ಮುಂಡಗೋಡ: ಪಟ್ಟಣದಲ್ಲಿ ಅದ್ಯಾಕೋ ಏನೋ ಕಳ್ಳರ ಕೈಚಳಕಗಳು ಕಡಿಮೆಯೇ ಆಗುತ್ತಿಲ್ಲ. ಪಟ್ಟಣದ ವೈನ್ ಶಾಪ್ ಕಳ್ಳತನ ನಡೆದು ಇನ್ನೂ ತಿಂಗಳಾಗಿಲ್ಲ, ಈಗ ಮತ್ತೆ ಮೊಬೈಲ್ ಅಂಗಡಿಯೊಂದಕ್ಕೆ ಖದೀಮರು ಕನ್ನ ಹಾಕಿದ್ದಾರೆ. ನಿನ್ನೆ ರಾತ್ರಿ, ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರೋ ಶ್ರೀಧರ್ ಉಪ್ಪಾರ್ ಎಂಬುವವರ “ಶ್ರೀ ಮೊಬೈಲ್” ಶಾಪ್ ನ ಮೇಲ್ಚಾವಣಿ ತೆಗೆದ ಒಳನುಗ್ಗಿರೋ ಕಳ್ಳರು ಬೆಲೆಬಾಳುವ ಮೊಬೈಲ್ ಸೇರಿ ಹಲವು ವಸ್ತುಗಳನ್ನು ಎಗರಿಸಿದ್ದಾರೆ ಅಂತಾ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಳ್ಳತನವಾದ ವಸ್ತುಗಳ ಅಸಲೀ ಮೌಲ್ಯ ಎಷ್ಟು,...
Top Stories
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್ಲೈನ್ ಅರ್ಜಿ ಆಹ್ವಾನ..!
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
Category: ಮುಂಡಗೋಡ ಸುದ್ದಿ
ಮಾಜಿ ಪೊಲೀಸಪ್ಪನ ವಂಚಕ ಪುರಾಣ; ಬಗೆದಷ್ಟು ಬಯಲಾಗತ್ತೆ “ಪೀಕಾ”ಯಣ..! ಅಷ್ಟಕ್ಕೂ, ಆತನ ಅಸಲಿ ಕಹಾನಿ ಏನು ಗೊತ್ತಾ..?
ಖಾಕಿ ಪಡೆಯಲ್ಲೂ ಇನ್ನಿಲ್ಲದ ಎತ್ತುವಳಿ ಶೂರರಿದ್ದಾರೆ, ಅವ್ರಿಂದ ಹುಶಾರಾಗಿರಿ ಅಂತಾ ಉತ್ತರ ಕನ್ನಡ ಎಸ್ಪಿ ಪ್ರಕಾಶ ದೇವರಾಜು ಇತ್ತಿಚೇಗಷ್ಟೇ ಖಡಕ್ಕಾಗಿ ಹೇಳಿದ್ರು. ಅಲ್ದೇ ಹಿರಿಯ ಅಧಿಕಾರಿಗಳ ಹೆಸ್ರಲ್ಲಿ ದುಡ್ಡು ಪೀಕೊ ಕೆಲ ಪೊಲೀಸರು, ವಂಚಕರು ದಂಧೆಗೆ ಇಳಿದಿದ್ದಾರೆ. ಅಂತವರಿಗೆ ಯಾರೂ ಬಿಡಿಗಾಸೂ ಕೊಡಬೇಡಿ, ಹಾಗೇನಾದ್ರೂ ಕೇಳಿದ್ರೆ ನೇರವಾಗಿ ನಂಗೆ ಕಂಪ್ಲೇಂಟ್ ಕೊಡಿ ಅಂತಾ ಖಡಕ್ಕಾದ ಮಾತು ಹೇಳಿದ್ರು. ಹಾಗಾದ್ರೆ, ಅವ್ರು ಇಂತವರನ್ನ ನೋಡಿಯೇ ಹೇಳಿದ್ರಾ..? ಗೊತ್ತಿಲ್ಲ. ಹಾಗಾದ್ರೆ, ಎಸ್ಪಿ ಸಾಹೇಬ್ರು ಹೇಳಿದ್ದಾದ್ರೂ ಏನು ಒಮ್ಮೆ ಕೇಳಿ, ಆಮೇಲೆ...
