Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!

ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿ ಸಮೀಪ, ತಟ್ಟಿಹಳ್ಳಿ ಬಳಿ ಕಾರ್ ಹಾಗೂ ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಕಾರಲ್ಲಿದ್ದ ಒಂದು ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನಿಂದ ಯಲ್ಲಾಪುರಕ್ಕೆ ತೆರಳುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಮುಂಡಗೋಡಿನ ಕಡೆಗೆ ಬರುತ್ತಿದ್ದ ಟ್ರಾಕ್ಟರ್ ಗೆ ಮುಖಾಮುಕಿ ಡಿಕ್ಕಿಯಾಗಿದೆ. ಡಿಕ್ಕಿಯಾದ ಕಾರು ಸಿನಿಮಿಯ ರೀತಿಯಲ್ಲಿ ಪಲ್ಟಿಯಾಗಿದೆ. ಯಾವುದೇ ಪ್ರಾಣಾಪಾಯ ಆಗಿರೋ ಮಾಹಿತಿ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್...

Post
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲನಿಯ ಟಿಬೇಟಿಗನೊಬ್ಬ ಡಿಜಿಟಲ್ ವಂಚಕರ ಜಾಲದಲ್ಲಿ ಅನಾಮತ್ತಾಗಿ ತಗಲಾಕ್ಕೊಂಡಿದ್ದಾನೆ. ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ಅದೊಂದು ವಾಟ್ಸ್ ಆಪ್ ಕರೆಗೆ ಥರಗುಟ್ಟಿ, ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಅನಾಮತ್ತಾಗಿ ಕಳೆದುಕೊಂಡಿದ್ದಾನೆ. ಎಲ್ಲಾ ಕಳೆದುಕೊಂಡ ಮೇಲೆ ಸೈಬರ್ ಪೊಲೀಸರ ಮೊರೆ ಹೋಗಿದ್ದಾನೆ. ಪಾಪ, ಪೊಲೀಸ್ರು ಅದೇಷ್ಟೇ ಬಡಕೊಂಡ್ರೂ, ಇಂತಹ ವಂಚಕರ ಜಾಲದಲ್ಲಿ ನಿತ್ಯವೂ ಸಿಲುಕಿ ಒದ್ದಾಡುವವರ ಸಾಲಿನಲ್ಲಿ ಮತ್ತೊಬ್ಬ ನಿವೃತ್ತ ಟಿಬೇಟಿಯನ್ ಶಿಕ್ಷಕ ಸೇರಿಕೊಂಡಿದ್ದಾನೆ. ಆತ ಕ್ಯಾಂಪ್ ನಂಬರ್ 8 ರ ನಿವಾಸಿ..!...

Post
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

 ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭಾರೀ ಬೆಂಕಿ ಅವಘಡವಾಗಿದೆ. ಮನೆ ಮುಂದೆ ನಿಲ್ಲಿಸಿಟ್ಟಿದ್ದ ಆಟೋದ ಸಿಲಿಂಡರ್ ಸ್ಪೋಟವಾಗಿ ಬೆಂಕಿಯಿಂದ ಹೊತ್ತಿಉರಿದಿದೆ. ಮನೆಗೂ ಬೆಂಕಿ ತಗುಲಿ ಹಾನಿಯಾಗಿದೆ. ವೀರಭದ್ರಪ್ಪ ಹಡಪದ್ ಎಂಬುವವರಿಗೆ ಸೇರಿದ ಆಟೋ ರಿಕ್ಷಾಗೆ ಮಂಗಳವಾರ ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿದೆ. ಬೆಂಕಿಯ ರಭಸಕ್ಕೆ ಧಗ ಧಗನೇ ಹೊತ್ತಿ ಉರಿದಿದೆ, ಮನೆಗೂ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯಗಳು ಸಂಭವಿಸಿಲ್ಲ.

Post
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!

 ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ರಾದ್ಧಾಂತಗಳು ಸದ್ಯಕ್ಕೆ ನಿಲ್ಲುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಇನ್ನೇನು ನಾಡಿದ್ದು ಡಿಸೆಂಬರ್ 26 ರಂದು ದಲಿತ ಹಾಗೂ ರೈತ ಮುಖಂಡ ಚಿದಾನಂದ ಹರಿಜನ ಧರಣಿ ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದ್ದಾರೆ. ಇತ್ತಿಚೆಗಷ್ಟೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರೋ ಶಿಕ್ಷಕ ದಾಸಪ್ಪ ಎಂಬುವವರ ಪರವಾಗಿ ಸತ್ಯಾಗ್ರಹ ಮಾಡಲು ಚಿದಾನಂದ ಹರಿಜನ್ ಮುಂದಾಗಿದ್ದು ಚಿಗಳ್ಳಿ ಕೆಲ ಗ್ರಾಮಸ್ಥರು ಹಾಗೂ SDMC ಅಧ್ಯಕ್ಷರು, ಸದಸ್ಯರಿಗೆ ಫೋಷಕರಿಗೆ ಬೇಸರ ತರಿಸಿದೆ. ಹೀಗಾಗಿ, ನಿನ್ನೆ ಅವ್ರೇಲ್ಲ ಸೇರಿಕೊಂಡು...

