Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..!  ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

 ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...

Post
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ,...

Post
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕ‌ಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...

Post
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು...

Post
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತದ ಕಳಕಿಕಾರೆ ಮಜಿರೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಹುತೇಕ‌ ಇಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಸಂಕಟ ಒಂದೆಡೆಯಾದ್ರೆ, ಗ್ರಾಮಸ್ಥರಿಗೆ ನೀರು ಪೂರೈಸಲು ಮೈನಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಪರದಾಡುವ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಅಂದಹಾಗೆ, ಮೈನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಕೀಕಾರೆಯಲ್ಲಿ RWS ಇಲಾಖೆಯಿಂದ ಬೋರ್ವೆಲ್ ಕೊರೆದಿದ್ದಾರೆ. ಆದ್ರೆ, ಜೀವಜಲ ಮಾತ್ರ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿನ ಜನ್ರಿಗೆ ಕುಡಿಯುವ...

Post
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವೀರಶೈವ ಧರ್ಮ ಸಂಸ್ಥಾಪಕ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. 2024-25 ಸಾಲಿನಯುಗಮಾನೋತ್ಸವ ಹಿನ್ನೆಲೆಯಲ್ಲಿ ಹುನಗುಂದ ಗ್ರಾಮದ ಮಂತ್ರವಾಡಿ ಮಠದ ಶ್ರೀ ರೇಣುಕ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬ್ಯಾಹಟ್ಟಿಯ ಉಜ್ಜಯಿನಿ ಶಾಖಾ ಹಿರೇಮಠದ ಶ್ರೀ ಷ ಬ್ರ ಮರುಳ ಸಿದ್ಧ ಶಿವಾಚಾರ್ಯ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುನಗುಂದ ಸರ್ವಧರ್ಮದ ಗುರು ಹಿರಿಯರು, ಜಂಗಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

Post
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....

Post
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ  “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು‌. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ...

Post
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...

Post
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...

error: Content is protected !!