Home ಉತ್ತರ ಕನ್ನಡ

Category: ಉತ್ತರ ಕನ್ನಡ

Post

ನಂದಿಕಟ್ಟಾ ಗ್ರಾಮದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು.. ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್...

Post

ಇಂದೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಹೆಬ್ಬಾರ್ ಚಾಲನೆ

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಗಾಟಿಸಿದ್ರು.. ಇಂದೂರು ಗ್ರಾಮದ ಶ್ರೀ ಗುರು ಗೋವಿಂದ ಸಂತ ಶಿಶುನಾಳ ಶರೀಫರ ಮಠದ ಆವರಣದಲ್ಲಿ ಆಯೋಜನೆಗೊಂಡಿರೋ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸಹದೇವಪ್ಪ ನಡಗೇರ್ ಅವರನ್ನು ಸಚಿವರು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಸಮ್ಮೇಳನಾಧ್ಯಕ್ಷರ ಹಿತ ನುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಮ್ಮೇಳನದಲ್ಲಿ, ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಿಲ್ಲಾಪಂಚಾಯತ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಚುಸಾಪ ಜಿಲ್ಲಾಧ್ಯಕ್ಷ ಜೆ.ಯು.ನಾಯಕ, ತಾಲೂಕಾ ಘಟಕದ...

Post

ಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..

Post

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ

ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ...

Post

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ

ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..  

Post

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ

ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆ‌ಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Post

ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್

ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...

Post

ಹುನಗುಂದ ಗ್ರಾಮಕ್ಕೆ ಜಿಪಂ ಸಿಇಓ ಪ್ರಿಯಾಂಗಾ ಭೇಟಿ; ನರೇಗಾ ಕಾಮಗಾರಿಗಳ ವೀಕ್ಷಣೆ

ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು..  ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು.. ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು.. ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..

Post

2019-20 ರಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ; 7.72 ಕೋಟಿ ರೂ. ಲಾಭ- ಸಚಿವ ಹೆಬ್ಬಾರ್

ಶಿರಸಿ : 2019 – 20 ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಈ ಬಾರಿ ಬ್ಯಾಂಕ್ ಒಟ್ಟು 7.72 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಅಂತಾ ಕಾರ್ಮಿಕ ಹಾಗು ಸಕ್ಕರೆ ಖಾತೆ ಸಚಿವ ಬ್ಯಾಂಕ್ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ರು.. ಅವರು ಇಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 2019 – 20 ಸಾಲಿನ ಬ್ಯಾಂಕ್ ನ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿ ಸಂಕ್ಷಿಪ್ತ ವರದಿಯನ್ನು ನೀಡಿ ಮಾತನಾಡುತ್ತಿದ್ದರು.. ಬ್ಯಾಂಕು ಪ್ರಾಥಮಿಕ ಕೃಷಿ...

Post

ಮುಂಡಗೋಡ ಪೊಲೀಸರ ಮಿಂಚಿನ ಕಾರ್ಯ; ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಟೊ ಹಾಕಿದ್ದವ ಅಂದರ್

ಮುಂಡಗೋಡ- ತಾಲೂಕಿನ ಯುವತಿಯೋರ್ವಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಬರೆದು, ಅಶ್ಲೀಲ ವಿಡಿಯೋ, ಪೋಟೋಗಳನ್ನು ಹರಿಬಿಟ್ಟ ಬೆಂಗಳೂರಿನ ಯುವಕನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.. ದಿನಾಂಕ 14-12-2020 ರಂದು ಮುಂಡಗೋಡ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದ ಯುವತಿಯೋರ್ವಳು, ಯಾರೋ ಒಬ್ಬ ವ್ಯಕ್ತಿ ತನ್ನ ಬಗ್ಗೆ ಅಶ್ಲೀಲ ವಿಡಿಯೋ ಹಾಗೂ ಪೋಟೊಗಳನ್ನು ಫೇಸ್ ಬುಕ್, ವಾಟ್ಸ್ ಅಪ್, ಇನ್ ಸ್ಟ್ರಾಗ್ರಾಂ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.. ಇದ್ರಿಂದ ನನಗೆ ಹಾಗೂ ನನ್ನ ಕುಟುಂಬದ ತೇಜೋವಧೆಯಾಗುತ್ತಿದೆ.. ಹೀಗಾಗಿ, ಕ್ರಮ ಕೈಗೊಳ್ಳಿ ಅಂತಾ ದೂರಿನಲ್ಲಿ...

error: Content is protected !!