದ್ದಾರೆ. ರಾಮನಬೈಲ್ ಮೂಲದ ವ್ಯಕ್ತಿಯಾಗಿರೋ ಮೊಹಮ್ಮದ್ ಕಾರ್ ಬ್ರೋಕರ್ ಆಗಿದ್ದ. ತೆಲಂಗಾಣದಲ್ಲಿ ಕೈಚಳಕ ತೋರಿದ್ದ ಈತನ ಮೇಲೆ ತೆಲಂಗಾಣ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು ಶಿರಸಿ ಡಿವೈಎಸ್ಪಿ ಹಾಗೂ ಸಿಪಿಐ, ಶಹರ ಠಾಣೆ ಪಿಎಸೈ ಸಹಕಾರದೊಂದಿಗೆ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ******************************************************************************...

Post
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಡಿಕೆಶಿ ರಣಕಹಳೆ: ಜೆಸಿಬಿ‌ ಮೂಲಕ ಹೂಮಳೆಗೈದ “ಕೈ” ಕಾರ್ಯಕರ್ತರು..!

ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಡಿಕೆಶಿ ರಣಕಹಳೆ: ಜೆಸಿಬಿ‌ ಮೂಲಕ ಹೂಮಳೆಗೈದ “ಕೈ” ಕಾರ್ಯಕರ್ತರು..!

ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗಿಂದಲೇ ರಣಕಹಳೆ ಮೊಳಗಿಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿ, ಸಿಎಂಗೆ ಠಕ್ಕರ್ ಕೊಟ್ಟಿರೋ ಕೈ ಪಡೆ ಈಗ ಶಿಗ್ಗಾವಿಯಲ್ಲೂ ಅದೇ ಮಾದರಿಯ ಗೆಲುವಿಗೆ ಈಗಿಂದಲೇ ತಯಾರಿ ಶುರುವಿಟ್ಟಿದೆಯಾ ಅನ್ನೊ ಪ್ರಶ್ನೆ ಏಳುವಂತೆ ಮಾಡಿದೆ. ಹೀಗಾಗಿ, ಇಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಿರೋ ಡಿಕಶಿಗೆ ಶಿಗ್ಗಾವಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಡಿಕೆಶಿ ಶಿಗ್ಗಾವಿ ಪಟ್ಟಣಕ್ಕೆ ಎಂಟ್ರಿ ನೀಡುತ್ತಲೇ ಜೆಸಿಬಿಗಳಲ್ಲಿ ನಿಂತು ಹೂ ಮಳೆಗರೆದು...

Post
ಮತ್ತೊಬ್ಬ ಅಪ್ಪು ಅಭಿಮಾನಿ ಸಾವು..! ಪುನೀತ್ ನಿಧನದಿಂದ ಊಟವನ್ನೇ ತ್ಯಜಿಸಿದ್ದ ಅಭಿಮಾನಿ..!!

ಮತ್ತೊಬ್ಬ ಅಪ್ಪು ಅಭಿಮಾನಿ ಸಾವು..! ಪುನೀತ್ ನಿಧನದಿಂದ ಊಟವನ್ನೇ ತ್ಯಜಿಸಿದ್ದ ಅಭಿಮಾನಿ..!!

ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮತ್ತೊಬ್ಬ ಅಭಿಮಾನಿ ಸಾವು ಕಂಡಿದ್ದಾನೆ. ಚಾಮರಾಜನಗರದಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ಸಾವು ಕಂಡಿದ್ದು, ಶಿವಮೂರ್ತಿ(31) ಮೃತ ಅಭಿಮಾನಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭೀಮನಗರ ನಿವಾಸಿಯಾಗಿದ್ದ ಈತ, ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೆ ಒಳಗಾಗಿದ್ದ, ಅಲ್ಲದೇ ನೆಚ್ಚಿನ‌ ನಟನ ಸಾವಿನಿಂದ ಊಟ ತ್ಯಜಿಸಿದ್ದ ಹೀಗಾಗಿ, ಕಳೆದ ಒಂದು ವಾರದಿಂದ ಊಟವಿಲ್ಲದೆ ಕ್ಷೀಣಗೊಂಡಿದ್ದ ಶಿವಮೂರ್ತಿಯ ಆರೋಗ್ಯ ಸಂಪೂರ್ಣ ಹದಗೆಟ್ಟಿತ್ತು. ಈ ಕಾರಣಕ್ಕಾಗಿ ನೆನ್ನೆ ರಾತ್ರಿ ಆಸ್ಪತ್ರೆಗೆ...

Post
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!

ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ‌‌. ಸಂಜೆ ಅಮವಾಸ್ಯೆಯ ಪೂಜೆಯನ್ನೂ...

Post
ಶಿರಸಿಯಲ್ಲಿ ಒಂಟಿ‌ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!

ಶಿರಸಿಯಲ್ಲಿ ಒಂಟಿ‌ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!

ಶಿರಸಿ: ನಗರದ ಭತ್ತದ‌ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************

Post
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲು; ಉಸ್ತುವಾರಿ ಹೊತ್ತಿದ್ದ ಮುರುಗೇಶ್ ನಿರಾಣಿ ಸಾಹೇಬ್ರು ಏನ್ ಹೇಳಿದ್ರು ಗೊತ್ತಾ..?

ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲು; ಉಸ್ತುವಾರಿ ಹೊತ್ತಿದ್ದ ಮುರುಗೇಶ್ ನಿರಾಣಿ ಸಾಹೇಬ್ರು ಏನ್ ಹೇಳಿದ್ರು ಗೊತ್ತಾ..?

ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ‌ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ‌ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ...

error: Content is protected !!