ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು...
Top Stories
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
Author: Public First Newz (Public First Newz)
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ....
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!
ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು...
ನಂದಿಕಟ್ಟಾದಲ್ಲಿ ನಾಯಿ ದಾಳಿಗೆ ಕೋತಿ ಮರಿ ಬಲಿ, ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ...
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!
ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ...
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ...
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!
ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.