Home Public First Newz

Author: Public First Newz (Public First Newz)

Post
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....

Post
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...

Post
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

 ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...

Post
ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

 ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಅದೊಂದು ರಸ್ತೆ ಹದಗೆಟ್ಟು ಹಳ್ಳ ಹಿಡಿದಿದೆ. ಹಾಗಂತ, ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕ್ತಿದಾರೆ. ಕೊಪ್ಪ ಗ್ರಾಮದಿಂದ ಟಿಬೇಟಿಯನ್ ಕ್ಯಾಂಪ್ ನಂಬರ್ 3 ಕ್ಕೆ ಮಾರ್ಗ ಕಲ್ಪಿಸುವ ರಸ್ತೆ ನಡೆದಾಡಲೂ ಆಗದ ಸ್ಥಿತಿಗೆ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ ಅನ್ನೋದು ಜನರ ಜೀವ ಹಿಂಡುತ್ತಿದೆ. ದಶಕಗಳ ಸಮಸ್ಯೆ..! ಸುಮಾರು 2 ಕೀಮಿ ಇರೋ ರಸ್ತೆ ದಶಕಗಳಿಂದಲೂ ಯಥಾಸ್ಥಿತಿಯಲ್ಲಿದೆ. ನಿತ್ಯವೂ ಇಲ್ಲಿ ಸಂಚರಿಸುವ ಜನ ಅಧಿಕಾರಿಗಳು, ಜನಪ್ರತಿನಿಧಿಗಳ...

Post
ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!

ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!

ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.

Post
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ‌. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6  ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.  ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...

Post
ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!

ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!

 ಅದು ನಟ್ಟ ನಡುರಾತ್ರಿ, ಸುರಿಯುತ್ತಿರೋ ಮಹಾಮಳೆ, ಆ ಮಳೆಯ ರಪ ರಪ ಸಪ್ಪಳದ ನಡುವೆ ಅಲ್ಲೊಬ್ಬಳು ಸುಂದರಿ ತನ್ನೊಳಗಿನ ಸುಂದರ ರೂಪ ಹೊರಸೂಸಿದ್ದಳು. ಪವಾಡವೆಂಬಂತೆ ಮೆಲ್ಲನೆ ಅರಳಿ ನಿಂತಿದ್ದ ಚೆಲುವೆಯ ಸುತ್ತ ಮಧುರ, ಸುಮಧುರ ಘಮಲು. ನಿಜಕ್ಕೂ ಅದೊಂದು ಅದ್ಭುತ ಕ್ಷಣ.. ಆ ಅದ್ಬುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು ತಾಲೂಕಿನ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ಕುಟುಂಬ.. ಹೌದು, ತಾಲೂಕಿನ ಕೊಪ್ಪ ಗ್ರಾಮ ಮೋಹನ್ ಪಾಣತ್ರಿಯಲ್ ಮನೆಯಲ್ಲಿ ನಿನ್ನೆ ರಾತ್ರಿ ಮಹಾ ಸುಂದರಿ ಜನ್ಮ ತಾಳಿದ್ದಾಳೆ. ಅಪ್ಪಟ...

Post
ಚಿರತೆ ಬಂತು ಚಿರತೆ, ಬರೀ ಅಂತೆ ಕಂತೆ, ವದಂತಿಗಳಿಂದ ಆತಂಕದಲ್ಲಿದ್ದಾರೆ ಮಜ್ಜಿಗೇರಿ ಭಾಗದ ರೈತರು..!

ಚಿರತೆ ಬಂತು ಚಿರತೆ, ಬರೀ ಅಂತೆ ಕಂತೆ, ವದಂತಿಗಳಿಂದ ಆತಂಕದಲ್ಲಿದ್ದಾರೆ ಮಜ್ಜಿಗೇರಿ ಭಾಗದ ರೈತರು..!

ಮುಂಡಗೋಡ; ತಾಲೂಕಿನಲ್ಲಿ ಚಿರತೆಯ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ. ಚಿರತೆ, ಹುಲಿಗಳ ಬಗೆಗಿನ ಬಗೆ ಬಗೆಯ ವದಂತಿಗಳು ಎಲ್ಲೆಡೆ ಹರಡುತ್ತಿವೆ. ಹೀಗಾಗಿ, ಜನ್ರು ಹೊಲ ಗದ್ದೆಗಳಿಗೆ ಹೋಗಲು ಭಯ ಪಡುವಂತಾಗಿದೆ. ಮಜ್ಜಿಗೇರಿಯಲ್ಲಿ ಶುಕ್ರವಾರ ಚಿರತೆ ಕುರಿ ತಿಂದು ಹಾಕಿದ ಘಟನೆ ಬೆಳಕಿಗೆ ಬಂದ‌ ನಂತರವಂತೂ ಈ ಭಾಗದ ಜನರ ಭಯ ಮತ್ತಷ್ಟು ದುಪ್ಪಟ್ಟಾಗಿದೆ. ಹೊರಗೆ ಹೋಗಲೂ ಕೂಡ ಭಯ ಪಡುವಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳು ಭಯ ಪಡೋದು ಬೇಡ, ಎಚ್ಚರಿಕೆ ಇಂದ ಇರಿ ಅಂತಾ...

Post
ಕೊಪ್ಪದಲ್ಲಿ ದಾರಿತಪ್ಪಿ ಬಂದಿದ್ದ ಅಪರೂಪದ ಕಾಡು ಪ್ರಾಣಿ, ರಕ್ಷಿಸಿದ ಅರಣ್ಯ ಸಿಬ್ಬಂದಿ..!

ಕೊಪ್ಪದಲ್ಲಿ ದಾರಿತಪ್ಪಿ ಬಂದಿದ್ದ ಅಪರೂಪದ ಕಾಡು ಪ್ರಾಣಿ, ರಕ್ಷಿಸಿದ ಅರಣ್ಯ ಸಿಬ್ಬಂದಿ..!

 ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ಅಪರೂಪ ಕಾಡುಪ್ರಾಣಿಯನ್ನು ರಕ್ಷಿಸಲಾಗಿದೆ. ನಿರಂತರ ಸುರಿಯುತ್ತಿರೊ ಮಳೆಯಿಂದ ಕಂಗೆಟ್ಟ ಕಾಡು ಬೆಕ್ಕು(Indian small sivit) ಅನ್ನು ಅರಣ್ಯ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಂದಹಾಗೆ, ಇಂದು ಬೆಳಿಗ್ಗೆ ಕೊಪ್ಪ ಗ್ರಾಮದ ರಸ್ತೆ ಪಕ್ಕದ ಪೊದೆಯಲ್ಲಿ ಈ ಅಪರೂಪದ ಪ್ರಾಣಿ ಕಂಡಿದೆ. ಆಹಾರ ಅರಸಿಯೋ ಅಥವಾ ನಿರಂತರ ಮಳೆಯಿಂದಲೋ ಕಂಗೆಟ್ಟಿದೆ. ಹೀಗಾಗಿ, ಕಾಡು ಬಿಟ್ಟು ನಾಡಿನೆಡೆ ಬಂದಿದ್ದ ಕಾಡುಬೆಕ್ಕು ತೀವ್ರ ಭಯದಿಂದ ಅಲ್ಲೇ ಸುಳಿದಾಡಿದೆ. ಹೀಗಾಗಿ, ಈ ದೃಷ್ಯ ಕಂಡ ಗ್ರಾಮಸ್ಥರು ಅರಣ್ಯ...

Post
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...

error: Content is protected !!