Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ‌ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು‌.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...

Post
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...

Post
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...

Post
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...

Post
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

Post
ಹುಬ್ಬಳ್ಳಿಯಲ್ಲಿ  ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

Crime News; ಹುಬ್ಬಳ್ಳಿ: ಕಳೆದ‌ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...

Post
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!

ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!

Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್‌ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್‌ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....

Post
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!

Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...

error: Content is protected !!