ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
Top Stories
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
ಮಹೀಂದ್ರಾ ಗ್ರೂಪ್ನ ಈ ಸ್ಟಾಕ್ನಲ್ಲಿ HDFC ಮ್ಯೂಚುವಲ್ ಫಂಡ್ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ಪತ್ನಿಯಿಂದ ಕಪಾಳ ಮೋಕ್ಷ..?
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್..! ಯಾರು ಗೊತ್ತೆ..?
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
Category: ಮುಂಡಗೋಡ ಸುದ್ದಿ
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು...
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ,...
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!
ರಾಜ್ಯದಲ್ಲಿ SSLC ಫಲಿತಾಂಶ ಹೊರಬಿದ್ದಿದೆ. ಅದ್ರಂತೆ, ಮುಂಡಗೋಡ ತಾಲೂಕಿನಲ್ಲೂ SSLC ಫಲಿತಾಂಶ ಘೋಷಣೆ ಆಗಿದ್ದು, 65.3 ರಷ್ಟು ಶೇಕಡವಾರು ಫಲಿತಾಂಶ ತಾಲೂಕಿನ ಪಾಲಾಗಿದೆ. ಅದ್ರಲ್ಲಿ ಅತಿಹೆಚ್ಚು ಅಂಕ ಪಡೆದ ತಾಲೂಕಿನ ಮೂವರು ವಿದ್ಯಾರ್ಥಿಗಳ ಹೆಸರು ಇಲ್ಲಿದೆ. ತಾಲೂಕಿನ ಮಳಗಿ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸುರೇಶ್ ನಾಯ್ಕ್ 625 ಕ್ಕೆ 614 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇನ್ನು ಮುಂಡಗೋಡಿನ ಮೌಲಾನಾ ಆಜಾದ್ ಪ್ರೌಢಶಾಲೆಯ ವಿದ್ಯಾರ್ಥಿನಿ, ಪರ್ವೀನ್ ಕೌಸರ್ ಅಬ್ದುಲ್ ಕರೀಂ ನರೇಗಲ್,...
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!
ಮುಂಡಗೋಡ ತಾಲೂಕಿನಲ್ಲಿ ಅದ್ಯಾಕೋ ಏನೋ ಎಲ್ಲವೂ ಸರಿಯಿಲ್ಲ. ಇಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷವೋ ಗೊತ್ತಿಲ್ಲ. ಇಲ್ಲಿ ಏನಂದ್ರೆ ಏನೂ ನಡೆಯುತ್ತಿಲ್ಲ ಅನ್ನೋ ಮಾತು ಕೇಳಿ ಬರ್ತಿವೆ. ಬೇರೆ ಏನಾದ್ರೂ ಸಮಸ್ಯೆಗಳು ಒತ್ತಟ್ಟಿಗಿರಲಿ, ಆದ್ರೆ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಪಾಠ ಕೇಳಲು ತಾಲೂಕಿನಲ್ಲಿ ಬರೋಬ್ಬರಿ 79 ಶಾಲೆಗಳು ಸಾಧ್ಯವಾಗದ ಸ್ಥಿತಿಯಲ್ಲಿದೆ. ಹೌದು, ಮುಂಡಗೋಡ ತಾಲೂಕಿನ ಒಟ್ಟೂ 169 ಶಾಲೆಗಳಲ್ಲಿ 79 ಶಾಲೆಗಳಿಗೆ ಪ್ರಕೃತಿ ವಿಕೋಪದಿಂದ ಹಾನಿಯಾಗಿದೆ. ಅನುದಾನ ಕೊರತೆಯಿಂದಾಗಿ ಶಾಲೆಗಳು ದುರಸ್ಥಿಯಾಗದೆ ಹಾಗೆಯೇ ಉಳಿದುಕೊಂಡಿರುವುದು ಪಾಲಕರಲ್ಲಿ ಆತಂಕ...
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ, ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!
ಮುಂಡಗೋಡ ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ, ಗಾಳಿ ಸಿಡಿಲಿನಾರ್ಭಟಕ್ಕೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.. ಮುಂಡಗೋಡ ಪಟ್ಟಣದಲ್ಲೇ ಎರಡು ಕಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರಗಳು ಹೊತ್ತಿ ಉರಿದಿದ್ದರೆ, ತಾಲೂಕಿನ ನಂದಿಪುರ ಗ್ರಾಮದಲ್ಲಿ ಹಲವು ಮನೆಗಳಿಗೆ ಸಿಡಿಲಿನ ಸೆಳೆತ ಭಾರೀ ಹಾನಿ ಮಾಡಿದೆ. ನಂದಿಪುರ ಗ್ರಾಮದ ದಸ್ತಗಿರ ಮಹ್ಮದ್ ಹುಸೇನ್ ಮರಗಡಿ ಎಂಬುವವರ ಮನೆ ಮುಂದಿನ ಗಿಡಕ್ಕೆ ಸಿಡಿಲು ಹೊಡೆದ ಪರಿಣಾಮ, ಮನೆಯ ವಿದ್ಯುತ್ ವೈಯರಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಟಿವಿ, ಪ್ರಿಡ್ಜು...
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...