Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!

ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!

ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಸಮೀಪ, ಶೆಟ್ಟಿಕೇರಿ ಕ್ರಾಸ್ ಬಳಿ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆ ಸಲುವಾಗಿ ಮೃತದೇಹವನ್ನು ಹೊನ್ನಾವರ ತಾಲೂಕಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸದರಿಯವನ ಹೆಸರು ವಿಳಾಸ ಪತ್ತೆಯಾದಲ್ಲಿ ಹೊನ್ನಾವರ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ. ಮೊನಂ.9480805270 9480805270.

Post
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!

ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!

ಗುತ್ತಿಗೆದಾರನಿಂದ ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ನಾ ಕಾವೂಂಗಾ, ನಾ ಕಾನೇ ದೂಂಗಾ ಅಂತ ಜಪ ಮಾಡುವ ಬಿಜೆಪಿಗೆ ಭಾರೀ ಮುಜುಗರ ತಂದಿಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ...

Post
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?

ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?

ಅದು ಅಕ್ಷರಶಃ ಇಡೀ ಮುಂಡಗೋಡ ತಾಲೂಕನ್ನೇ ಬೆಚ್ಚಿ ಬೀಳಿಸಿರೋ ಮಹಿಳೆಯ ಮರ್ಡರ್ ಕೇಸ್, ಮುಂಡಗೋಡ ಪೊಲೀಸರಿಗೆ ಅಕ್ಷರಶಃ ಸವಾಲಾಗಿದೆ. ಕೊಳಗಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರೋ ರುಂಡವಿಲ್ಲದ ಮಹಿಳೆಯ ಶವ ಭೀಕರ ಹತ್ಯೆಯ ಕರಾಳತೆಗೆ ಸಾಕ್ಷಿಯಾಗಿದೆ. ಅದೇಲ್ಲಿಯೋ‌ ಭಯಾನಕವಾಗಿ ಮರ್ಡರ್ ಮಾಡಿ, ರುಂಡ ಚಂಡಾಡಿ ಜಸ್ಟ್ ದೇಹವನ್ನು ಮಾತ್ರ ಕೊಳಗಿಯ ಅರಣ್ಯಕ್ಕೆ ತಂದು ಎಸೆದು ಹೋದ್ರಾ ಹಂತಕರು..? ಅಥವಾ ಮತ್ತೇನಾದ್ರೂ ಬೇರೆಯದ್ದೇ ಕಾರಣಕ್ಕೆ ಇಂತಹದ್ದೊಂದು ಭೀಕರ ಹತ್ಯೆ ನಡೆದು ಹೋಯ್ತಾ..? ಗೊತ್ತಿಲ್ಲ. ಎರಡು ದಿನಗಳಾಯ್ತಾ..? ಅಸಲು, ಫೆ‌.20 ರ,...

Post
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?

ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?

ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಸಿಕ್ಕಿದೆ. ಅದ್ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ಇಲ್ಲಿ ಬೀಸಾಡಿ ಹೋಗಿರೋ ಸಂಶಯ ವ್ಯಕ್ತವಾಗಿದೆ‌. ಅಸಲು, ಮಹಿಳೆಯ ಶವ ಅಕ್ಷರಶಃ ಬೆತ್ತಲೆಯಾಗಿದೆ. ಈ ಶವದ ಹಿಂದೆ ಹಲವು ಭೀಕರತೆಯ ಅನುಮಾನಗಳು ಗರಿಗೆದರಿಕೊಂಡಿವೆ. ಏನಿಲ್ಲವೆಂದರೂ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಅದೆಲ್ಲೊ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರೋ ಅನುಮಾನ ಇದೆ. ಅಥವಾ ಅದೆ ಸ್ಥಳದಲ್ಲೇ ಮಹಿಳೆಯ...

Post
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ  ಪ್ರಕಟ..!

ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!

ಸಿದ್ಧಾಪುರದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಗೀತಾ ಪ್ರಭಾಕರ ಹುಂಡೇಕರ ಕೊಲೆ ಆರೋಪಿತನಾದ ಅಭಿಜಿತ ಗಣಪತಿ ಮಡಿವಾಳ ಇವರ ಮೇಲಿನ ಆಪಾದನೆಯು ರುಜುವಾತಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ರೂ.32,000 ದಂಡ, ಮೃತಳ ಅವಲಂಬಿತರಾದ ಮಕ್ಕಳಿಗೆ ರೂ.50,000 ಪರಿಹಾರ ನೀಡುವಂತೆ ಮತ್ತು ಮೃತಳ ಅವಲಂಬಿತರಾದ ಮಕ್ಕಳು ಜಿಲ್ಲಾ ಉಚಿತ ಕಾನೂನು ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದೆಂದು ಶಿರಸಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ, ಪೀಠಾಸೀನ ನ್ಯಾಯಾಧೀಶರಾದ ಕಿರಣ ಕಿಣಿ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಹೊರಬೀಡು ದಿನದಂದು ಪಟ್ಟಣದ ಅಂಬೇಡ್ಕರ್ ಓಣಿಯ ಬಸವರಾಜ ಮಲ್ಲಪ್ಪ ಚಲವಾದಿ ಎಂಬುವವರ ಮನೆ ಕಳ್ಳತನ ಮಾಡಿದ್ದ, ಅಂತರ ಜಿಲ್ಲಾ ಕಳ್ಳನನ್ನು ಹೆಡೆ ಮುರಿಕಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಹಳ್ಳಿಯ, ಮಂಜುನಾಥ ಬಸವಂತಪ್ಪ ನಾಯಕ (34) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಜನೆವರಿ 27 ರಂದು ಮಂಗಳವಾರ ಹೋರಬೀಡುವಿನ ದಿನ, ಮುಂಡಗೋಡ ಪಟ್ಟಣದ ಅಂಬೇಡ್ಕರ ಓಣಿಯಲ್ಲಿರುವ ಮನೆಯ ಮುಂದಿನ ಬಾಗಿಲನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಒಡೆದು ತೆಗೆದು ಒಳಗಡೆ...

