Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...

Post
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌....

Post
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

Student Admitted; ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ...

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

 Student Problem; ಮುಂಡಗೋಡ ತಾಲೂಕಿನ ಪಾಳಾದ ಇಂದಿರಾಗಾಂದಿ ವಸತಿ ನಿಲಯದ ವಿದ್ಯಾರ್ಥಿಗಳು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಇಲ್ಲಿನ ಸಿಬ್ಬಂದಿಗಳು ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಕಳಪೆ ಆಹಾರ ಸೇವಿಸುವ ಅನಿವಾರ್ಯತೆಗೆ ಸಿಲುಕಿದ್ದಾರಾ..? ಅದೇಂತದ್ದೇ ಆಹಾರ ಸೇವಿಸಿದ್ರೂ ಅದನ್ನೇ ಅಮೃತವೆಂದು ಭಾವಿಸಿ ಯಾರಿಗೂ ತುಟಿ ಬಿಚ್ಚದೇ ಒಳಗೊಳಗೇ ತಮಗಾದ ನೋವುಗಳನ್ನು ಅದುಮಿಕೊಂಡಿದ್ದಾರಾ..? ಇದೇಲ್ಲ ಪ್ರಶ್ನೆಗಳೂ ಅಲ್ಲಿನ ಆ ರಾಶಿ ರಾಶಿ ನುಸಿಗಳ ಸಾಮ್ರಾಜ್ಯ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ.. ಹೌದು, ಬಡ ಹಿಂದುಳಿದ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ...

Post
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...

Post
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...

Post
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...

error: Content is protected !!