ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ...
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Category: ಮುಂಡಗೋಡ ಸುದ್ದಿ
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ...
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ...
ಡಿ.22 ಕ್ಕೆ ಅರಣ್ಯ ಅತಿಕ್ರಮಣದಾರ ರಿಂದ “ಬೆಳಗಾವಿ ಚಲೋ”
ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ....
ನಂದಿಕಟ್ಟಾದಲ್ಲಿ ನಟ ಪುನೀತ್ ನೆನಪಲ್ಲಿ, ಮುಕ್ತ ಕಬಡ್ಡಿ ಪಂದ್ಯಾವಳಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು...
ಅತ್ತಿವೇರಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆ ತೆರವು..!
ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು. ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ...
ವಡಗಟ್ಟಾ ಬಳಿ ಬೈಕ್ ಗೆ ಅಡ್ಡ ಬಂದ ಕಾಡುಹಂದಿ, ಬೈಕ್ ಬಿದ್ದು, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರಿನಲ್ಲಿ ಪರಿಷತ್ ಗೆಲುವಿಗೆ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ಹುನಗುಂದ ಗ್ರಾಮದಲ್ಲೂ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು..
ಅರಶಿಣಗೇರಿ ಕಾಲುವೆ ಕಾಮಗಾರಿ ಕಳಪೆ, ದುರಸ್ಥಿ ಮಾಡುವಂತೆ ರೈತರ ಆಗ್ರಹ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಕೆರೆಯ ಕಾಲುವೆಯನ್ನು ಆದಷ್ಟು ಬೇಗ ದುರಸ್ತಿ ಮಾಡಿಸಿ ರೈತರಿಗೆ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಡಬೇಕಾಗಿ ರೈತರು ಮನವಿ ಮಾಡ್ತಿದಾರೆ. ಅರಶಿಣಗೇರಿ, ಅಗಡಿ ಹುನಗುಂದ ಗ್ರಾಮಗಳ ರೈತರ ಜೀವನಾಡಿಯಾಗಿರೋ ಅರಶಿಣಗೇರಿ ಕೆರೆಯ ಕಾಲುವೆಯನ್ನು ಈಗಾಗಲೇ ದುರಸ್ಥಿ ಕಾರ್ಯ ಮಾಡಿರೋ ಚಿಕ್ಕ ನೀರಾವರಿ ಇಲಾಖೆ ಅರ್ದಮರ್ದ ಕೆಲಸ ಮಾಡಿ ಹೋಗಿದ್ದಾರೆ ಅಲ್ಲದೇ ಹಾಗೆ ಮಾಡಿರೋ ಕೆಲಸವನ್ನೂ ಕಳಪೆಯಾಗಿ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯ ದುರಸ್ತಿ ಮಾಡಿ, ಕಾಮಗಾರಿ...