Home ಹಾವೇರಿ

Category: ಹಾವೇರಿ

Post
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...

Post
ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!

ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!

ಹಾವೇರಿ: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಗೆ ಸಿಕ್ಕು ಮಹಿಳೆ ದಾರುಣ ಸಾವು ಕಂಡ ಘಟನೆ, ಹಾವೇರಿ ನಗರದ ವಾಲ್ಮೀಕಿ‌ ವೃತ್ತದ ಬಳಿ ನಡೆದಿದೆ. ಹುಬ್ಬಳ್ಳಿ ಯಿಂದ ಹಾವೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ ಗೆ, ಹಾವೇರಿಯ ಇಜಾರಿ ಲಕಮಾಪುರದ ನಿವಾಸಿ ಜಯಮ್ಮ ಕೂಳೇನೂರ (31) ಎಂಬುವವರು ಸಾವು ಕಂಡಿದ್ದಾರೆ. ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡ್ತಿದ್ದ ಮೃತ ಮಹಿಳೆ, ಪತಿ ರಸ್ತೆ ಪಕ್ಕ ನಿಂತು ಕರೆದ ಹಿನ್ನಲೆ ರಸ್ತೆ ದಾಟಲು ಹೋಗಿದ್ದರು. ಹೀಗಾಗಿ,...

Post
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...

Post
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...

Post
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಹಿರೇಕೆರೂರಿನ, ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು * ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ. * ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ. * ಕಳೆದ...

Post
ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಸಂಬಂಧ ಕಾಂಗ್ರೆಸ್ ನಲ್ಲಿ ಬಣಗಳ ತಿಕ್ಕಾಟ ಮಿತಿ ಮೀರಿದೆ. ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಬಹುತೇಕ ಕಗ್ಗಂಟಾಗಿದೆ. ಹೀಗಾಗಿ, ಇಂದು ಟಿಕೆಟ್ ಹಂಚಿಕೆ ಉಸ್ತುವಾರಿ ಸಮಿತಿ ಶಿಗ್ಗಾವಿಗೆ ಬಂದಿಳಿಯಲಿದೆ. ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಮಿತಿಯಿಂದ ಶಿಗ್ಗಾವಿಯಲ್ಲಿ ಬಡಿದಾಟದ ಬಣಗಳ ಜೊತೆ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಿಕ್ಕಿಯಾಗಿದೆ. ಪೊಲೀಸ್ ಬಂದೋಬಸ್ತ್..! ಅಸಲು, ಎರಡು ದಿನಗಳ ಹಿಂದಷ್ಟೇ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ್ ಜಾರಕೀಹೊಳಿ ನೇತೃತ್ವದಲ್ಲಿ ಸಭೆಯೊಂದು ನಡೆದಿತ್ತು. ಆ ವೇಳೆ ಇಲ್ಲಿನ...

Post
ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ...

Post
ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಮಸ್ಲಿಂರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಬೇಕೆಂದು ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ. ಸೋಮವಾರ ನಗರದಲ್ಲಿ ಜರುಗಿದ ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಪದಾಧಿಕಾರಿಗಳು ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 90-95% ಮುಸ್ಲಿಂರು ಮತ ಹಾಕುತ್ತಿದ್ದಾರೆ. ಆದ್ರೆ, ಮುಸ್ಲಿಂರಿಗೆ ಪ್ರಮುಖ ಅಧಿಕಾರ ಸಿಗುತ್ತಿಲ್ಲ. ಅಖಂಡ ಧಾರವಾಡ ಜಿಲ್ಲೆಯಲ್ಲಿ ಸ್ಥಾನಿಕವಾಗಿ ಯಾರೊಬ್ಬ ಎಂಪಿ, ಎಂಎಲ್ಎ ಎಂಎಲ್ಸಿ,...

Post
ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

 ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ...

Post
ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವಾಗಿದೆ, ಕಾರು ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದು ಬಿದ್ದ ಪರಿಣಾಮ, 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 6 ಜನರಿಗೆ ಗಾಯವಾಗಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದ್ದು, ಎನ್ ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರ್ ಬಿದ್ದಿದೆ‌. ಘಟನೆಯಲ್ಲಿ, ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ...

error: Content is protected !!