Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಮುಂಡಗೋಡ: ತಾಲೂಕಿನ ಚೌಡಳ್ಳಿಯ ಹಲವು ಯುವಕರು ಸಿಡಿದು ನಿಂತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ, ಮಹಿಳಾ ಸದಸ್ಯರುಗಳ ಪತಿ, ಅಥವಾ ಸಂಬಂಧಿಕರೇ ದರ್ಬಾರು ನಡೆಸ್ತಿದಾರೆ ಅಂತಾ ಆರೋಪಿಸಿ ದೂರು ನೀಡಿದ್ದಾರೆ. ಯಸ್, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಪಂಚಾಯತ್ ಸದಸ್ಯರ ಪರವಾಗಿ, ಅವರ ಸಂಬಂಧಿಕರು ಹಾಗೂ ಮಹಿಳಾ ಸದಸ್ಯರ ಪತಿ, ಹೀಗೆ ಕುಟುಂಬಸ್ಥರು ಪಂಚಾಯತ್ ಕೆಲಸಕಾರ್ಯಗಳಲ್ಲಿ ತಾವು ಅವರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದನ್ನ ಖಂಡಿಸಿ ಗ್ರಾಮದ ವಿದ್ಯಾಧರ್ ಶಿವಾಜಿ...

Post
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನವಾಗಿದೆ‌. ಹಾರ್ಡವೇರ್ ಅಂಗಡಿಯ ಸೆಟರ್ಸ್ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಅಂಗಡಿಯಲ್ಲಿದ್ದ 15 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ರಸ್ತೆಯ ಪೆಟ್ರೊಲ್ ಬಂಕ್ ಪಕ್ಕದಲ್ಲೇ ಇರುವ ಹಾರ್ಡವೇರ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಹಾರ್ಡವೇರ್ ಅಂಗಡಿಯ ಕೌಂಟರಿನಲ್ಲಿದ್ದ 15 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಮುಂಡಗೋಡ ಪೊಲೀಸರು ಯಥಾರೀತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆಯಷ್ಟೇ ತಾಲೂಕಿನ ಮಳಗಿಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ...

Post
ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಅಂತಾ ತಿಳಿದು ಬಂದಿದೆ‌. ಇವತ್ತು ಗಾಂಧಿ ಜಯಂತಿ ಎಲ್ಲಿಯೂ ಮದ್ಯದ ಅಂಗಡಿಗಳನ್ನು ತೆರೆಯುವ ಹಾಗಿಲ್ಲ‌. ಆದ್ರೆ, ಅಗಡಿಯಲ್ಲಿ ಮಾತ್ರ ರಾಜಾರೋಶವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ, ಬಾತ್ಮಿ ತಿಳಿದು ಸ್ಥಳಕ್ಕೆ ಹೋಗಿದ್ದ ಪೊಲೀಸರಿಗೆ ಖಾತ್ರಿಯಾಗಿದೆ. ಮಾಲು ಸಮೇತ ಎಳೆದು ತಂದಿದ್ದಾರಂತೆ ಪೊಲೀಸ್ರು. ಹಾಗಂತ, ಮಾಹಿತಿಯಿದೆ, ಆದ್ರೆ, ಅಸಲು ಏನು ಅಂತಾ ಪೊಲೀಸರೇ ಹೇಳಬೇಕಿದೆ‌. ಅಷ್ಟಕ್ಕೂ ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಇರೋ ಈ...

Post
ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮುಂಡಗೋಡ: ಮಳಗಿಯಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿದ್ದಾರೆ‌. ಇಲ್ಲಿ‌ನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು, ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ‌. ತಿಂಗಳಲ್ಲೇ ಇದು ಮಳಗಿಯಲ್ಲಿ ಮೂರನೇ ಕಳ್ಳತನದ ಪ್ರಕರಣವಾಗಿದೆ‌. ಹೀಗಾಗಿ, ಮಳಗಿಯಲ್ಲೇ ಠಾಣೆ ಇದ್ದರೂ ಅಲ್ಲಿನ ಪೊಲೀಸರು ಅದೇನು ಮಾಡ್ತಿದಾರೆ..? ಅನ್ನೋ ಪ್ರಶ್ನೆ ಎದುರಾಗಿದೆ‌. ನಿನ್ನೆ ತಡರಾತ್ರಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಹಿಂಬದಿಯ ಸೆಟರ್ಸ್ ಮುರಿದು ಒಳ ನುಗ್ಗಿರೋ ಕಳ್ಳರು, ಎಲ್ಲೆಂದರಲ್ಲಿ ತಡಕಾಡಿದ್ದಾರೆ. ಆದ್ರೆ, ಅದೃಷ್ಟವಶಾತ್...

Post
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?

ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?

ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....

Post
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!

ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...

Post
ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!

ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!

ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ. ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ...

Post
ಮುಂಡಗೋಡಿನಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಯ್ತು ಭಾರತ್ ಬಂದ್..! ಎಂದಿನಂತೆ ಸಹಜ, ಸಹಜ..!!

ಮುಂಡಗೋಡಿನಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಯ್ತು ಭಾರತ್ ಬಂದ್..! ಎಂದಿನಂತೆ ಸಹಜ, ಸಹಜ..!!

ಮುಂಡಗೋಡ: ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್, ಮುಂಡಗೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು. ಬಿಟ್ಟರೆ, ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇತ್ತು. ಇಂದು ಬೆಳಗಿನಿಂದಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಓಪನ್ ಆಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಪ್ರಾರಂಭವಾಗಿತ್ತು. ಆಟೋ, ಬಸ್ ಗಳು ಎಂದಿನಂತೆ ರಸ್ತೆಗಿಳಿದಿದ್ದವು. ಆದ್ರೆ, ಇಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ...

Post
ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!

ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!

ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.

Post
ನಂದಿಕಟ್ಟಾ ಪಿಡಿಓ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಪಂ ನೌಕರರ ಒತ್ತಾಯ..!

ನಂದಿಕಟ್ಟಾ ಪಿಡಿಓ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಪಂ ನೌಕರರ ಒತ್ತಾಯ..!

ಮುಂಡಗೋಡ: ಪಂಚಾಯತ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಲಮಾಣಿಯವರ ಮೇಲೆ ದೈಹಿಕ ಹಲ್ಲೆ ನಡೆಸಿದವರ ಮೇಲೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಪಂಚಾಯತಿ ಪಿಡಿಓಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮನವಿ ಅರ್ಪಿಸಿದ್ರು. ನಂದಿಕಟ್ಟಾ ಗ್ರಾಮ ಪಂಚಾಯತ ಪಿಡಿಓ ವೆಂಕಪ್ಪ ಕೆ.ಲಮಾಣಿ ರವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗೌಸುಸಾಬ ಮೌಲಾಲಿ ಯಳ್ಳುರ ಎಂಬುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅಪರಾಧಿಗೆ ತಕ್ಕೆ ಶಿಕ್ಷೆಯಾಗಬೇಕು...

error: Content is protected !!