Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ವಡಗಟ್ಟಾ ಅಗಡಿ ರಸ್ತೆ ಬಂದ್; ಹುನಗುಂದ ರೈತರ ಗೋಳು ಕೇಳೋರ್ಯಾರು..?

ವಡಗಟ್ಟಾ ಅಗಡಿ ರಸ್ತೆ ಬಂದ್; ಹುನಗುಂದ ರೈತರ ಗೋಳು ಕೇಳೋರ್ಯಾರು..?

ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ವಡಗಟ್ಟಾ-ಅಗಡಿ ರಸ್ತೆ ಬಂದ್ ಆಗಿದೆ. ಮುಂಡಗೋಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಅನ್ನದಾತರ ಆಕ್ರೋಶದ ಕಟ್ಟೆಯೊಡೆದಿದೆ. ಆಗಿದ್ದೇನು..? ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ರೈತರು ಆಕ್ರೋಶಗೊಂಡಿದ್ದಾರೆ. ಈಗಾಗಲೇ ತಮ್ಮ ಗದ್ದೆಗಳಲ್ಲಿ ಬೀಜ ಬಿತ್ತಿ, ಇನ್ನೇನು ಮೊಳಕೆ ಒಡೆದು ಸಸಿಯಾಗುವ ಹಂತದಲ್ಲಿರುವಾಗಲೇ ಭಾರೀ ಮಳೆಯ ಕಾರಣಕ್ಕೆ ಇನ್ನಿಲ್ಲದ ಆತಂಕ ಶುರುವಾಗಿದೆ‌. ಅರಶಿಣಗೇರಿ ಕೆರೆ ಕಾಲುವೆ ಫುಲ್‌.! ಈ ಮದ್ಯೆ, ಅರಶಿಣಗೇರಿ ಕೆರೆಯಿಂದ ರೈತರ ಜಮೀನುಗಳಿಗೆ ಸಂಪರ್ಕಿಸೋ ಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ...

Post
ಮುಂಡಗೋಡ ತಾಲೂಕಿನಲ್ಲಿ ಮಳೆಯಿಂದ 12 ಮನೆಗಳಿಗೆ ಹಾನಿ..!

ಮುಂಡಗೋಡ ತಾಲೂಕಿನಲ್ಲಿ ಮಳೆಯಿಂದ 12 ಮನೆಗಳಿಗೆ ಹಾನಿ..!

ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಮಳೆ, ಗಾಳಿ ಅವಾಂತರ ತಂದಿಟ್ಟಿದೆ‌. ತಾಲೂಕಿನಲ್ಲಿ ಮಳೆ ಗಾಳಿಗೆ ಒಟ್ಟೂ 12 ಮನೆಗಳಿಗೆ ಹಾನಿಯಾಗಿದ್ದು ಸಂಕಷ್ಟ ತಂದೊಡ್ಡಿದೆ. ಮಳೆಯಿಂದ ಹಾನಿ ಎಲ್ಲೇಲ್ಲಿ..? ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 12 ಮನೆಗಳಿಗೆ ಮಳೆ, ಗಾಳಿಯಿಂದ ಹಾನಿಗೊಳಗಾಗಿದ್ದು, ಹುನಗುಂದ, ಹರಗನಳ್ಳಿ, ಭದ್ರಾಪುರ, ಶ್ಯಾನವಳ್ಳಿ, ಇಂದೂರು, ಗಣೇಶಪುರ, ಚಿಗಳ್ಳಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದೆ. ಇನ್ನು ಮುಂಡಗೋಡ ಪಟ್ಟಣ ಹಾಗೂ ಸನವಳ್ಳಿ ಗ್ರಾಮದಲ್ಲಿ ತಲಾ ಎರಡು ಮನೆಗಳು ಜಖಂಗೊಂಡಿವೆ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ‌...

Post
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..!  ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!

ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!

ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...

Post
ರಸ್ತೆಯ ಮದ್ಯೆ ಕಾಮಗಾರಿಯ ಗುಂಡಿ:  ಆ ಗ್ರಾಮಗಳಿಗೆ ತೆರಳಬೇಕೆಂದ್ರೆ ಕಷ್ಟ ಕಷ್ಟ..!! ಎಲ್ಲದು..?

ರಸ್ತೆಯ ಮದ್ಯೆ ಕಾಮಗಾರಿಯ ಗುಂಡಿ: ಆ ಗ್ರಾಮಗಳಿಗೆ ತೆರಳಬೇಕೆಂದ್ರೆ ಕಷ್ಟ ಕಷ್ಟ..!! ಎಲ್ಲದು..?

ಮುಂಡಗೋಡ:ತಾಲೂಕಿನ ಚೌಡಳ್ಳಿ, ಕ್ಯಾಸನಕೇರಿ ರಸ್ತೆಯಲ್ಲಿ ಅದ್ವಾನ ಶುರುವಾಗಿದೆ. ಚೌಡಳ್ಳಿ, ಕ್ಯಾಸನಕೇರಿ, ಮಲವಳ್ಳಿ, ಲಕ್ಕೊಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಅಧಿಕಾರಿಗಳ ನಿರ್ಲಕ್ಷದಿಂದ ಮಳೆಗಾಲದಲ್ಲಿ ಎದ್ದು ಬಿದ್ದು ಹೋಗುವ ಸ್ಥಿತಿಗೆ ತಂದಿಟ್ಟಿದೆ. ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ, ಮಲವಳ್ಳಿ, ಲಕ್ಕೊಳ್ಳಿ, ಕ್ಯಾಸನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆಯಲ್ಲಿ ನೀರಾವರಿ ಯೋಜನೆಗಾಗಿ ಕಾಮಗಾರಿ ಮಾಡಲಾಗಿತ್ತು. ಪೈಪಲೈನ್ ಅಳವಡಿಸಲು ರಸ್ತೆಯಲ್ಲೇ ಗುಂಡಿ ತೆಗೆದು ಪೈಪಲೈನ್ ಜೋಡಿಸಲಾಗಿದೆ‌. ಪೈಪ್ ಲೈನ್ ಕಾಮಗಾರಿ ಎಫೆಕ್ಟ್..! ಆದ್ರೆ ಹಾಗೆ ಗುಂಡಿ ತೋಡಿ, ಪೈಪುಗಳನ್ನು...

Post
ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!

ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!

ಮುಂಡಗೋಡ: ತಾಲೂಕಿನಾಧ್ಯಂತ ಮಳೆರಾಯನ ಅರ್ಭಟ ಜೋರಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು, ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಸನವಳ್ಳಿ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ಮನೆಯ ಮುಂದೆ ಶೆಡ್ ನಲ್ಲಿ ನಿಂತಿದ್ದ ಟ್ರಾಕ್ಟರ್ ಮೇಲೆ ಮನೆಯ ಮೇಲ್ಚಾವಣಿ ಕಿಸಿದು ಬಿದ್ದಿದೆ. ಪರಿಣಾಮ ಟ್ರಾಕ್ಟರ್ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸನವಳ್ಳಿಯ ಶಿವಾನಂದ್ ನಾಗಪ್ಪ ಕೇರಿಹೊಲದವರ ಎಂಬುವರಿಗೆ ಸೇರಿದ ಟ್ರಾಕ್ಟರ್ ಇದಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಬಂದು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ. ಸೂಕ್ತ...

Post
ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”

ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”

ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ...

Post
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!

ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!

ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ‌. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

error: Content is protected !!