ಶಿಗ್ಗಾವಿ: ಶಿಗ್ಗಾವಿ ಸವಣೂರ ಮತ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. JDS ಪಕ್ಷದ ಅಭ್ಯರ್ಥಿ ಶಶಿಧರ ಯಲಿಗಾರ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿವು ಓಟ್ ಹಾಕಿ ಆರಿಸಿಕಳುಹಿಸಿದ ಶಾಸಕ ಬೆಂಗಳೂರಲ್ಲಿ ಜಿವನ ಮಾಡೋರು ಬೇಕೊ.? ನಿಮ್ಮ ಜೊತೆ ಸದಾ ಸೇವೆ ಮಾಡುವ ಶಾಸಕ ಬೇಕೊ..? ಎಂದು ನೀವೇ ತಿರ್ಮಾನ ಮಾಡಿ ಓಟ್ ಹಾಕಿ ಅಂತಾ ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇಪ೯ಡೆಗೊಂಡರು. ಸಂದರ್ಭದಲ್ಲಿ...
Top Stories
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
Category: ಹಾವೇರಿ
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!
ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!
ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?
ರಾಣೆಬೆನ್ನೂರಿನ ಶಹರ ಠಾಣೆಯ ಪಿಎಸ್ಐ ಹಾಗೂ ಆತನ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಾಮತ್ತಾಗಿ 40 ಸಾವಿರ ಲಂಚ ಸ್ವೀಕರಿಸೋವಾಗ ತಗಲಾಕ್ಕೊಂಡಿದ್ದಾರೆ. ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಖತರ್ನಾಕ ಲಂಚ ಬಾಕ ಆರೋಪಿಗಳು. ಇವರೀರ್ವರೂ ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ ಮಾಡಿಸಿಕೊಡುವ ವಿಚಾರಕ್ಕೆ ಬರೋಬ್ಬರಿ 50ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಅದರಲ್ಲಿ 40 ಸಾವಿರ ರೂ....
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ...
ದಾವಣಗೇರೆಯಲ್ಲಿ ಕೊಲೆಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!
ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...