Home ಫಿಲ್ಮ್ ಕಾಲಂ

Category: ಫಿಲ್ಮ್ ಕಾಲಂ

Post
ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಅಂತಾ ಪ್ರಾರ್ಥಿಸಿದ ಮಂತ್ರಾಲಯದ ಶ್ರೀಗಳು..!

ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಅಂತಾ ಪ್ರಾರ್ಥಿಸಿದ ಮಂತ್ರಾಲಯದ ಶ್ರೀಗಳು..!

ನಟ ಪುನೀತ್ ರಾಜಕುಮಾರ್ ನಿಧನ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಪುನೀತ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಪುನೀತ್ ಇನ್ನಿಲ್ಲ ಎನ್ನುವುದನ್ನ ಅರಗಿಸಿಕೊಳ್ಳುವುದು ಕಷ್ಟ, ಪುನೀತ್ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಡಾ.ರಾಜಕುಮಾರ ಕುಟುಂಬ ರಾಯರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ, ವಿಶೇಷ ಸಂದರ್ಭಗಳಲ್ಲಿ ಮಠಕ್ಕೆ ತಪ್ಪದೇ ಬಂದು ಹೋಗುತ್ತಾರೆ, ಮೂರು ಜನ ಅಣ್ಣತಮ್ಮಂದಿರು ಮಠದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವುದಾಗಿ ಪುನೀತ್ ಹೇಳಿದ್ದರು, ರಾಯರ ಆರಾಧನ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತೇವೆ ಎಂದಿದ್ದರು...

Post
ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?

ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಸ್ತಂಗತರಾಗಿದ್ದಾರೆ. ಅದ್ರಂತೆ ಇತ್ತಿಚೇಗಷ್ಟೇ ಕನ್ನಡ ಚಿತ್ರರಂಗ ಇನ್ನಿಬ್ಬರು ನಟರನ್ನು ಕಳೆದುಕೊಂಡಿದೆ. ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಕೂಡ ವಯಸ್ಸಲ್ಲದ ವಯಸ್ಸಲ್ಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾರದ ಸಂಗತಿ. ಅಂದಹಾಗೆ, ಇಲ್ಲಿ ಕಾಕತಾಳಿಯವೋ ಅಥವಾ ಕನ್ನಡ ಚಿತ್ರರಂಗದಲ್ಲಿ 17 ಅನ್ನೋ ಸಂಖ್ಯೆಯ ಅರಿಷ್ಟವೋ ಗೊತ್ತೇ ಆಗುತ್ತಿಲ್ಲ. ಯಾಕಂದ್ರೆ, ಇವತ್ತು ಅಸ್ತಂಗತರಾಗಿರೋ ಪುನೀತ್ ರಾಜಕುಮಾರ್, ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಇವ್ರೇಲ್ಲರ ಹುಟ್ಟಿದ ದಿನಾಂಕ 17… ಹೀಗಾಗಿ,...

Post
ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!

ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!

ಬೆಂಗಳೂರು: ನಟ ಪವರ್ ಸ್ಟಾರ್, ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಮಾತನಾಡಿದ್ದಾರೆ. “ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗ್ಬೇಕಿತ್ತು, ಆದ್ರೆ ಅವನು ಮೊದಲು ಹೋಗಿದ್ದಾನೆ, ಅಪ್ಪ ಅಮ್ಮನ ಹತ್ರ ನನಗಿಂತ ಮುಂಚೆನೇ ಹೋಗಿಬಿಟ್ಟ” ಅಂತಾ ಪುನೀತ್ ರಾಜಕುಮಾರ್ ಹಿರಿಯ ಸಹೋದರ ನಟ ರಾಘವೇಂದ್ರ ರಾಜಕುಮಾರ್ ಬಾವುಕ ನುಡಿ ನುಡಿದಿದ್ದಾರೆ. ಅಭಿಮಾನಿಗಳೇ ಅಪ್ಪುವನ್ನು ಯಾವುದೇ ತೊಂದರೆ ಆಗದಂತೆ ಕಳಿಸಿಕೊಡೋಣ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರದ ಜೊತೆಗೆ ನಿಂತು, ನನ್ನ ತಮ್ಮನನ್ನು...

Post
ನಟ ಪುನಿತ್ ರಾಜಕುಮಾರ್ ಇನ್ನು ನೆನಪು ಮಾತ್ರ..! ಬಾರದ ಲೋಕಕ್ಕೆ ತೆರಳಿದ “ಅಪ್ಪು”

ನಟ ಪುನಿತ್ ರಾಜಕುಮಾರ್ ಇನ್ನು ನೆನಪು ಮಾತ್ರ..! ಬಾರದ ಲೋಕಕ್ಕೆ ತೆರಳಿದ “ಅಪ್ಪು”

ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಹಾಗಂತ, ವಿಕ್ರಂ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಬೆಳಿಗ್ಗೆಯೆ ತೀವ್ರ ಹೃದಯಾಘಾತದಿಂದ ಪುನಿತ್ ರಾಜಕುಮಾರ್, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು‌. ಚಿಕಿತ್ಸೆ ಫಲಕಾರಿಯಾಗದೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪು ಕೊನೆಯುಸಿರು. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ...

Post
ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!

ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!

ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ನಟ ಪುನಿತ್ ರಾಜಕುಮಾರ್ ಸ್ಥಿತಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಟ ಶಿವರಾಜ್ ಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಮಾಹಿತಿ ಲಭ್ಯವಾಗಿದೆ. ವಿಕ್ರಂ ಆಸ್ಪತ್ರೆಯ ವೈದ್ಯರಿಂದ ಅಪ್ಪುವಿನ ಆರೋಗ್ಯದ ಸಂಪೂರ್ಣ ಮಾಹಿತಿ ಪಡೆದುಕೊಂಡಿರೋ ಸಿಎಂ ಹಾಗೂ ಶಿವರಾಜ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟ ಚಿತ್ರಣ ನೀಡೋ ಸಾಧ್ಯತೆ ಇದೆ ಎನ್ನಲಾಗಿದೆ.

Post
ನಟ ಪುನಿತ್ ರಾಜಕುಮಾರ್ ಸ್ಥಿತಿ ಗಂಬೀರ ಹಿನ್ನೆಲೆ, ಭಜರಂಗಿ-2 ಚಿತ್ರ ಪ್ರದರ್ಶನ ರದ್ದು..!

ನಟ ಪುನಿತ್ ರಾಜಕುಮಾರ್ ಸ್ಥಿತಿ ಗಂಬೀರ ಹಿನ್ನೆಲೆ, ಭಜರಂಗಿ-2 ಚಿತ್ರ ಪ್ರದರ್ಶನ ರದ್ದು..!

ಬೆಂಗಳೂರು: ನಟ ಪುನಿತ್ ರಾಜಕುಮಾರ್ ತೀವ್ರ ಗಂಭೀರ ಹಿನ್ನೆಲೆಯಲ್ಲಿ ಇವತ್ತಷ್ಟೇ ರಾಜ್ಯಾಧ್ಯಂತ ತೆರೆಕಂಡಿದ್ದ ಶಿವರಾಜ್ ಕುಮಾರ್ ಅಭಿನಯದ, ಭಜರಂಗಿ- 2 ಚಿತ್ರ ಪ್ರದರ್ಶನ ರದ್ದು ಪಡಿಸಲಾಗಿದೆ, ಸಂಜೆ 4 ಗಂಟೆಯಿಂದ ರಾಜ್ಯಾಧ್ಯಂತ ಚಿತ್ರ ಪ್ರದರ್ಶನ ರದ್ದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇವತ್ತು ಬೆಳಿಗ್ಗೆಯಷ್ಟೇ ತೆರೆಕಂಡಿದ್ದ ಭಜರಂಗಿ-2 ಟೀಂ ಗೆ ಖುದ್ದು ಪುನಿತ್ ರಾಜಕುಮಾರ್ ಶುಭಕೋರಿದ್ದರು

Post
ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ, ಆರೋಗ್ಯ ಕ್ಷೀಣ,ಕ್ಷೀಣ..! ಅಭಿಮಾನಿಗಳ ಆಕ್ರಂಧನ..!

ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ, ಆರೋಗ್ಯ ಕ್ಷೀಣ,ಕ್ಷೀಣ..! ಅಭಿಮಾನಿಗಳ ಆಕ್ರಂಧನ..!

ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ. ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಲೇ ಸಾಗಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ‌. ನಾವೂ ಎಲ್ಲಾ ರೀತಿಯ ಚಿಕಿತ್ಸೆ ಮಾಡುತ್ತಿದ್ದೇವೆ ಅಂತಾ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ರಂಗನಾಥ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕ್ಷಣ...

Post
20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ

20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದಾರಾಗಿದ್ದಾರೆ. 2018ರಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿ ಪ್ರೇಕ್ಷಕರನ್ನು ಗಮನಸೆಳೆದ ಕೆಲವು ದಿನಗಳ ನಂತರ ಎನ್ನುವ ಸಿನಿಮಾದ ನಿರ್ದೇಶಕ ಶ್ರೀನಿ ಇದೀಗ ಹೊಸತೊಂದು ಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶ್ರೀನಿ ಭರವಸೆಯ ಯುವ ನಿರ್ದೇಶಕ ಎನ್ನುವುದನ್ನು ಕೆಲವು ದಿನಗಳ ನಂತರ ಸಿನಿಮಾದಲ್ಲಿ ಸಾಬೀತು ಮಾಡಿದ್ದಾರೆ, ಕಣ್ಣಿಗೆ ಕಟ್ಟುವ ಕಥೆಯನ್ನು ಸೃಷ್ಟಿ ಮಾಡುವುದರಲ್ಲಿ ಶ್ರೀನಿ...

Post
ನಕ್ಕು ನಗಿಸಿದ್ದ ಹಿರಿಯ ಪೋಷಕ ನಟಿ ಬಿ.ಜಯಾ ವಿಧಿವಶ..! ಕಂಬನಿ ಮಿಡಿದ ಚಿತ್ರರಂಗ..!!

ನಕ್ಕು ನಗಿಸಿದ್ದ ಹಿರಿಯ ಪೋಷಕ ನಟಿ ಬಿ.ಜಯಾ ವಿಧಿವಶ..! ಕಂಬನಿ ಮಿಡಿದ ಚಿತ್ರರಂಗ..!!

ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಇಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ನಟಿಸಿದ್ದ ನಟಿಯ ನಿಧನಕ್ಕೆ ಚಿತ್ರರಂಗವೇ ಕಣ್ಣೀರು ಸುರಿಸಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ...

error: Content is protected !!