GOA FIRE ACCIDENT; ಪಣಜಿ (ಗೋವಾ): ಉತ್ತರ ಗೋವಾದ ನೈಟ್ಕ್ಲಬ್ನಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಪ್ರವಾಸಿಗರು ಸೇರಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಪಿಜಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಕ್ಲಬ್ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಗೋವಾ ಪೊಲೀಸರ ಹೇಳಿಕೆ...
Top Stories
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
Category: ಅಪಘಾತ
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ. ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








