Home ಅಪಘಾತ

Category: ಅಪಘಾತ

Post
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ‌. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...

Post
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!

ಬ್ರೇಕಿಂಗ್‌ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಘನಘೋರ ದುರಂತ. ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ. ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿರುವ ಇಬ್ಬರು. ಬೆಳಗಾವಿ ನಗರ ಹೊರ ವಲಯದ ಕೆಎಲ್ಇ ಆಸ್ಪತ್ರೆ ಬಳಿ ಘಟನೆ. ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಡುತ್ತಿರುವ ಸಾರ್ವಜನಿಕರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Post
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!

ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!

ಹಾವೇರಿ; ಬೆಂಗಳೂರಿನಿಂದ ಹಾವೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಿರಿಯೂರು ಬಳಿ ರೆಸ್ಟ್ ವೇಳೆ ದ್ವಿಚಕ್ರ ವಾಹನ ಸವಾರನೋರ್ವ ರುದ್ರಪ್ಪ ಲಮಾಣಿ ಅವರಿಗೆ ಡಿಕ್ಕಿ ಹೊಡೆದು ತಲೆಗೆ, ಮೂಗಿಗೆ ಗಾಯಗಳು ಆಗಿವೆ ಎಂದು ಲಮಾಣಿ ಅವರನ್ನು ದಾವಣಗೆರೆ ಎಸ್ ರಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Post
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...

Post
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

 ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...

Post
ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!

ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!

 ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಾಲಗಾಂವ್ ಕೆರೆಯಲ್ಲಿ ನಡೆದಿದೆ. ಗ್ರಾಮಸ್ಥರ ಸಹಕಾರದಿಂದ ಮುಂಡಗೋಡ ಪಿಎಸ್ಐ ಪರಶುರಾಮ್ ಮಿರ್ಜಿಗಿ ಕೆರೆಯಲ್ಲಿ ಇಳಿದು ವ್ಯಕ್ತಿಯ ಶವ ಹೊತೆಗೆದಿದ್ದಾರೆ. ಗುಡ್ಡಪ್ಪ ಜಾಡರ್(58) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಮೀನು ಹಿಡಿಯಲು ಕೆರೆಯಲ್ಲಿ ಇಳಿದಿದ್ದ. ಈ ವೇಳೆ ಕೆರೆಯ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ. ಹೀಗಾಗಿ, ಸುದ್ದಿ ತಿಳಿದ ಪಿಎಸ್ಐ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

Post
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!

ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!

ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.  ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...

Post
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!

ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಬನವಾಸಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನೀಲಗಿರಿ ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದು, ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಕಲ್ಲಹಕ್ಕಲ ಗ್ರಾಮದ ಮಹೇಶ್ ಬಸವಂತಪ್ಪ ಶೃಂಗೇರಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಪರಶುರಾಮ್ ಕುರುಬರ (32) ಎಂಬುವ ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿಲುತ್ತಿದೆ. ಮುಂಡಗೋಡ ಪೊಲೀಸ್...

Post
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ‌ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

 ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ‌. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!