Home Public First Newz

Author: Public First Newz (Public First Newz)

Post

ಮುಂಡಗೋಡ ಪಿಡ್ಬ್ಲೂಡಿ ಇಂಜಿನೀಯರ್ ಸುಭಾಸ್ ವಡ್ಡತ್ತಿ ನಿಧನ..!

ಮುಂಡಗೋಡ- ಲೋಕೊಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನೀಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸುಭಾಸ್ ವಡ್ಡತ್ತಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ರವಿವಾರ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೃತರ ಸ್ವಗ್ರಾಮದಲ್ಲಿ ನಡೆಯಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ. ಇನ್ನು, ಸುಭಾಸ್ ವಡ್ಡತ್ತಿ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Post

ಮುಂಡಗೋಡ ತಾಲೂಕಿನಲ್ಲಿ ಝಂಡೂ ಮೆಣಸಿನಕಾಯಿ ಬೆಳೆದ ರೈತರಿಗೆ ಸಂಕಷ್ಟ..!

ಮುಂಡಗೋಡ-ತಾಲೂಕಿನಲ್ಲಿ ಲಾಕ್ ಡೌನ್ ತಂದಿರೋ ಸಂಕಷ್ಟ ಒಂದಾ ಎರಡಾ.. ಬಡ ವ್ಯಾಪಾರಿಗಳು, ಕೂಲಿ ಕಾರ್ಮಿಕರ ಗೋಳು ಒಂದೆಡೆಯಾದ್ರೆ, ಕೃಷಿಯನ್ನೇ ನಂಬಿ ಬದುಕುತ್ತಿರೊ ರೈತರ ಗೋಳು ಮತ್ತೊಂದೆಡೆಯಾಗಿದೆ‌. ಹೌದು, ಮುಂಡಗೋಡ ತಾಲೂಕಿನಲ್ಲಿ ಬೇಸಿಗೆ ಬೆಳೆಯಾಗಿ ಬೆಳೆಯಲಾಗಿರೊ ಝಂಡೂ ಮೆಣಸಿನಕಾಯಿ ಬರಪೂರ ಬೆಳೆದಿದ್ದರೂ ಸೂಕ್ತ ಬೆಲೆ ಸಿಗದೆ ರೈತನ ಕನಸಿಗೆ ಕೊಳ್ಳೆ ಇಟ್ಟಿದೆ. ಲಾಕ್ ಡೌನ್ ಆಗುವ ಮುನ್ನ ಪ್ರತೀ ಕ್ವಿಂಟಲ್ ಗೆ 4 ಸಾವಿರದ ವರೆಗೂ ಇದ್ದ ಝಂಡೂ ಮೆಣಸಿನಕಾಯಿ ಬೆಲೆ, ಈಗ 2 ಸಾವಿರ ರೂ. ಆಸುಪಾಸಿಗೆ...

Post

ಕೊರೋನಾ ಕುರಿತು ಕುಂಚಗಳಲ್ಲೇ ಜಾಗ್ರತಿ ಮುಡಿಸುತ್ತಿರೊ ಕಲಾವಿದ

ವಿಶೇಷ ವರದಿ: ಮುಂಡಗೋಡ: ಆತ ಓರ್ವ ಚಿತ್ರ ಕಲಾವಿದ, ಪೇಂಟಿಂಗ್ ಮಾಡಿಕೊಂಡು ತನ್ನ ಬದುಕು ಕಟ್ಟಿಕೊಂಡಿದ್ದವ, ಆದ್ರೆ ಸದ್ಯ ಕೊರೋನಾ ಮಹಾಮಾರಿ ಜನರ ಜೀವ ಹಿಂಡುತ್ತಿರೋ ಸಂದರ್ಭದಲ್ಲಿ ಆತನೂ ಬಸವಳಿದು ಹೋಗಿದ್ದ.. ಕೊರೋನಾ ಮಹಾಮಾರಿಯಿಂದ ಅದೇಷ್ಟೋ ಸ್ನೇಹಿತರಿಗೆ ಆಗುತ್ತಿರೋ ತೊಂದರೆ, ಸಂಕಷ್ಟಗಳನ್ನು ಕಣ್ಣಾರೆ ಕಂಡಿದ್ದ, ಹೀಗಾಗಿ ಕೊರೋನಾ ವಿರುದ್ಧ ತಾನೂ ಯುದ್ಧ ಸಾರಬೇಕು ಅಂತಾ ನಿರ್ಧಾರ ಮಾಡಿದ್ದ.. ಯಸ್, ಹೀಗೆ ಕೊರೋನಾ ಹಿಮ್ಮೆಟ್ಟಿಸಲು ಆ ಕಲಾವಿದನಿಗೆ ಹೊಳೆದದ್ದು ಬೇರೆ ಏನೂ ಅಲ್ಲ.. ಜನ್ರಿಗೆ ಜಾಗ್ರತಿ ಮೂಡಿಸುವ ಮಹತ್ಕಾರ್ಯ.....