Post
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಇಂದೂರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನಡೆಯಿತು. ಶಾಸಕ ಶಿವರಾಮ್ ಹೆಬ್ಬಾರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ರು. ಈ ವೇಳೆ ಈ ಹಿಂದಿನ ಅವಧಿಯಲ್ಲಿ ಸಹಕಾರ ಸಂಘದ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅಲ್ದೆ, ಆಡಳಿತ ಸಮಿತಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ರವರಿಗೆ ಸನ್ಮಾನಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಇಂದೂರ ಸೊಸೈಟಿಯ ಅಧ್ಯಕ್ಷ ಯಮನಪ್ಪ ಮಾರಂಬೀಡ, ಕೆಡಿಸಿಸಿ ನಿರ್ದೇಶಕ ಎಚ್.ಎಂ ನಾಯ್ಕ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ...

Post
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

 Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ‌ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು,...

Post
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಮುಂಡಗೋಡ ತಾಲೂಕಿನ ಗಡಿಭಾಗ, ತಡಸ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ರಾಜಾರೋಷವಾಗಿ ರಸ್ತೆಯ ಬದಿಯ ಕಾಡಲ್ಲಿ ಕುಳಿತಿರೋ ಚಿರತೆ ಕಂಡು ಜನ ಅಚ್ಚರಿಗೊಂಡಿದ್ದಾರೆ. ಚಿರತೆ ಕಾಣಿಸುತ್ತಿದ್ದಂತೆ ತಮ್ಮ ಮೊಬೈಲ್ ನಲ್ಲಿ ಚಿರತೆಯ ದೃಷ್ಯ ಸೆರೆಹಿಡಿದಿದ್ದಾರೆ. ಅಂದಹಾಗೆ, ಮುಂಡಗೋಡ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಮುಂಡಗೋಡಿನ ವಿಠ್ಠಲ್ ಬಾಳಂಬೀಡ ಹಾಗೂ ಗುಡ್ಡಪ್ಪ ಕಾತೂರ್ ಚಿರತೆ ಕಣ್ಣಿಗೆ ಬೀಳುತ್ತಿದ್ದಂತೆ, ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಅಲ್ಲದೆ...

Post
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

Forest Smugglers; ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಳೆಕೊಪ್ಪ (ಕರ್ಕಲ ಜಡ್ಡಿ) ಹತ್ತಿರ ಎರಡು ಬೈಕ್ ನಲ್ಲಿ ಜಿಂಕೆ ಚರ್ಮ ಹಾಗೂ ಕಾಡು ಹಂದಿಯ ಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಹೆಡೆಮುರಿ‌ಕಟ್ಟಿದ್ದಾರೆ. ಬಾಳೆಕೊಪ್ಪದ ಕನಕಪ್ಪ ದುರ್ಗಪ್ಪ ಮಾದರ್, ಪರಶುರಾಮ್ ಕನಕಪ್ಪ ಮಾದರ್, ಸೊರಬ ತಾಲೂಕು ಕೋಡಿಕೊಪ್ಪದ ಸುರೇಶ ಬಿನ್ ದೇವಪ್ಪ, ಉಮೇಶ್ ಬಿನ್ ಗುಡ್ಡಪ್ಪ, ಶಿವಪುತ್ರಪ್ಪ ಬಿನ್ ಹನುಮಂತಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಎರಡು ಬೈಕ್, ಒಂದು ಜಿಂಕೆ ಚರ್ಮ,...

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

Transfer of Sirsi AC; ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿಯವರನ್ಜು ಸರ್ಕಾರ ವಾರ್ಗಾವಣೆ ಮಾಡಿದೆ. ಅಸಲು, ಕಾವ್ಯಾರಾಣಿಯವರು ಬಂದು ಇನ್ನೂ ಎರಡು ವರ್ಷವಾಗಿಲ್ಲ, ಅವಧಿಗೂ ಮುಂಚೆಯ ಏಕಾಏಕಿ ವರ್ಗಾವಣೆ ಮಾಡಿರೋದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ‌. ಮುಂಡಗೋಡಿನ ಬಂಜಾರಾ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಎಸಿಯವರ ವರ್ಗಾವಣೆಯನ್ನು ಖಂಡಿಸಿದ್ದಾರೆ. ಶಿರಸಿ ವಿಭಾಗದಲ್ಲಿ ಎಸಿ ಕಾವ್ಯಾರಾಣಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದರು. ಹಿಂದುಳಿದವರ, ಬಡವರ ಪರವಾಗಿ ಸಾಲಷ್ಟು ಕೆಲಸ ಮಾಡುತ್ತಿದ್ದರು. ಅದೇಷ್ಟೇ ಹೊತ್ತಿನಲ್ಲಿ ಸಮಸ್ಯೆ ಹೊತ್ತು ಹೋದ್ರೂ...