Home Public First Newz

Author: Public First Newz (Public First Newz)

Post
ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

ಕಾರವಾರ: ಜಿಲ್ಲೆಯಲ್ಲಿ ವರುಣ ಎಡಬಿಡದೇ ಆರ್ಭಟಿಸುತ್ತಿದ್ದು, ಮಂಗಳವಾರ ಸಂಜೆಯ ವೇಳೆಗೆ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ...

Post
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್‌ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...

Post
ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಚರಣೆ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಚರಣೆ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ...

Post
ನಿರಂತರ ಮಳೆ ಹಿನ್ನೆಲೆ ದೇವಿಮನೆ ಬಳಿ ಗುಡ್ಡ ಕುಸಿತ, ಶಿರಸಿ- ಕುಮಟಾ ರಸ್ತೆ ಬಂದ್..!

ನಿರಂತರ ಮಳೆ ಹಿನ್ನೆಲೆ ದೇವಿಮನೆ ಬಳಿ ಗುಡ್ಡ ಕುಸಿತ, ಶಿರಸಿ- ಕುಮಟಾ ರಸ್ತೆ ಬಂದ್..!

ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ‌.

Post
ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!

ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!

ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಗೆ ಇಳಿದ ಘಟನೆ ಎಕ್ಕಂಬಿ ಸಮೀಪ ನಡೆದಿದೆ. ಶ ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ಬಸ್, ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮದ್ಯೆ ರಸ್ತೆ ಬದಿಯ ಗಟಾರಕ್ಕೆ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನ ಸೆಂಟ್ರಿಂಗ್ ಬೊಲ್ಟ್ ಕಟ್ಟಾಗಿ ಘಟನೆ ನಡೆದಿದೆ ಅಂತಾ ಹೇಳಲಾಗ್ತಿದೆ. ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.

Post
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...

Post
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ...

Post
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!

ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!

 ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...

Post
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...

error: Content is protected !!