Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ಆಧ್ಯಕ್ಷರ ಆಯ್ಕೆ ಕಸರತ್ತು, ಪಟ್ಟಕ್ಕೇರ್ತಾರಾ ರೇಣುಕಾ..?

ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ಆಧ್ಯಕ್ಷರ ಆಯ್ಕೆ ಕಸರತ್ತು, ಪಟ್ಟಕ್ಕೇರ್ತಾರಾ ರೇಣುಕಾ..?

ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾ ಹನುಮಂತ್ ಜಾಡರ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಒಟ್ಟೂ 13 ಸದಸ್ಯ ಬಲದ ಸಾಲಗಾಂವ್ ಗ್ರಾಮ ಪಂಚಾಯತಿಯಲ್ಲಿ ಬಹುತೇಕ ಬಿಜೆಪಿ ಬೆಂಬಲಿತರದ್ದೇ ಪಾರುಪತ್ಯ. ಹೀಗಾಗಿ, 15 ತಿಂಗಳ ಅಧಿಕಾರ ನಡೆಸಿರೋ ನೇತ್ರಾ ಹನುಮಂತ್ ಜಾಡರ್ ಅಧಿಕಾರ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ ಮತ್ತೊಂದು 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಅನುವು...

Post
ಬಾಚಣಕಿ ಗ್ರಾಪಂ ನೂತನ ಅಧ್ಯಕ್ಷರಾಗಿ ಸಂತೋಷ ಸಣ್ಣಮನಿಗೆ ಭರ್ಜರಿ  ಗೆಲುವು..!

ಬಾಚಣಕಿ ಗ್ರಾಪಂ ನೂತನ ಅಧ್ಯಕ್ಷರಾಗಿ ಸಂತೋಷ ಸಣ್ಣಮನಿಗೆ ಭರ್ಜರಿ ಗೆಲುವು..!

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ ಸಣ್ಣಮನಿ ಆಯ್ಕೆಯಾಗಿದ್ದಾರೆ‌. ಇದ್ರೊಂದಿಗೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಭರ್ಜರಿ ಜಯ ಸಿಕ್ಕಿದೆ‌. 13 ಸದಸ್ಯರಲ್ಲಿ 9 ರ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಆದ್ರೆ, ಇಂದು ನಡೆದ ಚುನಾವಣೆಯಲ್ಲಿ ಬರೋಬ್ಬರಿ 9 ಜನರ ಬೆಂಬಲದೊಂದಿಗೆ ಸಂತೋಷ ಸಣ್ಣಮನಿ...

Post
ಬಾಚಣಕಿ ಗ್ರಾಪಂ ಅಧ್ಯಕ್ಷ  ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...

Post
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!

ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!

ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್...

Post
ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!

ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Post
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...

Post
ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!

ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!

ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.

Post
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!

ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Post
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯ‌ಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?

ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯ‌ಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?

ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...

Post
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!

ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!

ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್‌ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.

error: Content is protected !!