Post

ಸನವಳ್ಳಿ ಗ್ರಾಮದಲ್ಲಿ ಗಟಾರದ ಕೊಳಚೆ ನೀರು ರಸ್ತೆ ಮೇಲೆ: ಕಣ್ಣಿದ್ದು ಕುರುಡಾದ ಅಧಿಕಾರಿಗಳು..!

ಮುಂಡಗೋಡ- ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸನವಳ್ಳಿ ಗ್ರಾಮದಲ್ಲಿ ಇದುವರೆಗೂ ಗ್ರಾಮದ ಮುಖ್ಯರಸ್ತೆಯಲ್ಲಿ ಪಕ್ಕಾಗಟಾರ ಇಲ್ಲದೆ ಚರಂಡಿ ನೀರು ರಸ್ತೆಯ ಮೇಲೆ ಹರಿದು ಸಾರ್ವಜನಿಕರಿಗೆ ಇನ್ನಿಲ್ಲದ ಪಜೀತಿ ತಂದಿಡುತ್ತಿದೆ..! ಗಟಾರದ ಕಲುಷಿತ ನೀರು ಸಂಪೂರ್ಣವಾಗಿ ಮುಖ್ಯ ರಸ್ತೆಯ ಮೇಲೆ ಬಂದು ಸಾರ್ವಜನಿಕರ ಓಡಾಟಕ್ಕೆ, ವಾಹನ ಸವಾರರಿಗೆ ತೊಂದರೆಯಾಗಿದೆ. ವಾಹನ ಸವಾರರು ಪ್ರತಿದಿನವೂ ಈ ರಸ್ತೆಯಲ್ಲಿ ಜಾರಿಬಿದ್ದು ಗಾಯಗೊಂಡಿರೋ ಸಾಕಷ್ಟು ಪ್ರಕರಣಗಳಿವೆ. ನಿತ್ಯವೂ ಹೀಗೆ ಈ ರಸ್ತೆಯಲ್ಲಿ ಎದ್ದು ಬಿದ್ದು ಅಂಗೈಯಲ್ಲಿ ಜೀವ ಹಿಡಿದು ಓಡಾಡುವುದು ಅನಿವಾರ್ಯ...

Post

ಮುಂಡಗೋಡ ತಾಲೂಕಾಸ್ಪತ್ರೆಗೆ, ಅಂಬ್ಯುಲೆನ್ಸ್, ಕೋವಿಡ್ ಕೇರ್ ಕಿಟ್ ವಿತರಿಸಿದ ಹೆಬ್ಬಾರ್..!

ಮುಂಡಗೋಡ- ತಾಲೂಕಾಸ್ಪತ್ರೆಯ ಆವರಣದಲ್ಲಿ ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮುಂಡಗೋಡ ತಾಲೂಕಾ ಆಸ್ಪತ್ರೆಗೆ 2 ಹೊಸ ಅಂಬ್ಯುಲೆನ್ಸ್ ಹಸ್ತಾಂತರ ಹಾಗೂ ಕೋವಿಡ್ ಶಂಕಿತರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸಿರು ನಿಶಾನೆ ತೋರಿಸುವ ಮೂಲಕ ಅಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್, ಕೋವಿಡ್ ಶಂಕಿತರಿಗೆ ನೀಡಲಾಗುವ ಕೋವಿಡ್ ಕೇರ್ ಕಿಟ್ ಬಿಡುಗಡೆಗೊಳಿಸಿದ್ರು. ಈ ವೇಳೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್, ಉತ್ತರ ಕನ್ನಡ ಜಿಲ್ಲಾಧಿಕಾರಿ...

Post
ಸಿಎಂ ಬದಲಾವಣೆ ಯಾವ ಕಾರಣಕ್ಕೂ ಇಲ್ಲ: ಸಿ.ಪಿ.ಯೋಗೀಶ್ವರ್ ಗೆ ಸಚಿವ ಹೆಬ್ಬಾರ್ ಟಾಂಗ್..!

ಸಿಎಂ ಬದಲಾವಣೆ ಯಾವ ಕಾರಣಕ್ಕೂ ಇಲ್ಲ: ಸಿ.ಪಿ.ಯೋಗೀಶ್ವರ್ ಗೆ ಸಚಿವ ಹೆಬ್ಬಾರ್ ಟಾಂಗ್..!

ಯಲ್ಲಾಪುರ: ಮುಖ್ಯಮಂತ್ರಿ ಬದಲಾವಣೆ ಯಾವ ಕಾರಣಕ್ಕೂ ಇಲ್ಲ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್, ಸಿಎಂ ಬದಲಾವಣೆ ವಿಚಾರವಾಗಿ, ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆಗೆ ನನ್ನ ಸಹಮತ ಇಲ್ಲ ಅಂತಾ ಖಡಕ್ಕಾಗಿ ಅಭಿಪ್ರಾಯ ವ್ಯಕ್ತ ಪಡಿಸಿದ್ರು. ಸರಕಾರದಲ್ಲಿ ಇದ್ದುಕೊಂಡು ಈ ರೀತಿಯ ಹೇಳಿಕೆ ನೀಡುವುದು ಯೋಗೀಶ್ವರಗೆ ಶೋಭೆ ತರುವುದಿಲ್ಲ ಅಂತಾ ಹೆಬ್ಬಾರ್ ಕಿಡಿ ಕಾರಿದ್ರು. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದ್ದಾಗಿ ಸಚಿವ ಅಶೋಕ್ ಹೇಳಿದ್ದು ನಿಜ, ಆದ್ರೆ ಮುಖ್ಯಮಂತ್ರಿ ಬದಲಾವಣೆ...

