Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!

ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!

 ಮುಂಡಗೋಡ ತಾಲೂಕಿನ ಇಂದೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಆಯ್ಕೆಯಾಗಿದ್ದಾರೆ. ಅಸಲು, ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ ಆಗಿರೋದು ವಿಶೇಷ. ಶಶಿಧರ್ ಪರವಾಪುರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅಂದಹಾಗೆ, 16 ಸದಸ್ಯ ಬಲದ ಇಂದೂರು ಗ್ರಾಮ ಪಂಚಾಯತಿಯಲ್ಲಿ ನಾಲ್ಕನೇ ಅವಧಿಗೆ ಫಕ್ಕಿರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗ್ತಿದಾರೆ. ವಿಚಿತ್ರ ಅಂದ್ರೆ ಈ ಹಿಂದೆ ಇದೇ ಗ್ರಾಮ ಪಂಚಾಯತಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬಿಜೆಪಿ ಬೆಂಬಲಿತರು ಕೇವಲ ನಾಲ್ಕೇ ಸದಸ್ಯ ಬಲಕ್ಕೆ...

Post
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...

Post
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....

Post
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರ ಶ್ರೀಗಂಧ ಮರ ಕಳ್ಳತನ ವಿಫಲ ಯತ್ನ ನಡೆದಿದೆ. ಎಸ್.ನಾರಾಯಣರಾವ್ ಎಂಬುವವರ ಮನೆ ಆವರಣದಲ್ಲಿ ಘಟನೆ ನಡೆದಿದ್ದು ಮರ ಕಡಿದು ಸಾಗಿಸಲಾಗದೇ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂದಹಾಗೆ, ಇದೇ ಸ್ಥಳದಲ್ಲಿ ಈ ಹಿಂದೆಯೂ ಶ್ರೀಗಂಧದ ಮರಗಳ ಕಳ್ಳತನದ ವಿಫಲ ಯತ್ನಗಳು ನಡೆದಿತ್ತು. ಆದ್ರೆ, ಇವತ್ತು ನಡೆದಿರೋ ಘಟನೆ ಖಚಿತತೆಯಿಂದಲೇ ಕಳ್ಳರು ಬಂದು, ಇನ್ನೇನು ಸಾಗಿಸುವ ಹಂತದಲ್ಲಿ ಅರ್ದಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ....

Post
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ರನ್ನು ವರ್ಗಾವಣೆ ಮಾಡಲಾಗಿದೆ. ಯಲ್ಲಾಪುರದ ಇಡಗುಂದಿ ಅರಣ್ಯ ವಲಯಕ್ಕೆ ನಿಯುಕ್ತಿ ಮಾಡಲಾಗಿದ್ದು ಇವ್ರ ಜಾಗಕ್ಕೆ ಅಂದ್ರೆ ಕಾತೂರು ಅರಣ್ಯ ವಲಯಕ್ಕೆ ವೀರೇಶ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Post
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ‌. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...

Post
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ

Post
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ

ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ

ಕಾರವಾರ; ರಾಜ್ಯದಲ್ಲಿ ಅತೀ ಹೆಚ್ಚು ಪೋಕ್ಸೋ ಪ್ರಕರಣ ಗಳು 18 ವರ್ಷದೊಳಗಿನ ವಯೋಮಿತಿಯಲ್ಲಿ ಕಂಡು ಬರುತ್ತಿರುವುದರಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾಗ್ರತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಕರೆ ನೀಡಿದ್ರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 18 ವರ್ಷದೊಳಗಿನವರೂ ಕೂಡಾ ಮಕ್ಕಳ ಹಕ್ಕುಗಳ ರಕ್ಷಣಾ...

Post
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!

ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಆದ್ರೆ, ಅಧ್ಯಕ್ಷರಾದ ಮೊದಲ ದಿನವೇ ಶಾಕ್ ಎದುರಾಗಿದೆ. ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ, ಮಾನ್ಯ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಅದರ ವಿರುದ್ಧ ನಾಲ್ವರು ಪಟ್ಟಣ ಪಂಚಾಯತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು‌. ಹೀಗಾಗಿ, ವಿಚಾರಣೆ ನಡಸಿರೊ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅಧ್ಯಕ್ಷ ಪದವಿಗೇರಿದ್ರೂ ಜಯಸುಧಾ ಭೋವಿ ಮೇಡಂ ಸದ್ಯ ಕೋರ್ಟ್...

Post
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...

error: Content is protected !!