Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!

ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!

ಮುರುಡೇಶ್ವರ : ಸಮುದ್ರದಲ್ಲಿ ಈಜಲು ತೆರಳಿದ ಕೋಲಾರ ಮೂಲದ ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಶ್ರಾವಂತಿ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ಮೂವರು ವಿಧ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಾ, ಲಾವಣ್ಯ, ಲಿಪಿಕಾ ನಾಪತ್ತೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

Post
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?

ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?

 ಮುಂಡಗೋಡ ತಾಲೂಕಿನಲ್ಲಿ ಒಳಗೊಳಗೇ ಒಂದಿಷ್ಟು ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ದಿಢೀರ್ ಎಂಬಂತೆ ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾ ಕಲ್ಮೇಶ್ ಗೋಸಾವಿ ಗೋಳೋ ಅಂತಾ ಕಣ್ಣೀರು ಹಾಕ್ತಾ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ‌. ಬಿಜೆಪಿ ಮುಖಂಡ ಎಲ್ಟಿ ಪಾಟೀಲರ ನಿವಾಸದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲರ ಸಮ್ಮುಖದಲ್ಲಿ ಕಮಲ ಮುಡಿದಿದ್ದಾರೆ. ಹೀಗಾಗಿ, ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಈಗ ಅಧ್ಯಕ್ಷರ ಬದಲಾವಣೆಯ ಗುಮ್ಮ ಬಹುತೇಕ ತಣ್ಣಗಾಗುವ ಲಕ್ಷಣಗಳಿವೆ. ಅಸಲು, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ...

Post
ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!

ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!

ಮುಂಡಗೋಡಿನ ಹಿರಿಯ ಮುಖಂಡ, ಸಮಾಜ ಸೇವಕ, ಸಾಯಿ ಮಂದಿರದ ಭಕ್ತ ಮಂಡಳಿಯ ಪ್ರಮುಖರಾದ ಅಶೋಕ ಗೋಕರ್ಣ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಇಂದು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಮುಂಡಗೋಡಿನ ಬಸ್ ನಿಲ್ದಾಣದ ಹತ್ತಿರ ತಮ್ಮದೇ ಜಾಗದಲ್ಲಿ ಸಾಯಿ ಮಂದಿರ ನಿರ್ಮಿಸಿ, ಸಾಯಿ ಭಗವಾನರ ಮೂರ್ತಿ ಪ್ರತಿಷ್ಠಾಪಿಸಿದ್ದರು. ಪತ್ನಿ ಹಿರಿಯ ಆಕಾಶವಾಣಿ ಸಂಗೀತ ಕಲಾವಿದೆ ಭಾರತಿ ಗೋಕರ್ಣರವರ ಮುಖಾಂತರ ಸಾಯಿ ಮಂದಿರದಲ್ಲಿ ಪ್ರತೀ ಗುರುವಾರ ಸತ್ಸಂಗ ನಡೆಸುತ್ತಿದ್ದರು‌. ಹೀಗಾಗಿ, ತಾಲೂಕಿನ ಸಾಯಿ ಭಕ್ತರ ಪಾಲಿಗೆ ಭಕ್ತ ಬಂಧುಗಳಾಗಿದ್ದರು. ಹೀಗಾಗಿ,...

Post
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!

ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!

 ಮುಂಡಗೋಡ: 24×7 ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ಬಾರಾಬಾನಗಡಿ ಆಗಿದೆಯಾ..? ಅದ್ಯಾವನೋ ಕಾಂಟ್ರಾಕ್ಟರ್ ಕಾಮಗಾರಿ ಹಳ್ಳ ಹಿಡಿಸಿದ್ರಾ..? ಇಂತಹದ್ದೊಂದು ಅನುಮಾನದೊಂದಿಗೆ ಶನಿವಾರ ನಡೆದ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ಕಾವೇರಿದ ಆರೋಪ, ಚರ್ಚೆಗೆ ಕಾರಣವಾಯ್ತು. ಅಂದಹಾಗೆ, ಕಾಮಗಾರಿಯ ದಾಖಲೆಯಲ್ಲಿ ಪೈಪ್ ಲೈನ್ ತೋರಿಸಲಾಗಿದೆ ಆದರೆ ಆ ಸ್ಥಳಗಳಲ್ಲಿ ಪೈಪ್ ಇಲ್ಲದೆ ಇರುವುಕಂಡು ಬಂದಿದೆ. ಹಾಗಾದರೇ ಆ ಪೈಪಗಳು ಎಲ್ಲಿ ಹೋದವು ಈ ಬಗ್ಗೆ ಸಮಗ್ರ ತನಿಖೆ‌ ಆಗಬೇಕೆಂದು ಪ.ಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏಕದಂ ಏರುದನಿಯಲ್ಲಿ...

Post
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..!  ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?

ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?

ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...

Post
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.‌!

ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.‌!

ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...

Post
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

 ಶಿರಸಿ: ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರ್ ಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ, ಫಲಾನುಭವಿಗಳಿಗೆ ಬಗರ್‌ಹುಕುಂ ಸಾಗುವಳಿ...

Post
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!

ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!

ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಹಿರಿಯ ರಾಜಕೀಯ ಮುಖಂಡ ಚೌಡಳ್ಳಿಯ ವೈ.ಪಿ.ಪಾಟೀಲ್ (72) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕಳೆದ ಬುಧವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವಿಧಿವಶರಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಶಿವಾಜಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್, ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ವೈ.ಪಿ.ಪಾಟೀಲ್ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Post
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ‌. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...

Post
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..?  ಯಾರ ಭಯವೂ ಇಲ್ಲದೇ ಹೋಯ್ತಾ..?

ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?

 ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ‌ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತ‌ನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...

error: Content is protected !!