ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್

ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್

ಕಾರವಾರ; ಜಿಲ್ಲೆಯ ಪ.ಜಾತಿ ಮತ್ತು ಪಂಗಡದವರ ಕುಂದು ಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆ ವತಿಯಿಂದ ಪ್ರತೀ ತಿಂಗಳ 4ನೇ ಭಾನುವಾರ ಬೆಳಗ್ಗೆ 11 ಗಂಟೆಗೆ , ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿಯಮಿತವಾಗಿ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು. ಅವರು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ.ಜಾತಿ ಪಂಗಡದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ವಿವಿಧ ಸಮಸ್ಯೆಗಳಿಂದ ನೊಂದಿರುವ ಪ.ಜಾತಿ ಮತ್ತು ಪಂಗಡದವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ವತಿಯಿಂದ ಮಾಡಲಾಗುತ್ತಿದ್ದು, ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ, ತಮ್ಮ ಮನೆಗಳಿಗೆ ಪೊಲೀಸರು ಭೇಟಿ ನೀಡುವ ಸಂದರ್ಭದಲ್ಲಿ ಆಥವಾ 112 ಗೆ ಕರೆ ಮಾಡಿದಲ್ಲಿ ಅಥವಾ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಯಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ತಿಳಿಸಿದಲ್ಲಿ ತಕ್ಷಣ ಸ್ಪಂದಿಸಲಾಗುವುದು ಎಂದರು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಪ್ರತಿ ತಿಂಗಳು ಪ.ಜಾತಿ...

ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!

ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!

ಕಾರವಾರ; ಉತ್ತರ ಕನ್ನಡ ಜಿಲ್ಲೆಯ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ನಕಲಿ ವೈದ್ಯರನ್ನು ನೇಮಕ ಮಾಡಿಕೊಂಡಲ್ಲಿ ಅಂತಹ ಆಸ್ಪತ್ರೆಗಳ ವಿರುದ್ದ ನಿಯಮಾನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಸಗಿ ನರ್ಸಿಂಗ್ ಹೋಂಗಳು ತಮ್ಮಲ್ಲಿ ನೇಮಕ ಮಾಡಿಕೊಳ್ಳುವ ವೈದ್ಯರ ನೈಜ ದಾಖಲೆಗಳನ್ನು ಪರಿಶೀಲಿಸದೇ ನಕಲಿ ವೈದ್ಯರು ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಲ್ಲಿ ಅಂತಹ ಸಂಸ್ಥೆಗಳ ವಿರುದ್ದ ಮೊದಲ ಬಾರಿಗೆ ನಿಯಮಾನುಸಾರ ದಂಢ ವಿಧಿಸುವಂತೆ ಮತ್ತು ಪುನ: ಮುಂದುವರೆದಲ್ಲಿ ದಂಡ ಮತ್ತು ಜೈಲುಶಿಕ್ಷೆ ವಿಧಿಸಲು ಪ್ರಕರಣ ದಾಖಲು ಮಾಡುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ನಕಲಿ ವೈದ್ಯರ ವಿರುದ್ದ ಕೂಡಾ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಒಮ್ಮೆ ಪತ್ತೆಯಾದ ನಕಲಿ ವೈದ್ಯರು ನಂತರದಲ್ಲಿ ತಮ್ಮ ಕೇಂದ್ರದ ಹೆಸರು ಮತ್ತು ವಿಳಾಸ ಬದಲಿಸಿಕೊಂಡು ಜಿಲ್ಲೆಯ ಇತರೇ...

ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!

ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!

ಕಾರವಾರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ರೀತಿಯಲ್ಲಿ ಹೊಸ ವರ್ಷದ ಆಚರಣೆಯನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಡಿಸೆಂಬರ್ 31 ರಂದು ಸಂಜೆ 6 ಗಂಟೆಯ ನಂತರ ಯಾರೂ ಕೂಡಾ ಸಮುದ್ರಕ್ಕೆ ಇಳಿಯಬಾರದು, ಬೀಚ್‌ಗಳಲ್ಲಿ ಯಾವುದೇ ರೀತಿಯ ಸಮಾರಂಭಗಳನ್ನು ಆಯೋಜಿಸಲು ಯಾರಿಗೂ ಅನುಮತಿಯನ್ನು ನೀಡಿರುವುದಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ರಾತ್ರಿ 12.30 ರ ನಂತರ ಬೀಚ್ ಗಳಲ್ಲಿ ಯಾರೂ ಉಳಿಯದೇ ತಮ್ಮ ಮನೆಗಳಿಗೆ ತೆರಳುವಂತೆ ಅವ್ರು ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲೆಯ ಹೋಟೆಲ್ , ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಯಾವುದೇ ಸ್ಥಳಗಳಲ್ಲಿ ಡಿ. 31 12.30 ರ ನಂತರ ಎಲ್ಲಾ ತರಹದ ಚಟುಚಟಿಕೆಗಳನ್ನು ಸ್ಥಬ್ಧಗೊಳಿಸುವಂತೆ ಸೂಚಿಸಿದ್ದಾರೆ. ಹೊಸ ವರ್ಷಾಚರಣೆಯನ್ನು ಸುರಕ್ಷಿತವಾಗಿ ಆಚರಿಸಿ..!ಪ್ರಸ್ತುತ ಡಿಸೆಂಬರ್ 31 ರಂದು ಹೊಸ ವರ್ಷ ಆಚರಣೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕಡಲತೀರಗಳಲ್ಲಿ ವಿವಿಧ ರಾಜ್ಯದಿಂದ ಪ್ರವಾಸಿಗರು...

ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಎರಡು ಮಕ್ಕಳು, ತಂದೆ ಸೇರಿ ಮೂವರು ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗಿದ್ದು, ಅವರ ಸಂಪೂರ್ಣ ಮಾಹಿತಿ ಇನ್ನಷ್ಟೇ ಬರಬೇಕಿದೆ. ಪ್ರಮುಖ ಸುದ್ದಿ: ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

 ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭಾರೀ ಬೆಂಕಿ ಅವಘಡವಾಗಿದೆ. ಮನೆ ಮುಂದೆ ನಿಲ್ಲಿಸಿಟ್ಟಿದ್ದ ಆಟೋದ ಸಿಲಿಂಡರ್ ಸ್ಪೋಟವಾಗಿ ಬೆಂಕಿಯಿಂದ ಹೊತ್ತಿಉರಿದಿದೆ. ಮನೆಗೂ ಬೆಂಕಿ ತಗುಲಿ ಹಾನಿಯಾಗಿದೆ. ವೀರಭದ್ರಪ್ಪ ಹಡಪದ್ ಎಂಬುವವರಿಗೆ ಸೇರಿದ ಆಟೋ ರಿಕ್ಷಾಗೆ ಮಂಗಳವಾರ ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿದೆ. ಬೆಂಕಿಯ ರಭಸಕ್ಕೆ ಧಗ ಧಗನೇ ಹೊತ್ತಿ ಉರಿದಿದೆ, ಮನೆಗೂ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯಗಳು ಸಂಭವಿಸಿಲ್ಲ.

ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

 ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ರಾದ್ಧಾಂತಗಳು ಸದ್ಯಕ್ಕೆ ನಿಲ್ಲುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಇನ್ನೇನು ನಾಡಿದ್ದು ಡಿಸೆಂಬರ್ 26 ರಂದು ದಲಿತ ಹಾಗೂ ರೈತ ಮುಖಂಡ ಚಿದಾನಂದ ಹರಿಜನ ಧರಣಿ ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದ್ದಾರೆ. ಇತ್ತಿಚೆಗಷ್ಟೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರೋ ಶಿಕ್ಷಕ ದಾಸಪ್ಪ ಎಂಬುವವರ ಪರವಾಗಿ ಸತ್ಯಾಗ್ರಹ ಮಾಡಲು ಚಿದಾನಂದ ಹರಿಜನ್ ಮುಂದಾಗಿದ್ದು ಚಿಗಳ್ಳಿ ಕೆಲ ಗ್ರಾಮಸ್ಥರು ಹಾಗೂ SDMC ಅಧ್ಯಕ್ಷರು, ಸದಸ್ಯರಿಗೆ ಫೋಷಕರಿಗೆ ಬೇಸರ ತರಿಸಿದೆ. ಹೀಗಾಗಿ, ನಿನ್ನೆ ಅವ್ರೇಲ್ಲ ಸೇರಿಕೊಂಡು ಮುಂಡಗೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಪೊಲೀಸ್ ಇಲಾಖೆಗೆ, ತಹಶೀಲ್ದಾರ ರಿಗೆ ಮನವಿ ಸಲ್ಲಿಸಿದ್ದಾರೆ. ಶಾಲಾ ಆವರಣದಲ್ಲಿ ಧರಣಿ ಸತ್ಯಾಗ್ರಹಗಳನ್ನು ಮಾಡದಂತೆ ಕೇಳಿಕೊಂಡಿದ್ದಾರೆ. ಒಂದು ವೇಳೆ ದಲಿತ ಮುಖಂಡ ಚಿದಾನಂದ ಹರಿಜನ್ ರವರು ಡಿಸೆಂಬರ್ 26 ರಂದು ಧರಣಿ ಸತ್ಯಾಗ್ರಹ ಮಾಡಿದರೆ, ನಾವೂ ಕೂಡ ಅದೇ ಸ್ಥಳದಲ್ಲಿ ಪ್ರತಿಭಟನೆ, ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ. ಮುಂದೇ ಅದೇನೇ ಸಮಸ್ಯೆ ಆದ್ರೂ ಅವ್ರೇ ಜವಾಬ್ದಾರರು ಅಂತಾ ಮನವಿಯಲ್ಲಿ ತಿಳಿಸಿದ್ದಾರೆ....

ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಇಂದೂರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನಡೆಯಿತು. ಶಾಸಕ ಶಿವರಾಮ್ ಹೆಬ್ಬಾರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ರು. ಈ ವೇಳೆ ಈ ಹಿಂದಿನ ಅವಧಿಯಲ್ಲಿ ಸಹಕಾರ ಸಂಘದ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅಲ್ದೆ, ಆಡಳಿತ ಸಮಿತಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ರವರಿಗೆ ಸನ್ಮಾನಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಇಂದೂರ ಸೊಸೈಟಿಯ ಅಧ್ಯಕ್ಷ ಯಮನಪ್ಪ ಮಾರಂಬೀಡ, ಕೆಡಿಸಿಸಿ ನಿರ್ದೇಶಕ ಎಚ್.ಎಂ ನಾಯ್ಕ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡ ಪಾಟೀಲ್, ಇಂದೂರು ಸೊಸೈಟಿ ಉಪಾಧ್ಯಕ್ಷ ಅಲ್ಲಾವುದ್ದೀನ್ ಮುಂಡಗೋಡ, ಸದಸ್ಯರಾದ ಮಹ್ಮದ್ ದೇಸಳ್ಳಿ, ದೇವೇಂದ್ರ ಕೆಂಚಗೊಣ್ಣವರ್, ಉಮೇಶ್ ಹರ್ತಿ, ನಾಗಯ್ಯ ಹಿರೇಮಠ, ಮೋನ್ಸಿ ಥಾಮಸ್, ಶಿವಾನಂದ ಕಣಕಣ್ಣವರ್, ಬಸಣ್ಣ ಗಲಬಿ ಮುಖಂಡರಾದ ನಾಗಭೂಷಣ ಹಾವಣಗಿ, ಎಂ.ಎನ್.ದುಂಢಸಿ, ಸಿದ್ದಪ್ಪ ಹಡಪದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ. ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ. ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ...

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

 Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ‌ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು, ತಾಯವ್ವನ ದೇವಸ್ಥಾನದ ಸಮೀಪದ ಮಿನಿ ಬ್ರಿಡ್ಜ್ ನ ಪ್ರಪಾತಕ್ಕೆ ಕಾರು ಬಿದ್ದಿದೆ. ಕಾರು ಪ್ರಪಾತಕ್ಕೆ ಬಿದ್ದು ಕಾರಿನಲ್ಲಿದ್ದ ಗ್ರಾಮ ಲೆಕ್ಕಾಧಿಕಾರಿ ಗೋಪಾಲ ಎಂ. ಸ್ಥಳದಲ್ಲೇ ದುರಂತ ಸಾವುವಕಂಡಿದ್ದಾರೆ. ಗೋವಿಂದ ರಾಥೋಡ್ ಮತ್ತು ಮಂಜುನಾಥ ಇಬ್ಬರು ಗಂಭೀರ ಗಾಯಗಳಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.