Post
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!

ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಶಿವಾನಂದನ ಕೊಲೆಯತ್ನ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ‌. ಘಟನೆ ನಡೆದ ಕೆಲವೇ ಕೆಲವು ಘಂಟೆಗಳಲ್ಲಿ ಆರೋಪಿಯನ್ನ ಹೆಡೆಮುರಿ ಕಟ್ಟಿದ್ದಾರೆ. ಕೃತ್ಯ ನಡೆಸಿ ಪರಾರಿಯಾಗಿದ್ದ ಶಿವರಾಜನನ್ನ ಎಳೆದು ತಂದಿದ್ದಾರೆ‌. ಹೀಗಾಗಿ, ಬೆಂಗಳೂರಿಗೆ ಪರಾರಿಯಾಗಲು ಹೊಂಚು ಹಾಕಿದ್ದವ, ಮುಂಡಗೋಡ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ಸಾರಥ್ಯದ ಕ್ರೈಂ ಟೀಮಿನ ಚಾಣಾಕ್ಷತನದ ಬಲೆಗೆ ರೋಚಕವಾಗಿ ಬಿದ್ದು ಬಿಟ್ಟಿದ್ದಾನೆ. ಅದು ಗುರುವಾರ ಸಂಜೆ..! ಯಸ್, ತಟ್ಟಿಹಳ್ಳಿಯಲ್ಲಿ ತನ್ನ ತಾಯಿಗೆ ಕಿರುಕುಳ ನೀಡುತ್ತಿದ್ದ ಶಿವಾನಂದನಿಗೆ ಒಂದು ಗತಿ...

Post
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!

ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ  ಸಂಜೆ ನಡೆದ ಭೀಕರ ಹತ್ಯೆ ಯತ್ನ ಕೇಸಿನ ಅಸಲೀಯತ್ತು ಬಟಾಬಯಲಾಗಿದೆ. ಅಂದಹಾಗೆ, ಅಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದವನ ಹೆಸರು ಶಿವಾನಂದ ರಾಮಣ್ಣ ಗುಡಿಯಾಳ, ವಯಸ್ಸು 48 ವರ್ಷ. ಅಷ್ಟಕ್ಕೂ, ಹಾಗೆ ರಕ್ತದ ಮಡುವಿನಲ್ಲಿ ಬೀಳುವಂತೆ ಕತ್ತಿಗೆ ಬಲವಾಗಿ ಮಚ್ಚಿನಿಂದ ಕತ್ತರಿಸಿದ್ದವನ ಹೆಸರು ಶಿವರಾಜ್ ಕಲಕಟ್ಟಿ..!       ಅನುಮಾನದ ಪಿಶಾಚಿ..! ಅಸಲು, ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಗ್ರಾಮದ ಲಾರಿಚಾಲಕ ಶಿವಾನಂದ ರಾಮಣ್ಣ ಗುಡಿಯಾಳ(48) ಈ ಹಿಂದೆ ಎರಡೆರಡು ಮದುವೆಯಾಗಿದ್ದ. ಆದ್ರೆ, ಇಬ್ಬರು...

Post
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!

ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಆತನ ಮಗನಿಂದಲೇ ಭೀಕರ ಹತ್ಯೆಗೆ ಯತ್ನ ನಡೆದಿದೆ. ಪರಿಣಾಮ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಲ್ಲೆ ನಡೆಸಿದ ಶಿವರಾಜ ಪರಾರಿಯಾಗಿದ್ದಾನೆ‌. ಇನ್ನು ನಾಗಮ್ಮ ಎಂಬುವವಳನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ‌. ಶಿವಾನಂದ (47) ಎಂಬುವವನ ಮೇಲೆ ಭೀಕರ ಹತ್ಯೆಗೆ ಯತ್ನ ನಡೆದಿದೆ. ಮಗನಿಂದಲೇ ಕಂದಲಿಯಿಂದ ಹಿಂದಿನಿಂದ ಬಂದು ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನ ನಡೆದಿದೆ. ಸದ್ಯ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ...

Post
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಅಂದಹಾಗೆ, ಕೊಲೆ ಮಾಡಿ ಪರಾರಿಯಾಗಿದ್ದವನ ಬೆನ್ನು ಹತ್ತಿದ್ದ, ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಯಲ್ಲಾಪುರ...