Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್,...

Post
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ ಜೂನ್ 30ರ ವರೆಗೆ ಸ್ತ್ರೀ ಚೇತನ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ . ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ ಕನಿಷ್ಠ 55 ಪ್ರತಿಶತದಷ್ಟು ಇರಬೇಕೆಂಬ ನಿಯಮವಿದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 2024-25ನೇ ಸಾಲಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ 52.41 ಪ್ರತಿಶತವಿದೆ....

Post
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಮುಂಡಗೋಡ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಯಾಕಾಗಿದೆ ಗೊತ್ತಿಲ್ಲ. ಆದರೆ ಇದರ ಪರಿಣಾಮ ಮಾತ್ರ ಇನ್ನು ಎರಡು ಮೂರು ದಿನದಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವ್ರು ಪ್ರತಿಕ್ರಿಯಿಸಿದರು. ಬಸವನಗೌಡ ಪಾಟೀಲ್ ಉಚ್ಚಾಟನೆ ಅದು ಪಕ್ಷದ ನಿರ್ಣಯ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಬಿಜೆಪಿ...

Post
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!

ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!

ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ್ ಇಂದು ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೂಜೆ ಸಲ್ಲಿಸುವ ಮೂಲಕ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಶಾಸಕರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದ...

Post
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ‌. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...

Post
ಜಿಲ್ಲೆಯಲ್ಲಿ ಗೃಹ ಸಚಿವ:  ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಕಾರವಾರ: ಜಿಲ್ಲೆಯ ಗೋವಾ ಗಡಿ ಪ್ರದೇಶದ ಮೂಲಕ ರಾಜ್ಯಕ್ಕೆ ಮಾದಕ ವಸ್ತುಗಳ ಸಾಗಾಟ ನಡೆಯುವ ಬಗ್ಗೆ ಮತ್ತು ಅನಧಿಕೃತವಾಗಿ ಮದ್ಯ ಸಾಗಾಟವಾಗುವ ಬಗ್ಗೆ ಪರಿಶೀಲಿಸಿ, ಅತ್ಯಂತ ಕಟ್ಟಿನಿಟ್ಟಿನ ಪರಿಶೀಲನಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಯುದ್ದ ಸಾರಿದ್ದು, ಗಡಿಯ ಮೂಲಕ...

Post
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...

Post
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!

ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!

ಮುಂಡಗೋಡ ತಾಲೂಕಿನಕೆಲವೆಡೆ ಮಂಗಳವಾರ ಸುರಿದ ಭಾರೀ ಮಳೆ ಗಾಳಿ ಅವಾಂತರ ಸೃಷ್ಟಿಸಿದೆ. ಮೈನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಡ್ಲುಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಮೇಲ್ಚಾವಣಿಗಳು ಹಾರಿ ಹೋಗಿವೆ. ಶಾಲಾ ಸಮಯದಲ್ಲೇ ವಿದ್ಯಾರ್ಥಿಗಳು ಶಾಲೆಯಲ್ಲಿ ಇದ್ದಾಗಲೇ ದುರಂತ ಸಂಭವಿಸಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಏನಂದ್ರೆ ಏನೂ ತೊಂದರೆ ಆಗಿಲ್ಲ. ಮಂಗಳವಾರ ಮದ್ಯಾನ ಊಟದ ಸಮಯದಲ್ಲಿ ಭಾರಿ ಮಳೆಗಾಳಿ ಶುರುವಾಗಿದೆ. ಇದೇ ಸಮಯದಲ್ಲಿ ಸಿಡ್ಲಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಳೆ ಬಂದ ಕಾರಣಕ್ಕೆ ಒಂದೇ ಕೊಠಡಿಯಲ್ಲಿ ಸೇರಿದ್ದಾರೆ....

Post
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?

ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?

ಕಾರವಾರ: ರಾಜ್ಯದ ಗೃಹ ಸಚಿವ ಡಾ: ಜಿ. ಪರಮೇಶ್ವರ ಅವರು ಮಾರ್ಚ್ 26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸದ ವಿವರಗಳು ಇಂತಿವೆ.. ಕಾರವಾರದಲ್ಲಿ.. ಮಾರ್ಚ್ 26 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಎಸ್.ಪಿ. ಕಚೇರಿಯಲ್ಲಿ ವಿಧಾನಸಭಾ/ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಖರೀದಿಸಿ ಪೊಲೀಸ್ ಇಲಾಖೆಗೆ ನೀಡಿರುವ ಹೊಸ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯ ವಿದ್ಯುಕ್ತ ಚಾಲನೆ (Through...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...

error: Content is protected !!