Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?

ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?

ಮುಂಡಗೋಡ ತಾಲೂಕಿನ ಬಸಾಪುರ, ನಂದಿಕಟ್ಟಾ, ಅಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮರಿಯೊಂದಿಗೆ ತಾಯಿ ಚಿರತೆ ಇಲ್ಲಿ ಓಡಾಡುತ್ತಿದೆ ಅನ್ನೋದು ಕನ್ಫರ್ಮ್ ಆಗಿದೆ. ಹಾಗಂತ ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಬಸಾಪುರದ ಕಾಂಡಚಿನ ಗದ್ದೆಗಳಲ್ಲಿ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸಾರ್ವಜನಿಕರಿಗೆ ಅರಣ್ಯ ಇಲಾಖೆಯಿಂದ ಎಚ್ಚರಿಕೆಯ ಸಂದೇಶಗಳನ್ನು ಡಂಗುರದ ಮೂಲಕ ರವಾನಿಸಲಾಗುತ್ತಿದೆ. ನಾಯಿ ಕೊಂಡೊಯ್ದ ಚಿರತೆ..! ಅಂದಹಾಗೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬಸಾಪುರ ಸಮೀಪದ ಕಾಡಂಚಿನ ಗದ್ದೆಯಲ್ಲಿ ಗೋವಿನಜೋಳ ಕಾಯಲು...

Post
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!

ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...

Post
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ  ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!

ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!

ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು....

Post
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!

ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!

ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು...

Post
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!

ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!

ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ‌ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ‌‌. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ...

Post
ಮುಂಡಗೋಡ ಲೊಯೊಲಾ ಶಾಲೆಯ ಬಳಿ ಸರಣಿ ಅಪಘಾತ, ಚಿಟಗೇರಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ ಲೊಯೊಲಾ ಶಾಲೆಯ ಬಳಿ ಸರಣಿ ಅಪಘಾತ, ಚಿಟಗೇರಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೋಲಾ ಶಾಲೆಯ ಬಳಿ ಸರಣಿ ಅಪಘಾತವಾಗಿದೆ. ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಸಿದ್ದಪ್ಪ ಯಮುನಪ್ಪ ನಾಯ್ಕರ್ (45), ಎಂಬುವವನೇ ಗಂಭೀರ ಗಾಯಗೊಂಡಿ ವ್ಯಕ್ತಿಯಾಗಿದ್ದಾನೆ. ಮುಂಡಗೋಡಿನಿಂದ ಬೈಕ್ ಮೇಲೆ ಶಿರಸಿ ಮಾರ್ಗವಾಗಿ ಚಿಟಗೇರಿಗೆ ಹೋಗುತ್ತಿದ್ದ ವೇಳೆ, ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕಿಗೆ ಗುದ್ದಿ, ಆ ನಂತರ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ‌. ಹೀಗಾಗಿ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಇನ್ನು, ಮಾಹಿತಿ ತಿಳಿದು 108...

Post
ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ...

Post
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?

ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?

ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ...

Post
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!

ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!

ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...

Post
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?

ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....

error: Content is protected !!