Post

ಮುಂಡಗೋಡ ತಾಲೂಕಾಸ್ಪತ್ರೆಗೆ 1.33 ಲಕ್ಷ ರೂ. ವೈದ್ಯಕೀಯ ಸಲಕರಣೆ ನೀಡಿದ, ಟಿಬೇಟಿಗರ ಕರ್ಮಾ ಪೌಂಡೇಶನ್..!

ಮುಂಡಗೋಡ-ತಾಲೂಕಿನಲ್ಲಿ ನೊಂದವರ ಕಣ್ಣೀರು ಒರೆಸುತ್ತಿರೋ ಟಿಬೇಟಿಗರ ಕರ್ಮಾ ಪೌಂಡೇಶನ್ ಈಗ ಮತ್ತೊಂದು ಮಹತ್ತರ ಕಾರ್ಯ ಮಾಡಿ ಆದರ್ಶ ತೋರಿದೆ. ಬುದ್ದ ಪೂರ್ಣಿಮೆಯ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಗೆ ಒಟ್ಟೂ 1,33,280 ರೂ. ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ್ದಾರೆ. ಅದ್ರಲ್ಲಿ, 49280 ರೂ.ಮೌಲ್ಯದ NIBP patient monitor machine, 84,000 ರೂ. ಮೌಲ್ಯದ oxygen concentrator ಸೆರಿದ್ದು ಮುಂಡಗೋಡ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆಯವರಿಗೆ ಶುಕ್ರವಾರ ಹಸ್ತಾಂತರಿಸಿದ್ದಾರೆ. ಇನ್ನು ಟಿಬೇಟಿಯನ್ ಕಾಲೋನಿಯ ಡಿಟಿಆರ್ ಆಸ್ಪತ್ರೆಗೂ ಕೂಡ 84 ಸಾವಿರ ರೂ....

Post

4 ದಿನದ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ಕೊರೋನಾಗೆ ಬಲಿ..!

ಶಿವಮೊಗ್ಗ: ಕಳೆದ ನಾಲ್ಕು ದಿನದ ಹಿಂದೆ‌ ಮದುವೆಯಾಗಿದ್ದ ನವ ವಿವಾಹಿತೆ ಕೊರೊನಾಗೆ ಬಲಿಯಾದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಮಲವಗೊಪ್ಪದಲ್ಲಿ ನಡೆದಿದೆ. ಪೂಜಾ ಎಂಬುವವರೇ ಕೊರೋನಾಗೆ ಬಲಿಯಾದ ನವವಧು ಆಗಿದ್ದಾರೆ.. ಪೂಜಾ ಅವರ ವಿವಾಹ ಕಳೆದ ನಾಲ್ಕು ದಿನದ ಹಿಂದೆ ಅಂದರೆ ಮೇ 24 ರಂದು ಹರಿಗೆಯ ಮಹೇಶ್ ಅವರೊಂದಿಗೆ ನಡೆದಿತ್ತು. ಮದುವೆಯ ಮರು ದಿನದಿಂದಲೇ ಪೂಜಾಗೆ ಜ್ವರ ಕಾಣಿಸಿಕೊ‌ಂಡಿತ್ತು. ಆದರೆ ಸ್ಥಳೀಯ ಕ್ಲಿನಿಕ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಪೂಜಾಗೆ, ಇಂದು ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಪೂಜಾ...

Post
ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!

ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!

ಮುಂಡಗೋಡ: ತಾಲೂಕಿನ ಇಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಇಂದೂರು ಗ್ರಾಮವನ್ನು ವಿಶೇಷ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ, ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಇದೇ ಸಮಯವನ್ನೇ ಉಪಯೋಗಿಸಿಕೊಂಡಿರೋ ಕಳ್ಳರು, ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.. ಅಂದಹಾಗೆ, ಶಾಲೆಯ ವರಾಂಡದಲ್ಲಿ ಹಾಕಲಾಗಿದ್ದ ಎರಡು CCTV ಕ್ಯಾಮೆರಾಗಳನ್ನು ಕಿತ್ತೊಯ್ದಿರೋ ಕಳ್ಳರು, ಶಾಲೆಯ 5 ಕೊಠಡಿಗಳ ಬಾಗಿಲಿಗೆ ಹಾಕಿದ್ದ ಬೀಗ ಮುರಿದಿದ್ದಾರೆ, ಅಲ್ದೆ ಬಾತ್ ರೂಮಿನ ಬೀಗವನ್ನೂ ಮುರಿದಿದ್ದಾರೆ. ಆದ್ರೆ...

Post
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!

ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!

ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

error: Content is protected !!