Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಧಿವಶ, ಹಲವರ ಸಂತಾಪ..!

ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಧಿವಶ, ಹಲವರ ಸಂತಾಪ..!

ಮುಂಡಗೋಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನರಸಿಂಹ ಪರಮೇಶ್ವರ ಭಟ್ (56) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಂಶುಪಾಲರು ತಡರಾತ್ರಿ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೂಲತಃ ಯಲ್ಲಾಪುರ ಪಟ್ಟಣದವರಾಗಿದ್ದ ನರಸಿಂಹ ಪರಮೇಶ್ವರ ಭಟ್, ಕಳೆದ 13 ವರ್ಷಗಳಿಂದ ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಕಳೆದ ಫೆಬ್ರುವರಿಯಲ್ಲಿ ಮುಂಡಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಅಲ್ದೇ ಫೆ. 7...

Post
ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!

ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!

 ಮುಂಡಗೋಡ: ಜೂನ್ ತಿಂಗಳು ಕಳೆಯುತ್ತ ಬಂದರೂ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದು ತಾಲೂಕಿನ ಅನ್ನದಾತರಿಗೆ ಭಾರೀ ಆತಂಕ ತಂದಿಟ್ಟಿದೆ. ಬಹುತೇಕ ಬಿತ್ತನೆ ಕಾರ್ಯಕ್ಕೆ ಮಳೆರಾಯನ ಮುನಿಸಿನಿಂದ ಭಾರೀ ಅಡಚಣೆಯಾಗಿದೆ. ಕೆಲವು ಕಡೆ ಬೀಜ ಬಿತ್ತನೆ ಕಾರ್ಯ ಮಾಡಿದ್ದರೂ ಬೀಜ ಮೊಳಕೆಯೊಡೆಯಲು ನೀರಿನ ಅಭಾವ ತಲೆದೋರಿದೆ. ಹೀಗಾಗಿ, ತಾಲೂಕಿನ ಕಲಕೇರಿಯ ಮಹಿಳೆಯರು ಮಳೆಗಾಗಿ ವಿಶೇಷ, ವಿಶಿಷ್ಟ ಕಾರ್ಯ ಮಾಡಿದ್ದಾರೆ. ಕಪ್ಪೆಯ ಮೆರವಣಿಗೆ..! ಯಸ್, ಕಲಕೆರಿಯ ಮಹಿಳೆಯರು ಇಂದು ಬೆಳಗಿನಿಂದ ಮಳೆಗಾಗಿ ಕಪ್ಪೆಯ ಪೂಜೆ ಮಾಡಿ ಪ್ರಾರ್ಥಿಸಿದ್ದಾರೆ‌. ಮಳೆರಾಯನಿಗೆ...

Post
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ‌. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...

Post
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ‌ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ‌. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...

Post
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

    ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ‌. ಅಕ್ರಮ‌ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ‌. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ‌. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

Post
ಮುಂಡಗೋಡಿನ ಯುವಕ ಕಣ್ಮರೆ, ಎಲ್ಲಾದ್ರೂ ಸಿಕ್ಕರೆ ಮಾಹಿತಿ ನೀಡಿ..!

ಮುಂಡಗೋಡಿನ ಯುವಕ ಕಣ್ಮರೆ, ಎಲ್ಲಾದ್ರೂ ಸಿಕ್ಕರೆ ಮಾಹಿತಿ ನೀಡಿ..!

ಮುಂಡಗೋಡಿನ ಯುವಕನೋರ್ವ ನಾಪತ್ತೆಯಾಗಿದ್ದಾನೆ. 23 ವರ್ಷದ ಯುವಕ ಜೂನ್ 3 ರಿಂದಲೇ ನಾಪರ್ತೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ, ನಾಪತ್ತೆಯಾಗಿರೋ ಯುವಕನನ್ನು ಹುಡುಕಿಕೊಡಿ ಅಂತಾ ಪೋಷಕರು ಮನವಿ ಮಾಡಿದ್ದಾರೆ‌. ಅಂದಹಾಗೆ, ಯುವಕನ ಹೆಸರು ಸಿದ್ದಾರೂಢ ಗೌಳಿ (23) ಈತ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿಯಾಗಿದ್ದು ಕಳೆದ ಜೂನ್ 3 ರಂದು ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವನು ಎರಡು ದಿನ ಕಳೆದರೂ ವಾಪಸ್ ಮನೆಗೆ ಬಂದಿಲ್ಲ‌. ಹೀಗಾಗಿ, ಕುಟುಂಬಸ್ಥರು ಪರಿಚಯವಿರುವ ಎಲ್ಲಾ ಕಡೆ ತಿರುಗಾಡಿ ಯುವಕನನ್ನು...

Post
ಸನವಳ್ಳಿಗಷ್ಟೇ ಸೀಮಿತವಾಯ್ತಾ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧದ ಸಮರ..? ಸಾಹೇಬ್ರೆ, ತಾಲೂಕಿನೆಲ್ಲೆಡೆ ಇದೆ ಅಕ್ರಮ ಭಟ್ಟಿಗಳು..! ಕ್ರಮ ಯಾವಾಗ..?

ಸನವಳ್ಳಿಗಷ್ಟೇ ಸೀಮಿತವಾಯ್ತಾ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧದ ಸಮರ..? ಸಾಹೇಬ್ರೆ, ತಾಲೂಕಿನೆಲ್ಲೆಡೆ ಇದೆ ಅಕ್ರಮ ಭಟ್ಟಿಗಳು..! ಕ್ರಮ ಯಾವಾಗ..?

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಹೆಜ್ಜೆಗೊಂದರಂತೆ ಇರೋ ಅಕ್ರಮ ಇಟ್ಟಿಗೆ ಭಟ್ಟಿಗಳ‌ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಸಾಹೇಬ್ರು ಸಮರ ಸಾರಿದ್ದಾರೆ‌. ನಿನ್ನೆ ಇಡೀ ಸನವಳ್ಳಿಯ ಅಕ್ರಮ ಇಟ್ಟಿಗೆ ಭಟ್ಟಿ ಮಾಲೀಕರಿಗೆ ಛಳಿ ಬಿಡಿಸಿದ್ದಾರೆ. ಹೀಗಾಗಿ, ತಾಲೂಕಿನ ಮಂದಿ ತಹಶೀಲ್ದಾರರ ಖಡಕ್ ಕ್ರಮಕ್ಕೆ ಶ್ಲಾಘನೆ ವ್ಯಕ್ತ ಪಡಿಸ್ತಿದಾರೆ. ನಿಜ..! ತಾಲೂಕಿನ ಸನವಳ್ಳಿಯಲ್ಲಿ ಇಟ್ಟಿಗೆ ಭಟ್ಟಿಗಳ ರಾಜಾರೋಶತನಕ್ಕೆ ಕಡಿವಾಣ ಹಾಕುವ ಅವಶ್ಯಕತೆ ಇದ್ದೇ ಇದೆ. ಅದನ್ನ ಇಡೀ ತಾಲೂಕಿನ ಜನ ಬಯಸಿದ್ರು. ಕಾರಣವೆಂದ್ರೆ, ಅಲ್ಲಿ ಸಾಕಷ್ಟು ಕಾನೂನುಗಳ ಉಲ್ಲಂಘನೆ ಆಗ್ತಿತ್ತು....

error: Content is protected !!