Home Public First Newz

Author: Public First Newz (Public First Newz)

Post
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...

Post
ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!

ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!

ಮುಂಡಗೋಡ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ನಿಮಿತ್ತ ಹಿರಿಯ ನಾಗರಿಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ, ತಾಲೂಕಾಧ್ಯಕ್ಷೆ ಲೈಸಾ ಥಾಮಸ್, ಪ್ರದಾನ ಕಾರ್ಯದರ್ಶಿ ಅಂಜು ಪಾಯಣ್ಣವರ, ಉಪಾಧ್ಯಕ್ಷೆ ಸರಸ್ವತಿ ಕೊಂಡ್ಲಿ, ಮತ್ತು ಸವಿತಾ ಸಾನು ಸೇರಿ ಹಲವರು ಹಾಜರಿದ್ದರು.

Post
ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!

ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!

ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು. ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ...

Post
ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ಹತ್ತಿರ ವಿರುವ ರಾಮಣ್ಣ ಕುನ್ನೂರ ಅವರ ಹಿತ್ತಲಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿತ್ತು. ಹೀಗಾಗಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಕರೆ ಮಾಡಿದ್ರು. ನಂತರ ಬಂದ ಅರಣ್ಯ ಸಿಬ್ಬಂದಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದ್ರು. ನಂತರ ಸೆರೆಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿನಲ್ಲಿ ಬಿಡಲಾಯಿತು.. ಹೀಗಾಗಿ, ಅಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

Post
ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!

ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.

Post
ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!

ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮುಖಂಡರು ಹಾಗೂ ಗ್ರಾಮದ ನೂರಾರು ಜನ ಬಿಜೆಪಿ ಕಾರ್ಯಕರ್ತರು ಇಂದು ಯಲ್ಲಾಪುರಕ್ಕೆ ತೆರಳಿ, ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಭೇಟಿಯಾಗಿದ್ರು. ಮುಂಬರುವ ಜಿಲ್ಲಾಪಂಚಾಯತಿ ಚುನಾವಣೆಗೆ ಇಂದೂರು ಜಿ ಪಂ ಕ್ಷೇತ್ರದಿಂದ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ್ ರವರಿಗೇ ಅಭ್ಯರ್ಥಿಯನ್ನಾಗಿಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ್ ರವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಕಳೆದ ಎರಡು ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರು ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ್...

Post
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...

Post
ಈ ಊರಲ್ಲಿ ಮೊಹರಂ ದೇವರಿಗೆ ಹನುಮಪ್ಪನ ಹೂವಿನ ಪ್ರಸಾಧ ಬೇಕೇ ಬೇಕು..!

ಈ ಊರಲ್ಲಿ ಮೊಹರಂ ದೇವರಿಗೆ ಹನುಮಪ್ಪನ ಹೂವಿನ ಪ್ರಸಾಧ ಬೇಕೇ ಬೇಕು..!

ಕೊಪ್ಪಳ: ಆ ಒಂದು ಗ್ರಾಮದ ಮೊಹರಂ ಹಬ್ಬಕ್ಕೆ ಇಡೀ ರಾಜ್ಯದ ಕೆಲ ಜಿಲ್ಲೆಗಳು ಸಾಕ್ಷಿಯಾಗುತ್ತವೆ. ಆ ಒಂದು ದೃಶ್ಯವನ್ನು ಕಣ್ಣತುಂಬಿಕೊಳ್ಳಲು ಗ್ರಾಮದ ಜನರು ಕಾತುರದಿಂದ ಕಾಯುತ್ತಾರೆ. ಆ ಗ್ರಾಮದ ಹನುಮಪ್ಪ ಹೂವು ಕೊಟ್ಟರೆ ಪೀರ್ ದೇವರು ಹೊತ್ತ ದೈವಭಕ್ತ ದರ್ಶನ ಪಡೆದು ಮುಂದೆ ಸಾಗುತ್ತಾರೆ. ನಂತರವೇ ಮೊಹರಂ ಹಬ್ಬ ಆಚರಿಸಲಾಗುತ್ತದೆ. ಹೌದು, ಹೀಗೆ ಪೀರ್ ದೇವರು ಹೊತ್ತ ಮುಸ್ಲಿಂ ದೈವ ಭಕ್ತನಿಗೆ, ಹೂವು ಕೊಟ್ಟು ಆಶೀರ್ವಾದ ಮಾಡುತ್ತಿರುವ ಹನುಮಪ್ಪ ದೇವರು. ದೇವಸ್ಥಾನದೊಳಗೆ ಬಂದು ಭಕ್ತಿಪೂರಕವಾಗಿ ಹನುಮನ ದರ್ಶನ...

Post
ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!

ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!

ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ. ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ...

Post
ಇದು ಉತ್ತರ ಕನ್ನಡದ ಹೆಮ್ಮೆ..! ಪ್ರತಿಷ್ಠಿತ ನಾಸಾಗೆ ಕನ್ನಡ ಕುವರನ ಆಯ್ಕೆ..!!

ಇದು ಉತ್ತರ ಕನ್ನಡದ ಹೆಮ್ಮೆ..! ಪ್ರತಿಷ್ಠಿತ ನಾಸಾಗೆ ಕನ್ನಡ ಕುವರನ ಆಯ್ಕೆ..!!

ಸಿದ್ದಾಪುರ: ಹಂಟ್ಸ್‌ವಿಲ್ ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು​ ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ  NASA ಫ್ಯೂಚರ್​ ಇನ್​ವೆಸ್ಟಿಗೇಟರ್​ ಪ್ರಶಸ್ತಿಗೆ  ಭಾಜನವಾಗಿದೆ. ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆ ತಲಾ 135000 ಅಮೇರಿಕನ್​ ಡಾಲರ್ ಅನ್ನು ​ ಸ್ಟೈಫಂಡ್ , ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಿಗೆ ಹಾಜರಾಗಲು...

error: Content is protected !!