ಅಗಡಿಯ “ಮೈಲಾರಿ”ಗೆ ಹುಟ್ಟುಹಬ್ಬದ ಸಂಭ್ರಮ..! ಹಾಗಾದ್ರೆ ಯಾರು ಈ ಮೈಲಾರಿ..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ನಿಂಗಪ್ಪ ಬರಮಪ್ಪ ತಳವಾರ ಎಂಬುವವರು ತಾವು ಮುದ್ದಿನಿಂದ ಸಾಕಿದ ಹೋರಿಗೆ ಹುಟ್ಟು ಹಬ್ಬ ಆಚರಿಸಿ ಸಂಭ್ರಮಿಸಿದ್ರು. ತಮ್ಮ ಮನೆಯ ಮುದ್ದಿನ ಮಗನ ಹಾಗೆ ಸಾಕಿದ ಮೈಲಾರಿ ಎಂಬ ಹೋರಿಗೆ ನಾಲ್ಕನೇ ವರ್ಷದ ಹುಟ್ಟು ಹಬ್ಬ ಆಚರಿಸಿದ್ರು. ಅಂದಹಾಗೆ, ಮೈಲಾರಿ ಅನ್ನೋ ಹೋರಿ ಈಗಾಗಲೇ ನಾಲ್ಕೈದು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದೆ. ತಮ್ಮ ಮನೆಯಲ್ಲೆ ಹುಟ್ಟಿ ಬೆಳೆದ ಹೋರಿಗೆ ಇಡೀ ಮನೆಯ ಮಂದಿ ತಮ್ಮ ಮನೆಮಗನ ಹಾಗೇ ಮುದ್ದು ಮಾಡುತ್ತಾರೆ. ಪ್ರೀತಿಯಿಂದ ತುತ್ತು...
ಹುನಗುಂದ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ..!
ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದ ವಿಠಲ ರುಕ್ಮಿಣಿ ಹರಿಮಂದಿರದಲ್ಲಿ ರವಿವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 29-8-2021 ರಂದು ರವಿವಾರ ದಿವಸ ಬೆಳಿಗ್ಗೆ 10-00 ಘಂಟೆಗೆ ವಿಠ್ಹಲ ರುಕ್ಮಿಣಿ ಹರಿ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣನನ್ನು ತೊಟ್ಟಿಲು ಹಾಕುವ ಕಾರ್ಯಕ್ರಮ ಇರುತ್ತದೆ. ಮಧ್ಯಾನ ಪ್ರಸಾಧ ವ್ಯವಸ್ಥೆ ಇರುವದರಿಂದ ಎಲ್ಲಾ ಭಕ್ತಾದಿಗಳು ಭಾಗವಹಿಸಬೇಕೆಂದು ಪಾಂಡುರಂಗ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.
ಆಲಳ್ಳಿಯಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಗಾಯ..!
ಮುಂಡಗೋಡ : ತಾಲೂಕಿನ ಆಲಳ್ಳಿ ಗ್ರಾಮದ ಕಾಡಿನಲ್ಲಿ ಅಣಬೆ ಕೀಳಲು ಹೋದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದ ಘಟನೆ ನಡೆದಿದೆ. ಇಂದು ನಸುಕಿನ ಜಾವ ಆಲಳ್ಳಿ ಗ್ರಾಮದ ಧರ್ಮಣ್ಣ ಖಂಡೋಜಿ ಹಾಗೂ ಸಂಗಡಿಗರು ಸೇರಿ ಆಲಳ್ಳಿ ಅರಣ್ಯದಲ್ಲಿ ಅಣಬೆ ಕೀಳಲು ಹೋದಾಗ ಧರ್ಮಣ್ಣನ ಮೇಲೆ ಕರಡಿ ದಾಳಿ ಮಾಡಿದೆ ಅಂತಾ ತಿಳಿದು ಬಂದಿದೆ. ಅರಣ್ಯದಂಚಿನಲ್ಲಿರುವ ಗೋವಿನಜೋಳ ಹೊಲಕ್ಕೆ ಹೋದ ಸಂದರ್ಭದಲ್ಲಿ ಮಂಗಗಳನ್ನು ಓಡಿಸಲು ಹೋದಾಗ ಕರಡಿ ದಾಳಿ ಮಾಡಿದೆ. ಕರಡಿಯ ಜೊತೆ ಎರಡು ಮರಿಗಳಿದ್ದವು. ಜೋರಾಗಿ...
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!
ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...
ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!
ಮುಂಡಗೋಡ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ನಿಮಿತ್ತ ಹಿರಿಯ ನಾಗರಿಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ, ತಾಲೂಕಾಧ್ಯಕ್ಷೆ ಲೈಸಾ ಥಾಮಸ್, ಪ್ರದಾನ ಕಾರ್ಯದರ್ಶಿ ಅಂಜು ಪಾಯಣ್ಣವರ, ಉಪಾಧ್ಯಕ್ಷೆ ಸರಸ್ವತಿ ಕೊಂಡ್ಲಿ, ಮತ್ತು ಸವಿತಾ ಸಾನು ಸೇರಿ ಹಲವರು ಹಾಜರಿದ್ದರು.
ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!
ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು. ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ...
ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ಹತ್ತಿರ ವಿರುವ ರಾಮಣ್ಣ ಕುನ್ನೂರ ಅವರ ಹಿತ್ತಲಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿತ್ತು. ಹೀಗಾಗಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಕರೆ ಮಾಡಿದ್ರು. ನಂತರ ಬಂದ ಅರಣ್ಯ ಸಿಬ್ಬಂದಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದ್ರು. ನಂತರ ಸೆರೆಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿನಲ್ಲಿ ಬಿಡಲಾಯಿತು.. ಹೀಗಾಗಿ, ಅಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.