Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ...

Post
ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ...

Post
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....

Post
ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯ‌ರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ...

Post
ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ‌. ಇನ್ನು ಆಟದಲ್ಲಿ...

Post
ಮುಂಡಗೋಡ ಪೊಲೀಸಪ್ಪನ ವಿರುದ್ಧ 420 ಕೇಸ್, ಆತ ಹಾಸನದ ಯುವತಿಗೆ ಹಾಕಿದ್ದು, 18 ಲಕ್ಷದ ನಾಮ..!

ಮುಂಡಗೋಡ ಪೊಲೀಸಪ್ಪನ ವಿರುದ್ಧ 420 ಕೇಸ್, ಆತ ಹಾಸನದ ಯುವತಿಗೆ ಹಾಕಿದ್ದು, 18 ಲಕ್ಷದ ನಾಮ..!

ಇದು ಮುಂಡಗೋಡ ಪೊಲೀಸಪ್ಪನ ಘನಂಧಾರಿ ಕೆಲಸ. ಯುವತಿಯೋರ್ವಳಿಗೆ ಅನಾಮತ್ತಾಗಿ ಲಕ್ಷ ಲಕ್ಷ ಹಣ ಮುಂಡಾಮೋಚಿದ ನಯವಂಚಕತನದ ಸ್ಟೋರಿ. ಈತನಿಗೆ ಈ ಹಿಂದೆಯೇ ಇಲ್ಲಿನ ಇಲಾಖೆಯ ಹಿರಿಯರು ಒಂದಿಷ್ಟು ಕಿವಿ ಹಿಂಡಿದ್ದಿದ್ರೆ ಬಹುಶಃ ಇವತ್ತು ಇಡೀ ಇಲಾಖೆಗೆ ಆಗಿರೋ ಮುಜುಗರ ಒಂದಿಷ್ಟು ತಪ್ಪುತ್ತಿತ್ತೋ ಏನೋ. ಆದ್ರೆ, ಯಾರಂದ್ರೆ ಯಾರೂ ಈತನ ಅಡ್ನಾಡಿ ಕೆಲಸಗಳ ವಿರುದ್ಧ ಧನಿ ಎತ್ತಲೇ ಇಲ್ಲ‌. ಹೀಗಾಗಿ ಇವತ್ತು ಅದೊಂದು ಅಮಾಯಕ ಹೆಣ್ಣು ಜೀವ ಮುಂಡಗೋಡ ಠಾಣೆಯ ಮೆಟ್ಟಿಲೇರಿ FIR ದಾಖಲಿಸಿದೆ. ತನಗೆ ಆಗಿರೋ ಅನ್ಯಾಯದ...

Post
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?

ಶಿವಮೊಗ್ಗ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧನವಾಗಿದೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು, ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್ ಪೊಲೀಸರ ಅತಿಥಿಯಾಗಿದ್ದಾನೆ. ಅಂದಹಾಗೆ, ಇದೇ ಜೂ. 28 ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಅದಕ್ಕೂ ಮೊದಲೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ಪೊಲೀಸರಿಂದ ಬಂಧನವಾಗಿದೆ. ಮಹಿಳೆಯೊಬ್ಬರಿಗೆ ಬಳಸಿಕೊಂಡಿರುವ ಆರೋಪ ಹೊತ್ತಿರೋ ಅರುಣ್, ತನಗೆ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಮಹಿಳೆ...

Post
ಭಟ್ಕಳದಲ್ಲಿ ಮತ್ತೋರ್ವ ಶಂಕಿತ ಉಗ್ರನಿಗಾಗಿ ATS ಅಧಿಕಾರಿಗಳಿಂದ ಶೋಧ, ಶಂಕಿತನ ಮನೆಗೆ ನೋಟೀಸ್..!

ಭಟ್ಕಳದಲ್ಲಿ ಮತ್ತೋರ್ವ ಶಂಕಿತ ಉಗ್ರನಿಗಾಗಿ ATS ಅಧಿಕಾರಿಗಳಿಂದ ಶೋಧ, ಶಂಕಿತನ ಮನೆಗೆ ನೋಟೀಸ್..!

ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮತ್ತೊಬ್ಬ ಶಂಕಿತ (Suspected Terrorist) ಮಹಾರಾಷ್ಟ್ರದ ಉಗ್ರ ನಿಗ್ರಹ ಪಡೆ (ಎಟಿಎಸ್) ತೀವ್ರ ಶೋಧ ನಡೆಸಿದ್ದು, ಶಂಕಿತ ಉಗ್ರನ ನಿವಾಸಕ್ಕೆ ATS ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದು, ಶಂಕಿತನ ಬಂಧನಕ್ಕೆ ಉತ್ತರ ಕನ್ನಡ ಪೊಲೀಸರ ಸಹಕಾರ ಕೋರಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಲ ವರ್ಷಗಳ ಹಿಂದೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಭಟ್ಕಳ ಮೂಲದ ವ್ಯಕ್ತಿಯನ್ನು ಜೂನ್ 21ಕ್ಕೆ ಹಾಜರು ಪಡಿಸಲು ಪುಣೆ ಜಿಲ್ಲಾ ನ್ಯಾಯಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪುಣೆಯ ಅಧಿಕಾರಿಗಳ ತಂಡ ಭಟ್ಕಳದಲ್ಲಿ ತಲಾಶ್...

Post
ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..? ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..!

ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..? ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..!

 ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಬಿಸಿಯೂಟದ ನೌಕರಿ ಬಿಕರಿಗಿದೆಯಾ..? ಇಂತಹದ್ದೊಂದು ಅನುಮಾನ ಅದೊಂದು ಆಡಿಯೋ ಕೇಳಿದ ಎಂತವ್ರಿಗೂ ಮೂಡದೇ ಇರಲ್ಲ. ಮುಂಡಗೋಡ ಪಟ್ಟಣ ಪಂಚಾಯತಿಯ ಸದಸ್ಯೆಯೊಬ್ಬರು ಮಾತನಾಡಿದ್ದು ಎನ್ನಲಾದ ಆಡಿಯೋ ಸದ್ಯ ಊರ ತುಂಬಾ ವೈರಲ್ ಆಗಿದೆ. ಖುಲ್ಲಂ ಖುಲ್ಲಾ ದಂಧೆನಾ..? ಅಷ್ಟಕ್ಕೂ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಎರಡು ಶಾಲೆಗಳಿಗೆ ಅವಶ್ಯವಿರುವ ಬಿಸಿಯೂಟದ ಸಿಬ್ಬಂದಿಯ ನೇಮಕದಲ್ಲಿ ಪಟ್ಟಣ ಪಂಚಾಯತಿಯ ಆ ಸದಸ್ಯೆ ಖುಲ್ಲಂ ಖುಲ್ಲಾ ವ್ಯವಹಾರಕ್ಕೆ ಇಳಿದು ಬಿಟ್ರಾ..? ಬಿಸಿಯೂಟದ ಸಿಬ್ಬಂದಿಗಳ ನೇಮಕಕ್ಕೆ, ಬರೋಬ್ಬರಿ ತಲಾ 50...

Post
ಶಿರಸಿ ದಾಸನಕೊಪ್ಪದಲ್ಲಿ ಭಯೋತ್ಪಾದನೆ ನಂಟು; ಓರ್ವನನ್ನು ವಶಕ್ಕೆ ಪಡೆದ NIA

ಶಿರಸಿ ದಾಸನಕೊಪ್ಪದಲ್ಲಿ ಭಯೋತ್ಪಾದನೆ ನಂಟು; ಓರ್ವನನ್ನು ವಶಕ್ಕೆ ಪಡೆದ NIA

ಶಿರಸಿ: ಭಯೋತ್ಪಾದನೆಯ ನಂಟಿನ ಜಾಲ ಭೇದಿಸಲು ಶಿರಸಿಗೆ ಬಂದಿಳಿದ ಎನ್‌ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ದಾಸನಕೊಪ್ಪದ ಅಬ್ದುಲ್ ಸಕೂರ್ ಎನ್‌ಐಎ ವಶದಲ್ಲಿರುವ ಆರೋಪಿ. ಈತನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್‌ ಪೋರ್ಟನಲ್ಲಿ ನಕಲಿ ದಾಖಲೆ ನೀಡಿರುವ ಆರೋಪವಿತ್ತು. ಈ ನಡುವೆ ದುಬೈನಿಂದ ಬಕ್ರೀದ್ ಹಬ್ಬಕ್ಕೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಅಬ್ದುಲ್ ಸಕೂರ್‌ ಆಗಮಿಸಿದ್ದ. ಈ ವೇಳೆ ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಎನ್‌ಐಎ ತಂಡವು...

error: Content is protected !!