Home ಹಾವೇರಿ

Category: ಹಾವೇರಿ

Post
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ‌. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...

Post
ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (26) ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ...

Post
ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

 ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಂತರ, ಶಿಗ್ಗಾವಿ-ಸವಣೂರ ತಾಲೂಕಿನಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಹಾವೇರಿ ಜಿಲ್ಲಾ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಅನ್ನದಾನಿಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಾಗೂ ಸಾನಿದ್ಯವನ್ನು ಶ್ರೀ ಮ ನಿ ಪ್ರ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ...

Post
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...

Post
ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!

ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!

ಹಾವೇರಿ: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಗೆ ಸಿಕ್ಕು ಮಹಿಳೆ ದಾರುಣ ಸಾವು ಕಂಡ ಘಟನೆ, ಹಾವೇರಿ ನಗರದ ವಾಲ್ಮೀಕಿ‌ ವೃತ್ತದ ಬಳಿ ನಡೆದಿದೆ. ಹುಬ್ಬಳ್ಳಿ ಯಿಂದ ಹಾವೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ ಗೆ, ಹಾವೇರಿಯ ಇಜಾರಿ ಲಕಮಾಪುರದ ನಿವಾಸಿ ಜಯಮ್ಮ ಕೂಳೇನೂರ (31) ಎಂಬುವವರು ಸಾವು ಕಂಡಿದ್ದಾರೆ. ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡ್ತಿದ್ದ ಮೃತ ಮಹಿಳೆ, ಪತಿ ರಸ್ತೆ ಪಕ್ಕ ನಿಂತು ಕರೆದ ಹಿನ್ನಲೆ ರಸ್ತೆ ದಾಟಲು ಹೋಗಿದ್ದರು. ಹೀಗಾಗಿ,...

Post
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...

Post
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...

Post
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಹಿರೇಕೆರೂರಿನ, ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು * ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ. * ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ. * ಕಳೆದ...

Post
ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಸಂಬಂಧ ಕಾಂಗ್ರೆಸ್ ನಲ್ಲಿ ಬಣಗಳ ತಿಕ್ಕಾಟ ಮಿತಿ ಮೀರಿದೆ. ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಬಹುತೇಕ ಕಗ್ಗಂಟಾಗಿದೆ. ಹೀಗಾಗಿ, ಇಂದು ಟಿಕೆಟ್ ಹಂಚಿಕೆ ಉಸ್ತುವಾರಿ ಸಮಿತಿ ಶಿಗ್ಗಾವಿಗೆ ಬಂದಿಳಿಯಲಿದೆ. ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಮಿತಿಯಿಂದ ಶಿಗ್ಗಾವಿಯಲ್ಲಿ ಬಡಿದಾಟದ ಬಣಗಳ ಜೊತೆ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಿಕ್ಕಿಯಾಗಿದೆ. ಪೊಲೀಸ್ ಬಂದೋಬಸ್ತ್..! ಅಸಲು, ಎರಡು ದಿನಗಳ ಹಿಂದಷ್ಟೇ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ್ ಜಾರಕೀಹೊಳಿ ನೇತೃತ್ವದಲ್ಲಿ ಸಭೆಯೊಂದು ನಡೆದಿತ್ತು. ಆ ವೇಳೆ ಇಲ್ಲಿನ...

Post
ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ...

error: Content is protected !!