ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ ಇಬ್ಬರು, ಕಲಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಹಾಗೂ ಇಂದೂರಿನ ಓರ್ವ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಪುಟ್ಟ ಮಕ್ಕಳಿಗೂ ಸೋಂಕು..! ಇನ್ನು, ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 4 ವರ್ಷದ ಓರ್ವ ಬಾಲಕ, ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ವರ್ಷದ ಮತ್ತೋರ್ವ ಬಾಲಕನಿಗೂ ಸೋಂಕು ದೃಢ ಪಟ್ಟಿದೆ. ಅಲ್ಲದೇ, ಕಲಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 7...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..!
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರಲಾಗಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಶಿವಪ್ಪ ಸಾಥ್ ನೀಡಿದ್ರು.
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ. ನಂತರ ಕಿಮ್ಸ್ ಗೆ ದಾಖಲಿಸಲಾಗಿದೆ. ತಾಯಿ ಮಗು ಇಬ್ಬರೂ ಆರೋಗ್ಯ ವಾಗಿದ್ದಾರೆ 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಸಿ. ಬಳೂರು, ಹಾಗೂ ಚಾಲಕ ಕೆಂಚೇಶ್ ಇ. ಎನ್. ಸಮಯ ಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!
ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು ಅಂತಾ ಅವ್ರು ಮನವಿ ಮಾಡಿದ್ರು. ಹೊಸ ಟೆಂಡರ್ ವಿಚಾರ..! ಇನ್ನೇನು ಕೆಲವೇ ದಿನಗಳಲ್ಲಿ ನೂತನ ಟೆಂಡರ್ ಕರೆಯಲಾಗುತ್ತದೆ. ಆ ಟೆಂಡರ್ ನಲ್ಲಿ ಈಗಿರುವ ಸಿಬ್ಬಂದಿಗಳನ್ನೇ ಮುಂದುವರೆಸಿಕೊಂಡು ಹೋಗಬೇಕು. ಬೇರೆ ಸಿಬ್ಬಂದಿಗಳ ನಿಯೋಜನೆಗೆ ಮುಂದಾಗಬಾರದು ಅಂತಾ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅರಿಯರ್ಸ್, ಇನ್ಕ್ರಿಮೆಂಟ್ ನೀಡಿ..! ಹಾಗೆಯೇ, ರಾಜ್ಯದ 108 ಆರೋಗ್ಯ ಕವಚ ಸಿಬ್ಬಂದಿಗಳಿಗೆ 2020-21 ರ ಅರಿಯರ್ಸ್, ಇನ್ಕ್ರಿಮೆಂಟ್ ನೀಡಲು ಒತ್ತಾಯಿಸಿದ...
ನಂದಿಕಟ್ಟಾದಲ್ಲಿ ನಾಯಿ ದಾಳಿಗೆ ಕೋತಿ ಮರಿ ಬಲಿ, ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..! ಇನ್ನು ಅಪಘಾತ ಸಂಭವಿಸಿದ ನಂತರ ಶಿರಸಿ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳು ಬಳಿ ಇದ್ದ ಬ್ಯಾಗ್ ಹಾಗೂ ಮೊಬೈಲ್ ಮುಂಡಗೋಡ ಪೊಲೀಸರಿಗೆ 108 ಸಿಬ್ಬಂದಿ ಹಸ್ತಾಂತರ ಮಾಡಿದ್ದಾರೆ.
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!
ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್ಪೆಕ್ಟರ್ ಸುನೀಲ್ ನಾಯಕ್ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ








