Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!

ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಇಂದು ಸಿಡಿದೆದ್ದಿದ್ದವು. ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಡಾ.ಅಂಬೇಡ್ಕರರಿಗೆ ಅವಮಾನ ಮಾಡಿರೋ ಹಿನ್ನೆಲೆಯಲ್ಲಿ ಆ ನ್ಯಾಯಾಧೀಶರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದ್ರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಾ ರವರ ಪ್ರತಿಕೃತಿ ದಹಿಸಿ ಆಕ್ರೊಶ ಹೊರಹಾಕಿದ್ರು. ಈ ವೇಳೆ ದಲಿತ ಸಂಘಟನೆಗಳು ತಾಲೂಕಿನ ಬಹುತೇಕ ಎಲ್ಲಾ ಮುಖಂಡರು ಹಾಜರಿದ್ದರು.

Post
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!

ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!

ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ...

Post
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!

ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!

ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ‌ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.

Post
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!

ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!

ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ‌. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...

Post
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!

ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!

ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.

Post
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!

ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!

ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ‌. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...

Post
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!

ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!

ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ‌. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...

Post
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!

ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!

ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ‌. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ‌..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ‌. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...

Post
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ‌. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...

Post
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!

ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!

ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ‌. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...

error: Content is protected !!