NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
Category: ಅಪರಾಧ ಜಗತ್ತು
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ...
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...